ಮೋದಿಯನ್ನು ಇವಾಂಕಾ ಹೊಗಳಿದ್ದಕ್ಕೆ ಕಾಂಗ್ರೆಸ್ ಕಣ್ಣು ಕೆಂಪು
Recommended Video

ನವದೆಹಲಿ, ನವೆಂಬರ್ 29 : "ಇವಾಂಕಾ ಟ್ರಂಪ್ ಅವರು ಭಾಗವಹಿಸುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆ ಉನ್ನತ ಸ್ಥಾನಕ್ಕೆ ಅಗೌರವ ತಂದಿದ್ದಾರೆ" ಎಂದು ಕಾಂಗ್ರೆಸ್ ಧುರೀಣ ಆನಂದ್ ಶರ್ಮಾ ಅವರು ಟೀಕಿಸಿದ್ದಾರೆ.
ಆ ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಇದ್ದರು. ಇದರಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸುವ ಅಗತ್ಯವೇನಿತ್ತು. ಅವರಿಗೆ ಹೊರಗಿನವರಿಂದ ಮತ್ತು ವಿದೇಶಿ ರೇಟಿಂಗ್ ಸಂಸ್ಥೆಗಳಿಂದ ಸರ್ಟಿಫಿಕೇಟ್ ಪಡೆದುಕೊಳ್ಳುವ ಅವಶ್ಯಕತೆಯೇನಿದೆ ಎಂದು ಅವರು ವಂಗ್ಯವಾಡಿದ್ದಾರೆ.
ಚಾಯ್ ವಾಲಾನಿಂದ ಪ್ರಧಾನ ಮಂತ್ರಿಯವರೆಗೆ ನರೇಂದ್ರ ಮೋದಿಯವರ ಪಯಣ ಅಮೋಘವಾಗಿದೆ. ಅವರ ಅಡಿಯಲ್ಲಿ ಭಾರತದ ಆರ್ಥಿಕ ಸ್ಥಿತಿ ಸದೃಢವಾಗಿದೆ. ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಟ್ರಂಪ್ ಅಡಿಯಲ್ಲಿ ಎರಡೂ ದೇಶಗಳ ಬಾಂಧವ್ಯ ಗಾಢವಾಗಿರುತ್ತದೆ ಎಂದು ಟ್ರಂಪ್ ಮಗಳು ಇವಾಂಕಾ ಶ್ಲಾಘಿಸಿದ್ದರು.
ಈ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಟೀಕಾಸ್ತ್ರವನ್ನು ನರೇಂದ್ರ ಮೋದಿ ಮೇಲೆ ಎಸೆದಿದ್ದಾರೆ. ಅವರು ಅವರಿವರಿಂದ ಪ್ರಮಾಣಪತ್ರಗಳನ್ನು ಪಡೆದುಕೊಳ್ಳುವ ಬದಲು ಅವರ ತವರು ರಾಜ್ಯವಾದ ಗುಜರಾತ್ ನ ಜನರಿಂದ ಪಡೆದುಕೊಳ್ಳಲಿ ಎಂದು ಅವರು ಮೋದಿಗೆ ಸವಾಲು ಹಾಕಿದ್ದಾರೆ.

ಮೋದಿಯನ್ನು ಹಾಡಿ ಹೊಗಳಿದ್ದ ಇವಾಂಕಾ
ಹೈದರಾಬಾದ್ ನಲ್ಲಿ ನಡೆಯಲಿರುವ ಮೂರು ದಿನಗಳ ಜಾಗತಿಕ ಉದ್ಯಮಶೀಲತಾ ಶೃಂಗಸಭೆಯನ್ನು ನರೇಂದ್ರ ಮೋದಿಯವರು ಇವಾಂಕಾ ಟ್ರಂಪ್ ಜೊತೆ ಉದ್ಘಾಟಿಸಿದ್ದರು. ಈ ಸಂದರ್ಭದಲ್ಲಿ ಮೋದಿಯವರನ್ನು ಇವಾಂಕಾ ಅವರು ಹಾಡಿ ಹೊಗಳಿದ್ದರು. ಇದು ಈಗ ಕಾಂಗ್ರೆಸ್ ಕಣ್ಣು ಕೆಂಪಾಗುವಂತೆ ಮಾಡಿದೆ.

ಶರ್ಮಾ ಟೀಕೆಗೆ ಟ್ವಿಟ್ಟಿಗರ ಪ್ರತಿಟೀಕೆಗಳು
ಆನಂದ್ ಶರ್ಮಾ ಅವರು ಮಾಡಿರುವ ಟೀಕೆಗೆ ಪ್ರತಿಟೀಕೆಗಳು ಕೂಡ ಬಂದಿವೆ. ಯಾವ ದೇಶದಿಂದ ಆನಂದ್ ಸಿಂಗ್ ಎಂಬುವವರನ್ನು ಕಾಂಗ್ರೆಸ್ ಆಮದು ಮಾಡಿಕೊಂಡಿದೆ, ಯಾರಿಗಾದರೂ ಐಡಿಯಾ ಇದೆಯಾ ಎಂದು ಬಿಕಾಶ್ ಕುಮಾರ್ ಎಂಬುವವರು ವಂಗ್ಯವಾಡಿದ್ದಾರೆ.

ಇಡೀ ಕಾಂಗ್ರೆಸ್ ಸಿಕ್ಕಾಪಟ್ಟೆ ಇಂಟೆಲಿಜೆಂಟ್
ಈ ಕಾರಣಕ್ಕಾಗಿಯೇ ಜವಾಹರಲಾಲ್ ನೆಹರೂ ಅವರು ವಿಶ್ವಸಂಸ್ಥೆಯ ಸೀಟಿಗಾಗಿ ದುಂಬಾಲು ಬೀಳಲಿಲ್ಲ. ಅವರಿಗೆ ಯಾವುದೇ ವಿದೇಶಿ ಸಂಸ್ಥೆಯಿಂದ ಸರ್ಟಿಫಿಕೇಟ್ ಬೇಕಾಗಿಲ್ಲ. ನೆಹರೂ ಅವರಂತೆಯೇ ಇಡೀ ಕಾಂಗ್ರೆಸ್ ಪಾರ್ಟಿ ಸಿಕ್ಕಾಪಟ್ಟೆ ಬುದ್ಧಿವಂತಿಕೆಯಿಂದ ಕೂಡಿದೆ ಎಂದು ಬಿನಯ್ ಎಂಬುವವರು ಕುಹಕವಾಡಿದ್ದಾರೆ.

ಗುಜರಾತಿ ಜನರೇ ಡಿ.18ರಂದು ಸರ್ಟಿಫಿಕೇಟ್ ನೀಡಲಿದ್ದಾರೆ
ಡಿಸೆಂಬರ್ 18ನೇ ತಾರೀಖಿನಂದು ಗುಜರಾತಿಗಳಿಂದ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿಯವರಿಗೆ ಸರ್ಟಿಫಿಕೇಟ್ ನೀಡಲಾಗುತ್ತದೆ ಎಂದು ಅಮಿತ್ ಎಂಬುವವರು ಮಾರ್ಮಿಕವಾಗಿ ನುಡಿದಿದ್ದಾರೆ. ಗುಜರಾತ್ ನಲ್ಲಿ ಡಿಸೆಂಬರ್ 9 ಮತ್ತು 14ರಂದು ವಿಧಾನಸಭೆಗೆ ಮತದಾನ ನಡೆಯಲಿದ್ದು, ಡಿಸೆಂಬರ್ 18ರಂದು ಫಲಿತಾಂಶ ಹೊರಬೀಳಲಿದೆ.

ಈಗ ಬರ್ನಾಲ್ ಹಚ್ಚಿಕೊಳ್ಳುವ ಸಮಯ
ಕಾಂಗ್ರೆಸ್ ನವರು ಈಗ ಬರ್ನಾಲ್ ಹಚ್ಚಿಕೊಳ್ಳುವ ಸಮಯ. ಈಗ ಮಾತ್ರವಲ್ಲ ಮುಂದೆ 2019ರಲ್ಲಿ ಕೂಡ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆಗೆ ಕೂಡದೆ ಬೇರೆ ದಾರಿಯಿಲ್ಲ. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಈ ರೀತಿ ಮಾತನಾಡಲು ನಿಮಗೆ ನಾಚಿಕೆ ಬರಬೇಕು ಎಂದು ಮತ್ತೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Rashmika Mandanna: ಪುಟ್ಟ ಅಭಿಮಾನಿಗೆ ಮನೆಯಲ್ಲೇ ಭರ್ಜರಿ ಔತಣ: ಕೊಟ್ಟ ಮಾತಿನಂತೆ ನಡೆದುಕೊಂಡ ರಶ್ಮಿಕಾ-ವಿಜಯ್ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications