ಯುಪಿಎ ಅವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ ನಡೆಸಿದ ಪಟ್ಟಿ ನೀಡಿದ ಕಾಂಗ್ರೆಸ್
ನವದೆಹಲಿ, ಮೇ 2: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಹಲವು ಬಾರಿ ಉಗ್ರರ ನೆಲೆಗಳ ಮೇಲೆ ಸರ್ಜಿಕಲ್ ದಾಳಿಗಳನ್ನು ನಡೆಸಲಾಗಿತ್ತು ಎಂದು ಕಾಂಗ್ರೆಸ್ನ ಅನೇಕ ನಾಯಕರು ಹೇಳಿಕೆ ನೀಡಿದ್ದರು.
ಈಗ ಕಾಂಗ್ರೆಸ್ ಸರ್ಜಿಕಲ್ ದಾಳಿ ನಡೆಸಿದ ದಿನಾಂಕ ಮತ್ತು ಸ್ಥಳಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಯುಪಿಎ ಅವಧಿಯಲ್ಲಿ ಆರು ಕಡೆ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿತ್ತು ಎಂದು ಅದು ಪ್ರತಿಪಾದಿಸಿದೆ.
ಸುದ್ದಿಗೋಷ್ಠಿಯೊಂದರಲ್ಲಿ ಗುರುವಾರ ಕಾಂಗ್ರೆಸ್ ಹಿರಿಯ ಮುಖಂಡ ರಾಜೀವ್ ಶುಕ್ಲಾ, ಆರು ದಾಳಿಗಳನ್ನು ಕಾಂಗ್ರೆಸ್ ಸರ್ಕಾರ ನಡೆಸಿತ್ತು. ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತಾವಧಿಯಲ್ಲಿ ಎರಡು ಸರ್ಜಿಕಲ್ ಸ್ಟ್ರೈಕ್ಗಳನ್ನು ನಡೆಸಲಾಗಿತ್ತು ಎಂದು ಹೇಳಿದ್ದಾರೆ.
ಉರಿಯಲ್ಲಿನ ಸೇನಾ ನೆಲೆಯ ಮೇಲೆ ಉಗ್ರರು ದಾಳಿ ನಡೆಸಿದ ಬಳಿಕ ಪ್ರತಿಕಾರವಾಗಿ ಕಳೆದ ವರ್ಷದ 2016ರ ಸೆ. 29ರಂದು ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಪ್ರದೇಶದೊಳಗೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಈ ವರ್ಷ ಪುಲ್ವಾಮಾ ಉಗ್ರರ ದಾಳಿಯ ನಂತರ ಫೆಬ್ರವರಿ 26ರಂದು ಪಾಕಿಸ್ತಾನದೊಳಗಿನ ಜೈಶ್ ಎ ಮೊಹಮ್ಮದ್ ಉಗ್ರರ ನೆಲೆಗಳ ಮೇಲೆ ವಾಯುಪಡೆ ವೈಮಾನಿಕ ದಾಳಿ ನಡೆಸಿತ್ತು.

ಭಟ್ಟಾಲ್ ಮತ್ತು ಶಾರ್ದಾ ಸೆಕ್ಟರ್
ಯುಪಿಎ ಅವಧಿಯಲ್ಲಿ ಮೊದಲ ಸರ್ಜಿಕಲ್ ಸ್ಟ್ರೈಕ್ಅನ್ನು 2008ರ ಜೂನ್ 19ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಭಟ್ಟಾಲ್ ಸೆಕ್ಟರ್ನಲ್ಲಿ ನಡೆಸಲಾಗಿತ್ತು. ಎರಡನೆಯ ದಾಳಿಯನ್ನು 2011ರ ಆಗಸ್ಟ್ 30-ಸೆಪ್ಟೆಂಬರ್ 1ರಂದು ಕೇಲ್ನ ನೀಲಂ ನದಿ ಕಣಿವೆಯುದ್ದಕ್ಕೂ ಇರುವ ಶಾರ್ದಾ ಸೆಕ್ಟರ್ನಲ್ಲಿ ಕೈಗೊಳ್ಳಲಾಗಿತ್ತು.

ಉಳಿದ ನಾಲ್ಕು ದಾಳಿಗಳು
ಮೂರನೇ ಸರ್ಜಿಕಲ್ ದಾಳಿಯನ್ನು 2013ರ ಜನವರಿ 6ರಂದು ಸಾವನ್ ಪಾತ್ರಾ ತಪಾಸಣಾ ನೆಲೆಯಲ್ಲಿ ನಡೆಸಲಾಗಿತ್ತು. ನಾಲ್ಕನೆಯ ದಾಳಿ 2013ರ ಜುಲೈ 27-28ರಂದು ನಾಜಾಪಿರ್ ವಲಯದಲ್ಲಿ ನಡೆದಿತ್ತು. ಐದನೆಯದು 2013ರ ಆಗಸ್ಟ್ 6 ಮತ್ತು ಆರನೇ ಸರ್ಜಿಕಲ್ ದಾಳಿಯನ್ನು 2014ರ ಜನವರಿ 14ರಂದು ನಡೆಸಲಾಗಿತ್ತು ಎಂದು ಶುಕ್ಲಾ ಹೇಳಿದ್ದಾರೆ.

ವಾಜಪೇಯಿ ಆಡಳಿತಾವಧಿಯಲ್ಲಿ
ವಾಜಪೇಯಿ ಆಡಳಿತಾವಧಿಯಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ಸ್ನ ಮಾಹಿತಿಯನ್ನೂ ಶುಕ್ಲಾ ಬಿಡುಗಡೆ ಮಾಡಿದ್ದಾರೆ. 2000ರ ಜನವರಿ 21ರಂದು ನೀಲಂ ನದಿಯುದ್ದಕ್ಕೂ ಇರುವ ನಾದಲಾ ಎನ್ಕ್ಲೇವ್ನಲ್ಲಿ ಮೊದಲ ಸರ್ಜಿಕಲ್ ಸ್ಟ್ರೈಕ್ಸ್ ನಡೆಸಲಾಗಿತ್ತು. 2003ರ ಸೆಪ್ಟೆಂಬರ್ 18ರಂದು ಪೂಂಚ್ನ ಬಾರೋಹ್ ಸೆಕ್ಟರ್ನಲ್ಲಿ ನಡೆಸಲಾಗಿತ್ತು ಎಂದು ವಿವರಿಸಿದ್ದಾರೆ.

ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುವುದು
ಕಾಂಗ್ರೆಸ್ ಎಂದಿಗೂ ಈ ದಾಳಿಗಳ ಶ್ರೇಯಸ್ಸನ್ನು ಪಡೆದುಕೊಳ್ಳಲು ಬಯಸಿರಲಿಲ್ಲ. ಒಂದೇ ಒಂದು ಸರ್ಜಿಕಲ್ ದಾಳಿ ನಡೆಸಿದವರು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ. ಈ ದಾಳಿಗಳಿಗೆ ಶ್ರೇಯಸ್ಸು ಪಡೆದುಕೊಳ್ಳಲು ಮನಮೋಹನ್ ಸಿಂಗ್ ಅವರಾಗಲೀ, ಅಟಲ್ ಬಿಹಾರಿ ವಾಜಪೇಯಿ ಅವರಾಗಲೀ ಸುದ್ದಿಗೋಷ್ಠಿ ನಡೆಸಿರಲಿಲ್ಲ ಎಂದು ಶುಕ್ಲಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಟಕಿಯಾಡಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications