Get Updates
Get notified of breaking news, exclusive insights, and must-see stories!

Ram Mandir Inauguration: ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲ್ಲ ಎಂದ ಕಾಂಗ್ರೆಸ್

ಅಯೋಧ್ಯೆ ರಾಮ ಮಂದಿರದ ಬೃಹತ್ ಉದ್ಘಾಟನಾ ಸಮಾರಂಭವನ್ನು ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ "ರಾಜಕೀಯ ಯೋಜನೆ" ಎಂದು ಹೇಳಿರುವ ಕಾಂಗ್ರೆಸ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದೆ.

ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಪಕ್ಷದ ಲೋಕಸಭಾ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಮ ಮಂದಿರ ಉದ್ಘಾಟನಾ ಆಹ್ವಾನವನ್ನು ನಿರಾಕರಿಸಿದ್ದಾರೆ ಎಂದು ಪಕ್ಷ ಹೇಳಿದೆ.

Congress Declines Ram Temple Event Invitation, Citing Religion as a Personal Matter

ಧರ್ಮವು ವೈಯಕ್ತಿಕ ವಿಷಯವಾಗಿದೆ. ಆದರೆ ಆರೆಸ್ಸೆಸ್/ಬಿಜೆಪಿಯು ಅಯೋಧ್ಯೆಯಲ್ಲಿ ದೇವಾಲಯದ ರಾಜಕೀಯ ಯೋಜನೆಯನ್ನು ಬಹಳ ಹಿಂದಿನಿಂದಲೂ ಮಾಡುತ್ತಿದೆ. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಂದ ಅಪೂರ್ಣ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಮಾಡಲಾಗುತ್ತಿದೆ ಎಂದು ಪಕ್ಷದ ಹಿರಿಯ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ.

ಜನರ ಭಾವನೆ ಗೌರವಿಸುತ್ತೇವೆ

2019 ರ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧವಾಗಿರುವಾಗ ಮತ್ತು ಭಗವಾನ್ ರಾಮನನ್ನು ಪೂಜಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುವ ಸಂದರ್ಭದಲ್ಲಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಸ್ಪಷ್ಟವಾಗಿ ಆರ್ ಎಸ್ಎಸ್ / ಬಿಜೆಪಿ ಕಾರ್ಯಕ್ರಮಕ್ಕೆ ಆಹ್ವಾನವನ್ನು ಗೌರವದಿಂದ ತಿರಸ್ಕರಿಸಿದ್ದಾರೆ" ಎಂದು ಅವರು ಹೇಳಿದ್ದಾರೆ.

ರಾಮ ಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಭಾಗಿಯಾಗದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಇದೇ ಪ್ರಮುಕ ವಿಷಯವಾಗುವ ಸಾಧ್ಯತೆ ಇದೆ. ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಅಲ್ಪಸಂಖ್ಯಾತರ ಭಾವನೆಗಳಿಗೆ ಆಟವಾಡುತ್ತಿದೆ ಎಂದು ಆರೋಪಿಸುವ ಬಿಜೆಪಿ ಚುನಾವಣೆಗೆ ಮುನ್ನ ಅಸ್ತ್ರ ಸಿಕ್ಕಿದೆ ಎಂದು ಹೇಳಲಾಗಿದೆ.

ಎಡಪಕ್ಷಗಳು ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ರಾಮ ಮಂದಿರ ಉದ್ಘಾಟನೆಯಲ್ಲಿ ಗೈರಾಗುವ ಮೂಲಕ ಬಿಜೆಪಿಗೆ ಅಸ್ತ್ರವನ್ನು ಕೊಟ್ಟಂತಾಗಿದೆ. ಸಮಾಜವಾದಿ ಪಕ್ಷವು ಈ ವಿಚಾರದಲ್ಲಿ ಅನಿರ್ದಿಷ್ಟವಾಗಿದೆ. ವಿಶ್ವ ಹಿಂದೂ ಪರಿಷತ್‌ನ ಆಹ್ವಾನವನ್ನು ಪಕ್ಷವು ತಿರಸ್ಕರಿಸಿದೆ, ಅದರ ಶಾಸಕರು ಹೋಗಲು ಉತ್ಸುಕರಾಗಿದ್ದಾರೆ. ಶರದ್ ಪವಾರ್ ಅವರು ಆಹ್ವಾನದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಜ. 22ರಂದು ದೇವಾಲಯ ಉದ್ಘಾಟನೆ

ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ರಾಜಕೀಯ ಮುಖಂಡರು, ಕೈಗಾರಿಕೋದ್ಯಮಿಗಳು, ನಟರು ಮತ್ತು ಇತರ ಪ್ರಮುಖ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನೆ ಮತ್ತು ಪ್ರದೇಶದಲ್ಲಿ ಪುನರಾಭಿವೃದ್ಧಿಗೊಂಡ ರೈಲು ನಿಲ್ದಾಣ ಗಮನ ಸೆಳೆಯುತ್ತಿದೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಸಜ್ಜಾಗುತ್ತಿದೆ. ಮಂದಿರ ಉದ್ಘಾಟನೆ ಸಮಯದಲ್ಲಿ ಉತ್ತರ ಪ್ರದೇಶದಾದ್ಯಂತ ಶಾಲೆಗಳು ಮತ್ತು ಕಾಲೇಜುಗಳು ಮುಚ್ಚಲ್ಪಡುತ್ತವೆ. ಈ ಕಾರ್ಯಕ್ರಮವು ದೇಶಾದ್ಯಂತ ಮತ್ತು ವಿದೇಶಗಳಲ್ಲಿ ಅನೇಕ ಸ್ಥಳಗಳಲ್ಲಿ ನೇರ ಪ್ರಸಾರವಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+