Manipur violence: ಶಾಂತಿಗಾಗಿ ಮಣಿಪುರ ಸಮುದಾಯದ ಮುಖಂಡರ ಸಭೆ ಕರೆಯುವಂತೆ ಪ್ರಧಾನಿಗೆ ಕಾಂಗ್ರೆಸ್ ಒತ್ತಾಯ
ನವದೆಹಲಿ, ಮೇ. 24: ಜನಾಂಗೀಯ ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಶಾಂತಿ ನೆಲೆಸುವ ಪ್ರಯತ್ನವಾಗಿ ಮಣಿಪುರದ ಸಮುದಾಯದ ಮುಖಂಡರ ಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಕರೆಯಬೇಕು ಎಂದು ಕಾಂಗ್ರೆಸ್ ಬುಧವಾರ ಒತ್ತಾಯಿಸಿದೆ. ಮ್ಯಾನ್ಮಾರ್ನೊಂದಿಗೆ ಅಂತರಾಷ್ಟ್ರೀಯ ಗಡಿಯನ್ನು ಹಂಚಿಕೊಂಡಿರುವ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸದಿದ್ದರೆ ಹೆಚ್ಚು ಅಪಾಯವಾಗಲಿದೆ ಎಂದಿದೆ.
ಭಾರತವು "ಅಪಾಯದಲ್ಲಿದೆ" ಎಂದು ಕಾಂಗ್ರೆಸ್ ನಾಯಕ ಅಜಯ್ ಕುಮಾರ್ ಹೇಳಿದ್ದಾರೆ. ಮಣಿಪುರದ ಎರಡೂ ಸಮುದಾಯಗಳ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವರು ಕೂಡಲೇ ಸಂವಾದ ಆರಂಭಿಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸುತ್ತದೆ ಎಂದು ಅಜಯ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಣಿಪುರದಲ್ಲಿ ಹಿಂಸಾಚಾರಕ್ಕೆ ಕಾರಣವಾಗಿರುವ, ಪರಿಸ್ಥಿತಿಯನ್ನು ನಿಯಂತ್ರಿಸುತ್ತಿರುವ ಎರಡೂ ಸಮುದಾಯಗಳಲ್ಲಿನ ಉಗ್ರಗಾಮಿ ವಿಭಾಗಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಕೇಂದ್ರ ಸರ್ಕಾರದಿಂದ ಶಾಂತಿ ನಡೆಸುವ ಪ್ರಸ್ತಾಪ ಬರಬೇಕಾಗಿದೆ ಎಂದು ಹೇಳಿದ್ದಾರೆ. ಜೊತೆಗೆ ಬಿಜೆಪಿ ಚುನಾಯಿತ ಸರ್ಕಾರವನ್ನು ಹೊಂದಿದ್ದರೂ ಸಹ ಒಬ್ಬ ಸಚಿವರೂ ಸಹ ಮಣಿಪುರಕ್ಕೆ ಭೇಟಿ ನೀಡಿಲ್ಲ, ಹಿಂಸಾಚಾರದ ಬಗ್ಗೆ ಕಾಳಜಿ ವಹಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಬಿಜೆಪಿಯವರು ಮಣಿಪುರದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಮತ್ತು ಅಧಿಕಾರ ಹಿಡಿಯುವಲ್ಲಿ ಆಸಕ್ತಿಯನ್ನು ತೋರಿಸಿದ್ದಾರೆ ಎಂದು ಅಜಯ್ ಕುಮಾರ್ ಆರೋಪಿಸಿದ್ದಾರೆ. ಜನರು ಸಾಯುತ್ತಿರುವಾಗ ಮತ್ತು ಮನೆಗಳು ಸುಟ್ಟುಹೋಗುತ್ತಿರುವಾಗ, ಸಂಕಷ್ಟದಲ್ಲಿರುವ ರಾಜ್ಯದಲ್ಲಿ ಸಂತ್ರಸ್ತ ಜನರ ಕಣ್ಣೀರು ಒರೆಸುವವರು ಸರ್ಕಾರದಲ್ಲಿ ಯಾರೂ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

"ವಿದೇಶಕ್ಕೆ ಹೋಗಬಲ್ಲರು, ರ್ಯಾಲಿಗಳನ್ನು ಮಾಡಬಲ್ಲರು. ಆದರೆ, ಈ ದೇಶದ ಜನರು ಸಾಯುತ್ತಿರುವಾಗ, ಸುಡುತ್ತಿರುವಾಗ, ಹಸಿವಿನಿಂದ ಬಳಲುತ್ತಿರುವಾಗ, ಸ್ಥಳಾಂತರಗೊಂಡಾಗ ಅವರ ಕಣ್ಣೀರು ಒರೆಸಲು ಈ ಸರ್ಕಾರದಲ್ಲಿ ಯಾರೂ ಇಲ್ಲ. ಇದು ದೊಡ್ಡ ದುರಂತಗಳಲ್ಲಿ ಒಂದಾಗಿದೆ. ಇದು ನಾವು ಭಾರತದಲ್ಲಿ ಅಲ್ಲ ಸುಡಾನ್ ಅಥವಾ ಸೊಮಾಲಿಯಾದಂತಹ ಪರಿಸ್ಥಿತಿಯಲ್ಲಿದ್ದೇವೆ" ಎಂದು ಹೇಳಿದ್ದಾರೆ.
ಪಕ್ಷದ ನಿಯೋಗವು ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಲಿದೆ. ಮಣಿಪುರದ ಪರಿಸ್ಥಿತಿಯ ಬಗ್ಗೆ ವರದಿಯನ್ನು ಹಸ್ತಾಂತರಿಸಲಿದೆ ಮತ್ತು ಮುಂದಿನ ಮಾರ್ಗದರ್ಶನವನ್ನು ಪಡೆಯಲಿದೆ ಎಂದು ಅವರು ಹೇಳಿದ್ದಾರೆ. ಮೃತರ ಸಂಬಂಧಿಕರಿಗೆ 20 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 5 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ತೊಂದರೆಗೀಡಾದರು ಮತ್ತು ಸ್ಥಳಾಂತರಗೊಂಡಿರುವುದರಿಂದ ಸಂತ್ರಸ್ತ ಜನರಿಗೆ ಶೀಘ್ರ ಪುನರ್ವಸತಿ ಕಲ್ಪಿಸುವಂತೆ ಅವರು ಕೋರಿದ್ದಾರೆ. ಮೇ 3 ರಂದು ಮಣಿಪುರದಲ್ಲಿ ಪರಿಶಿಷ್ಟ ಪಂಗಡದ (ಎಸ್ಟಿ) ಸ್ಥಾನಮಾನಕ್ಕಾಗಿ ಮೈತೇಯಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು 10 ಗುಡ್ಡಗಾಡು ಜಿಲ್ಲೆಗಳಲ್ಲಿ 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಆಯೋಜಿಸಿದ ನಂತರ ಹಿಂಸಾತ್ಮಕ ಘರ್ಷಣೆಗಳು ಸಂಭವಿಸಿವೆ.
ಮಣಿಪುರ ಗಡಿ ರಾಜ್ಯವಾಗಿದ್ದು, ಮಿಜೋರಾಂನಲ್ಲಿ 7,000 ಆದಿವಾಸಿಗಳು ಆಶ್ರಯ ಪಡೆದಿದ್ದಾರೆ ಎಂದು ಹೇಳಿದ ಅಜಯ್ ಕುಮಾರ್, ಇದು ಮಣಿಪುರದ ಸಮಸ್ಯೆ ಮಾತ್ರವಲ್ಲ, ಬರ್ಮಾ ಮತ್ತು ಚೀನಾದಂತಹ ಇತರರೂ ಭಾಗಿಯಾಗಿರುವಂತೆಯೇ ಮಿಜೋರಾಂನ ಸಮಸ್ಯೆಯೂ ಹೌದು ಎಂದು ಹೇಳಿದ್ದಾರೆ. 54,000 ಜನರು ನಿರಾಶ್ರಿತರಾಗಿದ್ದಾರೆ, 100 ಜನರು ಸಾವನ್ನಪ್ಪಿದ್ದಾರೆ ಮತ್ತು ಸಮುದಾಯಗಳು ಪರಸ್ಪರ ಮಾತನಾಡುತ್ತಿಲ್ಲವಾದ್ದರಿಂದ ಗಡಿ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಕೇಂದ್ರ ಸರ್ಕಾರ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications