Manipur: ಮಣಿಪುರ ಹಿಂಸಾಚಾರ ಕುರಿತು ತನಿಖೆಗೆ ಕೋರಿದ ಮಲ್ಲಿಕಾರ್ಜುನ ಖರ್ಗೆ ನಿಯೋಗ
ನವದೆಹಲಿ, ಮೇ. 31: ಪ್ರತಿ ದಿನ ಮಣಿಪುಡದಲ್ಲಿ ಹಿಂಸಾಚಾರ ಹೆಚ್ಚಾಗುತ್ತಲೆ ಇದೆ. ಹೀಗಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಎಂಟು ಸದಸ್ಯರ ನಿಯೋಗದ ನೇತೃತ್ವದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಮಧ್ಯಪ್ರವೇಶಿಸುವಂತೆ ಕೋರಿದ್ದಾರೆ.
ರಾಷ್ಟ್ರಪತಿಗಳಿಗೆ ಸಲ್ಲಿಸಿದ ಜ್ಞಾಪನಾ ಪತ್ರದಲ್ಲಿ, ಪ್ರಧಾನ ವಿರೋಧ ಪಕ್ಷವು ಹಿಂಸಾಚಾರದ ತನಿಖೆಗಾಗಿ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದ ಉನ್ನತ ಮಟ್ಟದ ತನಿಖಾ ಆಯೋಗವನ್ನು ರಚಿಸುವಂತೆ ಒತ್ತಾಯಿಸಿದೆ. ರಾಜ್ಯದಲ್ಲಿ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ತೆಸಹಾಯ ಮಾಡಲು 12 ಅಂಶಗಳ ಚಾರ್ಟರ್ ಅನ್ನು ಮುಂದಿಟ್ಟಿದೆ.

ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಎಂಟು ಸದಸ್ಯರ ನಿಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಇಬೋಬಿ ಸಿಂಗ್, ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್, ಮಾಜಿ ಉಪಮುಖ್ಯಮಂತ್ರಿ ಗೈಖಾಂಗಮ್ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೇಶಾಮ್ ಮೇಘಚಂದ್ರ ಸಿಂಗ್, ಮಣಿಪುರದ ಎಐಸಿಸಿ ಉಸ್ತುವಾರಿ ಭಕ್ತ ಚರಣ್ ದಾಸ್ ಇದ್ದರು.
"ಹಿಂಸಾಚಾರದ ಆರಂಭಿಕ ಹಂತಗಳಲ್ಲಿ ಪರಿಸ್ಥಿತಿಯ ನಿರ್ವಹಣೆಯಲ್ಲಿ ಹಲವಾರು ಲೋಪಗಳಿದ್ದರೂ, ಪ್ರಸ್ತುತ ಬಿಕ್ಕಟ್ಟಿಗೆ ಕಾರಣವಾಯಿತು. ಈಗ ಬೆರಳು ತೋರಿಸಲು ಸಮಯವಲ್ಲ, ಆದರೆ ಕಾರ್ಯನಿರ್ವಹಿಸಬೇಕು. ಮೇಲಿನ ಸಲಹೆಗಳನ್ನು ಶ್ರದ್ಧೆಯಿಂದ ಕಾರ್ಯಗತಗೊಳಿಸಿದರೆ, ಬಹುಶಃ ಮತ್ತೊಮ್ಮೆ ಶಾಂತಿಯನ್ನು ಪುನಃಸ್ಥಾಪಿಸಬಹುದು. ಕಾಂಗ್ರೆಸ್ ಪಕ್ಷವು ಜವಾಬ್ದಾರಿಯುತ ರಾಜಕೀಯ ಪಕ್ಷವಾಗಿದ್ದು, ಮಣಿಪುರ ರಾಜ್ಯದಲ್ಲಿ ಶಾಂತಿ, ಸಹಜತೆ ಮತ್ತು ಸೌಹಾರ್ದತೆಯನ್ನು ಮರುಸ್ಥಾಪಿಸುವ ಯಾವುದೇ ಯೋಜನೆಗೆ ಬೆಂಬಲ ನೀಡಲು ಸದಾ ಸಿದ್ಧವಿದೆ" ಎಂದು ಜ್ಞಾಪಕ ಪತ್ರದಲ್ಲಿ ಬರೆಯಲಾಗಿದೆ.

"ಸೇವೆಯಲ್ಲಿರುವ ಅಥವಾ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖಾ ಆಯೋಗವನ್ನು ರಚಿಸಬೇಕು" ಎಂದು ಹೇಳಿದೆ. ಎಲ್ಲಾ ಉಗ್ರಗಾಮಿ ಗುಂಪುಗಳನ್ನು ನಿಯಂತ್ರಿಸಲು ಮತ್ತು ನಿರ್ಬಂಧಿಸಲು ಮತ್ತು ಎಲ್ಲಾ ಸಶಸ್ತ್ರ ನಾಗರಿಕ ಗುಂಪುಗಳನ್ನು ಸೂಕ್ತ ಕ್ರಮ ತೆಗೆದುಕೊಳ್ಳುವ ಮೂಲಕ ತಕ್ಷಣವೇ ನಿಲ್ಲಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತಕ್ಷಣವೇ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕರ ಸೂಚಿಸುವಂತೆ ರಾಷ್ಟ್ರಪತಿಗೆ ಕರೆ ನೀಡಿದ್ದಾರೆ.
ರಾಜ್ಯ ಸರ್ಕಾರವು ಎಲ್ಲಾ ಪರಿಹಾರ ಶಿಬಿರಗಳ ನಿರ್ವಹಣೆಯನ್ನು ತಕ್ಷಣವೇ ವಹಿಸಿಕೊಳ್ಳಬೇಕು ಮತ್ತು ಎಲ್ಲರಿಗೂ ಸರಿಯಾದ ಆರೋಗ್ಯ ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸಬೇಕು. ಸಮನ್ವಯ ಮತ್ತು ಸಂವಾದದ ಮೂಲಕ ಸಮುದಾಯಗಳ ನಡುವಿನ ನಂಬಿಕೆಯನ್ನು ಪುನಃಸ್ಥಾಪಿಸಬೇಕು ಮತ್ತು ಮಣಿಪುರ ರಾಜ್ಯಕ್ಕೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಸಾಂವಿಧಾನಿಕ ನಿಬಂಧನೆಗಳನ್ನು ರಕ್ಷಿಸಬೇಕು ಎಂದು ಕಾಂಗ್ರೆಸ್ ತನ್ನ ಪತ್ರದಲ್ಲಿ ತಿಳಿಸಿದೆ.
"ಕಳೆದ 22 ವರ್ಷಗಳಲ್ಲಿ ಇದು ಎರಡನೇ ಬಾರಿ. ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ 2001 ರ ಜೂನ್ನಲ್ಲಿ ಮಣಿಪುರ ಸುಟ್ಟುಹೋಯಿತು. 2023 ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದಾಗ ಮಣಿಪುರ ಹೊತ್ತಿ ಉರಿಯುತ್ತಿದೆ. ಬಿಜೆಪಿಯ ರಾಜಕೀಯ ಮತ್ತು ಸಿದ್ಧಾಂತದಲ್ಲಿ ಏನೂ ಸಮಸ್ಯೆ ಇದೆ. ಇದು ಮಣಿಪುರ ಮತ್ತು ಇತರ ರಾಜ್ಯಗಳ ವೈವಿಧ್ಯತೆಯನ್ನು ಬಿಜೆಪಿ ನಿರ್ವಹಿಸುವ ರೀತಿಯಲ್ಲಿ ಸಾಮಾಜಿಕ ಸಾಮರಸ್ಯಕ್ಕೆ ಅನುಕೂಲಕರವಲ್ಲ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications