ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಭಾರಿ ಮುನ್ನಡೆ: ರಾಜಸ್ಥಾನಕ್ಕೆ ಧಾವಿಸಿದ ಕೆ.ಸಿ. ವೇಣುಗೋಪಾಲ್

|
Google Oneindia Kannada News

Recommended Video

5 States Election Results 2018:ಕಾಂಗ್ರೆಸ್ ಭಾರಿ ಮುನ್ನಡೆ: ರಾಜಸ್ಥಾನಕ್ಕೆ ಧಾವಿಸಿದ ಕೆ.ಸಿ. ವೇಣುಗೋಪಾಲ್

ಜೈಪುರ, ಡಿಸೆಂಬರ್ 11: ರಾಜಸ್ಥಾನದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರುವ ಸೂಚನೆಗಳು ಕಾಣಿಸುತ್ತಿದ್ದಂತೆಯೇ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಅಲ್ಲಿಗೆ ಧಾವಿಸಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಸರ್ಕಾರ ರಚನೆ ಮಾಡುವ ಸಾಧ್ಯತೆಗಳು ಗೋಚರಿಸಿರುವುದರಿಂದ ಮುಂದಿನ ನಡೆಯ ಬಗ್ಗೆ ಅಲ್ಲಿನ ನಾಯಕರ ಜೊತೆ ಮಾತುಕತೆ ನಡೆಸಲು ವೇಣುಗೋಪಾಲ್ ಅಲ್ಲಿಗೆ ದೌಡಾಯಿಸಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಅನೇಕ ಮುಖಂಡರು ಮುಖ್ಯಮಂತ್ರಿ ರೇಸ್‌ನಲ್ಲಿ ಇರುವುದರಿಂದ ಪಕ್ಷ ಸರ್ಕಾರ ರಚಿಸುವ ಅವಕಾಶ ಲಭಿಸಿದರೆ ಯಾರನ್ನು ನಾಯಕರನ್ನಾಗಿ ಆಯ್ಕೆ ಮಾಡುವುದು ಎಂಬ ಗೋಜಲು ಸೃಷ್ಟಿಯಾಗುವ ಸಂಭವವಿದೆ.

ಪಂಚರಾಜ್ಯ ಚುನಾವಣೆ ಫಲಿತಾಂಶ LIVE:3 ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ ಪಂಚರಾಜ್ಯ ಚುನಾವಣೆ ಫಲಿತಾಂಶ LIVE:3 ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ

ಹೀಗಾಗಿ ಆರಂಭದಲ್ಲಿಯೇ ಎಲ್ಲ ಮುಖಂಡರೊಂದಿಗೆ ಚರ್ಚಿಸಿ ಸರ್ಕಾರ ನಡೆಸುವ ನಾಯಕತ್ವವನ್ನು ಯಾರ ಹೆಗಲಿಗೇರಿಸಬಹುದು ಎಂಬ ಬಗ್ಗೆ ವೇಣುಗೋಪಾಲ್ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಪಕ್ಷದ ರಾಷ್ಟ್ರೀಯ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ.

ವೇಣುಗೋಪಾಲ್ ಅವರು ಕರ್ನಾಟಕ ಕಾಂಗ್ರೆಸ್‌ನ ಉಸ್ತುವಾರಿಯಾಗಿದ್ದಾರೆ. ಜೊತೆಗೆ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯೂ ಆಗಿರುವುದರಿಂದ ರಾಜಸ್ಥಾನದ ರಾಜಕೀಯ ಸ್ಥಿತಿಗತಿಗಳನ್ನು ಅವರು ಅವಲೋಕಿಸಲಿದ್ದಾರೆ.

ಮುಖ್ಯಮಂತ್ರಿ ರೇಸ್‌ನಲ್ಲಿ...

ಮುಖ್ಯಮಂತ್ರಿ ರೇಸ್‌ನಲ್ಲಿ...

ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಸಚಿನ್ ಪೈಲೆಟ್, ರಾಜ್ಯದ ಪ್ರತಿಪಕ್ಷ ನಾಯಕ ರಾಮೇಶ್ವರ ದುಡಿ ಮುಖ್ಯಮಂತ್ರಿ ರೇಸ್‌ನಲ್ಲಿದ್ದಾರೆ.

ಕಾಂಗ್ರೆಸ್ ಪಕ್ಷದ ಮೂಲಗಳ ಮಾಹಿತಿ ಪ್ರಕಾರ ಡಿಸೆಂಬರ್ 12ರಂದು ಪಕ್ಷದ ಶಾಸಕರ ಸಭೆ ನಡೆಯಲಿದೆ. ಹೈಕಮಾಂಡ್ ಆದೇಶದಂತೆ ಒಂದು ಸಾಲಿನ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಗುತ್ತದೆ. ಜೈಪುರದಲ್ಲಿ ಸಭೆ ನಡೆಸಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ವೇಣುಗೋಪಾಲ್ ಅಲ್ಲಿ ಸಮಾಲೋಚನೆ ನಡೆಸಲಿದ್ದಾರೆ.

ರಾಜಸ್ಥಾನ ಚುನಾವಣೆ, ಅಂಕಿ-ಸಂಖ್ಯೆ: ಚಿತ್ರ ಮಾಹಿತಿರಾಜಸ್ಥಾನ ಚುನಾವಣೆ, ಅಂಕಿ-ಸಂಖ್ಯೆ: ಚಿತ್ರ ಮಾಹಿತಿ

ಸಚಿನ್ ಪೈಲಟ್ ವಿಶ್ವಾಸ

ಸಚಿನ್ ಪೈಲಟ್ ವಿಶ್ವಾಸ

ಜನತೆ ಆಶೀರ್ವಾದ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಚನೆ ಮಾಡಲಿದೆ. ಸಂಪೂರ್ಣ ಬಹುಮತ ಸಿಗಲಿದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮುಂತಾದ ಮುಖಂಡರು ಕುಳಿತು ಚರ್ಚೆ ಮಾಡಿ ಯಾರು ಮುಖ್ಯಮಂತ್ರಿ ಎಂಬುದನ್ನು ನಿರ್ಧರಿಸಲಿದ್ದಾರೆ. ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಸರ್ಕಾರ ರಚಿಸುವುದು ಖಚಿತ ಎಂದು ಸಚಿನ್ ಪೈಲಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನ ಚುನಾವಣೆ : ಫಲಿತಾಂಶದ ಬಳಿಕ ಕಾಂಗ್ರೆಸ್ ತಂತ್ರ ಸಿದ್ಧ ರಾಜಸ್ಥಾನ ಚುನಾವಣೆ : ಫಲಿತಾಂಶದ ಬಳಿಕ ಕಾಂಗ್ರೆಸ್ ತಂತ್ರ ಸಿದ್ಧ

ಅತಂತ್ರವಾಗುವುದೇ?

ಅತಂತ್ರವಾಗುವುದೇ?

ಒಂದು ಹಂತದಲ್ಲಿ ಕಾಂಗ್ರೆಸ್ ನಿಚ್ಚಳ ಬಹುಮತ ಪಡೆದುಕೊಳ್ಳುವ ಲಕ್ಷಣಗಳು ಗೋಚರಿಸಿದ್ದರೂ, ರಾಜಸ್ಥಾನ ವಿಧಾನಸಭೆ ಫಲಿತಾಂಶ ಸಾಕಷ್ಟು ಕುತೂಹಲ ಕೆರಳಿಸಿದೆ. ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತೆ ಮುನ್ನಡೆ ಪಡೆದುಕೊಳ್ಳುವ ಮೂಲಕ ಕಾಂಗ್ರೆಸ್‌ಗೆ ನಿಕಟ ಪೈಪೋಟಿ ನೀಡುತ್ತಿದೆ. ಇದೇ ರೀತಿ ಸಮೀಪದ ಕದನ ಮುಂದುವರಿದರೆ ಅಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವುದು ಖಚಿತ.

ಬಿಜೆಪಿ ವಿರೋಧಿ ಅಲೆ

ಬಿಜೆಪಿ ವಿರೋಧಿ ಅಲೆ

ರಾಜಸ್ಥಾನದಲ್ಲಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ನೇತೃತ್ವದ ಬಿಜೆಪಿ ತನ್ನ ಅಧಿಕಾರ ಕಳೆದುಕೊಳ್ಳುವ ಸೂಚನೆ ಕಂಡುಬಂದಿದೆ. ಕಾಂಗ್ರೆಸ್‌ ಇಲ್ಲಿ ಸಂಪೂರ್ಣ ಬಹುಮತ ಪಡೆದುಕೊಳ್ಳಲು ಸಾಧ್ಯವಾಗದೆ ಇದ್ದರೂ, ಬಿಜೆಪಿ ಬಹುಮತ ಪಡೆದುಕೊಳ್ಳುವ ಸಂಭವ ತೀರಾ ದೂರ ಇದೆ. ಇತರೆ ಪಕ್ಷಗಳು, ಪಕ್ಷೇರರ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಎರಡೂ ಪಕ್ಷಗಳ ನಾಯಕರು ಪೈಪೋಟಿ ನಡೆಸುವ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಅಧಿಕ.

English summary
Congress National General Secretary KC Venugopal visiting Rajasthan after the party getting lead in the state assembly elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X