Get Updates
Get notified of breaking news, exclusive insights, and must-see stories!

Manipur violence: ಶಾಂತಿಗಾಗಿ ಮಣಿಪುರ ಸಮುದಾಯದ ಮುಖಂಡರ ಸಭೆ ಕರೆಯುವಂತೆ ಪ್ರಧಾನಿಗೆ ಕಾಂಗ್ರೆಸ್ ಒತ್ತಾಯ

ನವದೆಹಲಿ, ಮೇ. 24: ಜನಾಂಗೀಯ ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಶಾಂತಿ ನೆಲೆಸುವ ಪ್ರಯತ್ನವಾಗಿ ಮಣಿಪುರದ ಸಮುದಾಯದ ಮುಖಂಡರ ಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಕರೆಯಬೇಕು ಎಂದು ಕಾಂಗ್ರೆಸ್ ಬುಧವಾರ ಒತ್ತಾಯಿಸಿದೆ. ಮ್ಯಾನ್ಮಾರ್‌ನೊಂದಿಗೆ ಅಂತರಾಷ್ಟ್ರೀಯ ಗಡಿಯನ್ನು ಹಂಚಿಕೊಂಡಿರುವ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸದಿದ್ದರೆ ಹೆಚ್ಚು ಅಪಾಯವಾಗಲಿದೆ ಎಂದಿದೆ.

ಭಾರತವು "ಅಪಾಯದಲ್ಲಿದೆ" ಎಂದು ಕಾಂಗ್ರೆಸ್ ನಾಯಕ ಅಜಯ್ ಕುಮಾರ್ ಹೇಳಿದ್ದಾರೆ. ಮಣಿಪುರದ ಎರಡೂ ಸಮುದಾಯಗಳ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವರು ಕೂಡಲೇ ಸಂವಾದ ಆರಂಭಿಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸುತ್ತದೆ ಎಂದು ಅಜಯ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

Congress demands PM Modi to call meeting over Manipur violence

ಮಣಿಪುರದಲ್ಲಿ ಹಿಂಸಾಚಾರಕ್ಕೆ ಕಾರಣವಾಗಿರುವ, ಪರಿಸ್ಥಿತಿಯನ್ನು ನಿಯಂತ್ರಿಸುತ್ತಿರುವ ಎರಡೂ ಸಮುದಾಯಗಳಲ್ಲಿನ ಉಗ್ರಗಾಮಿ ವಿಭಾಗಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಕೇಂದ್ರ ಸರ್ಕಾರದಿಂದ ಶಾಂತಿ ನಡೆಸುವ ಪ್ರಸ್ತಾಪ ಬರಬೇಕಾಗಿದೆ ಎಂದು ಹೇಳಿದ್ದಾರೆ. ಜೊತೆಗೆ ಬಿಜೆಪಿ ಚುನಾಯಿತ ಸರ್ಕಾರವನ್ನು ಹೊಂದಿದ್ದರೂ ಸಹ ಒಬ್ಬ ಸಚಿವರೂ ಸಹ ಮಣಿಪುರಕ್ಕೆ ಭೇಟಿ ನೀಡಿಲ್ಲ, ಹಿಂಸಾಚಾರದ ಬಗ್ಗೆ ಕಾಳಜಿ ವಹಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಬಿಜೆಪಿಯವರು ಮಣಿಪುರದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಮತ್ತು ಅಧಿಕಾರ ಹಿಡಿಯುವಲ್ಲಿ ಆಸಕ್ತಿಯನ್ನು ತೋರಿಸಿದ್ದಾರೆ ಎಂದು ಅಜಯ್ ಕುಮಾರ್ ಆರೋಪಿಸಿದ್ದಾರೆ. ಜನರು ಸಾಯುತ್ತಿರುವಾಗ ಮತ್ತು ಮನೆಗಳು ಸುಟ್ಟುಹೋಗುತ್ತಿರುವಾಗ, ಸಂಕಷ್ಟದಲ್ಲಿರುವ ರಾಜ್ಯದಲ್ಲಿ ಸಂತ್ರಸ್ತ ಜನರ ಕಣ್ಣೀರು ಒರೆಸುವವರು ಸರ್ಕಾರದಲ್ಲಿ ಯಾರೂ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

Congress demands PM Modi to call meeting over Manipur violence

"ವಿದೇಶಕ್ಕೆ ಹೋಗಬಲ್ಲರು, ರ್ಯಾಲಿಗಳನ್ನು ಮಾಡಬಲ್ಲರು. ಆದರೆ, ಈ ದೇಶದ ಜನರು ಸಾಯುತ್ತಿರುವಾಗ, ಸುಡುತ್ತಿರುವಾಗ, ಹಸಿವಿನಿಂದ ಬಳಲುತ್ತಿರುವಾಗ, ಸ್ಥಳಾಂತರಗೊಂಡಾಗ ಅವರ ಕಣ್ಣೀರು ಒರೆಸಲು ಈ ಸರ್ಕಾರದಲ್ಲಿ ಯಾರೂ ಇಲ್ಲ. ಇದು ದೊಡ್ಡ ದುರಂತಗಳಲ್ಲಿ ಒಂದಾಗಿದೆ. ಇದು ನಾವು ಭಾರತದಲ್ಲಿ ಅಲ್ಲ ಸುಡಾನ್ ಅಥವಾ ಸೊಮಾಲಿಯಾದಂತಹ ಪರಿಸ್ಥಿತಿಯಲ್ಲಿದ್ದೇವೆ" ಎಂದು ಹೇಳಿದ್ದಾರೆ.

ಪಕ್ಷದ ನಿಯೋಗವು ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಲಿದೆ. ಮಣಿಪುರದ ಪರಿಸ್ಥಿತಿಯ ಬಗ್ಗೆ ವರದಿಯನ್ನು ಹಸ್ತಾಂತರಿಸಲಿದೆ ಮತ್ತು ಮುಂದಿನ ಮಾರ್ಗದರ್ಶನವನ್ನು ಪಡೆಯಲಿದೆ ಎಂದು ಅವರು ಹೇಳಿದ್ದಾರೆ. ಮೃತರ ಸಂಬಂಧಿಕರಿಗೆ 20 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 5 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ತೊಂದರೆಗೀಡಾದರು ಮತ್ತು ಸ್ಥಳಾಂತರಗೊಂಡಿರುವುದರಿಂದ ಸಂತ್ರಸ್ತ ಜನರಿಗೆ ಶೀಘ್ರ ಪುನರ್ವಸತಿ ಕಲ್ಪಿಸುವಂತೆ ಅವರು ಕೋರಿದ್ದಾರೆ. ಮೇ 3 ರಂದು ಮಣಿಪುರದಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತೇಯಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು 10 ಗುಡ್ಡಗಾಡು ಜಿಲ್ಲೆಗಳಲ್ಲಿ 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಆಯೋಜಿಸಿದ ನಂತರ ಹಿಂಸಾತ್ಮಕ ಘರ್ಷಣೆಗಳು ಸಂಭವಿಸಿವೆ.

ಮಣಿಪುರ ಗಡಿ ರಾಜ್ಯವಾಗಿದ್ದು, ಮಿಜೋರಾಂನಲ್ಲಿ 7,000 ಆದಿವಾಸಿಗಳು ಆಶ್ರಯ ಪಡೆದಿದ್ದಾರೆ ಎಂದು ಹೇಳಿದ ಅಜಯ್ ಕುಮಾರ್, ಇದು ಮಣಿಪುರದ ಸಮಸ್ಯೆ ಮಾತ್ರವಲ್ಲ, ಬರ್ಮಾ ಮತ್ತು ಚೀನಾದಂತಹ ಇತರರೂ ಭಾಗಿಯಾಗಿರುವಂತೆಯೇ ಮಿಜೋರಾಂನ ಸಮಸ್ಯೆಯೂ ಹೌದು ಎಂದು ಹೇಳಿದ್ದಾರೆ. 54,000 ಜನರು ನಿರಾಶ್ರಿತರಾಗಿದ್ದಾರೆ, 100 ಜನರು ಸಾವನ್ನಪ್ಪಿದ್ದಾರೆ ಮತ್ತು ಸಮುದಾಯಗಳು ಪರಸ್ಪರ ಮಾತನಾಡುತ್ತಿಲ್ಲವಾದ್ದರಿಂದ ಗಡಿ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಕೇಂದ್ರ ಸರ್ಕಾರ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+