Get Updates
Get notified of breaking news, exclusive insights, and must-see stories!

ಸಂಸತ್ ಭವನ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದೇನು?

ಮೇ 28 ರಂದು ದೆಹಲಿಯಲ್ಲಿ ನಿರ್ಮಿಸಲಾದ ಸಂಸತ್ ಭವನದ ಭವ್ಯ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನವನ್ನು ಉದ್ಘಾಟಿಸಲಿದ್ದು, ನೂತನ ಸಂಸತ್ ಭವನವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಪ್ರಧಾನಿ ಮೋದಿ ಉದ್ಘಾಟನೆ ಮಾಡುತ್ತಿರುವುದರಿಂದ ಕಾಂಗ್ರೆಸ್ ಸೇರಿದಂತೆ 19 ವಿರೋಧ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ. ಪ್ರಧಾನಿ ಮೋದಿ ಬದಲಿಗೆ, ದೇಶದ ಅಗ್ರಸ್ಥಾನದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ ಭವನವನ್ನು ಉದ್ಘಾಟಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

inauguration of Parliament House

ಮತ್ತೊಂದೆಡೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಸಮಾರಂಭವನ್ನು ಬಹಿಷ್ಕರಿಸುತ್ತಿರುವುದಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿಪಕ್ಷಗಳ ಈ ವರ್ತನೆ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ. ಅದನ್ನು ದೇಶ ಯಾವುದೇ ಸಂದರ್ಭದಲ್ಲೂ ಒಪ್ಪಿಕೊಳ್ಳುವುದಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

ಈ ಐತಿಹಾಸಿಕ ಸಂದರ್ಭವನ್ನು ಘನತೆ ಮತ್ತು ಹೆಮ್ಮೆಯ ಕ್ಷಣವನ್ನಾಗಿ ಮಾಡುವ ಬದಲು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಹೇಳಿಕೆಗಳನ್ನು ನೀಡುತ್ತಿವೆ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಇದು ದುರದೃಷ್ಟಕರ ಮತ್ತು ಬೇಜವಾಬ್ದಾರಿಯಾಗಿದೆ. ಇದು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ. ಅದನ್ನು ದೇಶ ಯಾವುದೇ ಸಂದರ್ಭದಲ್ಲೂ ಒಪ್ಪಿಕೊಳ್ಳುವುದಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

ದೇವೇಂದ್ರ ಫಂಡವೀಸ್ ಹೇಳಿದರು - ಇಂದಿರಾಗಾಂಧಿ ಉದ್ಘಾಟಿಸಿದಾಗ...

ಸಂಸತ್ ಕಲಾಪವನ್ನು ಬಹಿಷ್ಕರಿಸುತ್ತಿರುವ ಕಾಂಗ್ರೆಸ್ ಸೇರಿದಂತೆ ಪಕ್ಷಗಳಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಇದು ಕೇವಲ ಸಂಸತ್ ಭವನವಲ್ಲ, 140 ಕೋಟಿ ಜನರ ನಂಬಿಕೆಯ ದೇಗುಲ ಮತ್ತು ನವ ಭಾರತದ ಶಕ್ತಿಯ ಸಂಕೇತವಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು. ರಾಷ್ಟ್ರಪತಿಗಳೇ ಉದ್ಘಾಟನೆ ಮಾಡಲಿ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹೇಳುತ್ತಾರೆ, ಹಾಗಾದರೆ ಇಂದಿರಾಗಾಂಧಿ ಸಂಸತ್ತಿನ ಅನೆಕ್ಸ್ ಅನ್ನು ಉದ್ಘಾಟಿಸಿದಾಗ ಅದು ಏಕೆ ಬರಲಿಲ್ಲ? ಎಂದು ಪ್ರಶ್ನೆ ಮಾಡಿದ್ದಾರೆ.

inauguration of Parliament House

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸಲು 19 ವಿರೋಧ ಪಕ್ಷಗಳು ನಿರ್ಣಯ ಕೈಗೊಂಡಿವೆ. ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನವನ್ನು ಉದ್ಘಾಟನೆ ಮಾಡುವ ಕಾರ್ಯಕ್ರಮ ಆಯೋಜಿಸಿದ್ದು, ಅದರಿಂದ ದೂರ ಉಳಿಯುವ ಮೂಲಕ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಲು ವಿಪಕ್ಷಗಳು ಜತೆಗೂಡಿ ತೀರ್ಮಾನಿಸಿವೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಮೊದಲು ತೆಗೆದುಕೊಂಡ ನಡೆಯನ್ನು ಅನೇಕ ಪ್ರಮುಖ ಪಕ್ಷಗಳು ಅನುಸರಿಸಿವೆ. ಇದಕ್ಕೆ ಕಾಂಗ್ರೆಸ್ ಕೂಡ ಕೈಜೋಡಿಸಿದೆ. ಸಂಸತ್ ಕಟ್ಟಡ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ 19 ಪಕ್ಷಗಳು ಜಂಟಿ ಹೇಳಿಕೆ ನೀಡಿವೆ.

ಯಾವ ಪಕ್ಷಗಳಿಂದ ಬಹಿಷ್ಕಾರ

ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಎಎಪಿ, ಶಿವಸೇನಾ (ಯುಬಿಟಿ), ಸಮಾಜವಾದಿ ಪಕ್ಷ (ಎಸ್‌ಪಿ), ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ), ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕೇರಳ ಕಾಂಗ್ರೆಸ್ (ಮಣಿ), ವಿಡುತ್ತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ರಾಷ್ಟ್ರೀಯ ಲೋಕ ದಳ (ಆರ್‌ಜೆಡಿ), ಜೆಡಿಯು, ಎನ್‌ಸಿಪಿ, ಸಿಪಿಎಂ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ನ್ಯಾಷನಲ್ ಕಾನ್ಫರೆನ್ಸ್, ರೆವೊಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ (ಆರ್‌ಎಸ್‌ಪಿ) ಮತ್ತು ಎಂಡಿಎಂಕೆ ಕಾರ್ಯಕ್ರಮ ಬಹಿಷ್ಕರಿಸಿದ 19 ವಿಪಕ್ಷಗಳಾಗಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+