ಮೋದಿ ಹೊಗಳಿದ ಕಾಂಗ್ರೆಸ್ಸಿಗರು: ಹೈಕಮಾಂಡ್ ಸುಸ್ತು!
ನವದೆಹಲಿ, ಸೆ 13: ಲೋಕಸಭಾ ಚುನಾವಣೆಯಲ್ಲಿ ಸೋತು ಹೈರಾಣವಾಗಿರುವ ಕಾಂಗ್ರೆಸ್, ಪಕ್ಷದ ಇಬ್ಬರು ಹಿರಿಯ ಮುಖಂಡರ ಹೇಳಿಕೆಯಿಂದ ತೀವ್ರ ಮುಜುಗರಕ್ಕೀಡಾಗಿದೆ.
ಸಮರ್ಥ ನಾಯಕತ್ವದ ಕೊರತೆ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರೇ ಬಿಜೆಪಿ ಮತ್ತು ಮೋದಿ ಆಡಳಿತವನ್ನು ಹೊಗಳುತ್ತಿರುವುದು ಹೈಕಮಾಂಡಿಗೆ ನುಂಗಲಾರದ ತುತ್ತಾಗಿ ಪರಿಣಮಿಸುತ್ತಿದೆ.
ದೆಹಲಿಯಲ್ಲಿ ಸರಕಾರ ರಚಿಸುವ ವಿಚಾರದಲ್ಲಿ ದೆಹಲಿಯ ಮೂರು ಬಾರಿಯ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಬಿಜೆಪಿ ಪರ ನಿಲುವು ತಾಳಿದ್ದು ಪಕ್ಷಕ್ಕೆ ಇರಿಸು ಮುರಿಸು ತಂದಿದೆ. (ಸಚಿವ ಸಂಪುಟ ವಿಸ್ತರಣೆಗೆ ದಿಗ್ವಿಜಯ್ ಸರ್ಟಿಫಿಕೇಟ್)
2ಜಿ ಹಗರಣ ಮತ್ತು ಕಾಶ್ಮೀರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಿಸುವಲ್ಲಿ ಯುಪಿಎ ಮೈತ್ರಿಕೂಟದ ಅಂಗ ಪಕ್ಷವಾಗಿದ್ದ ನ್ಯಾಶನಲ್ ಕಾನ್ಫರೆನ್ಸ್ ಎಡವಿದ್ದರ ಬಗ್ಗೆ ಕಾಂಗ್ರೆಸ್ಸಿನ ಕೆಲವು ಮುಖಂಡರು ತಮ್ಮದೇ ಆದ ಹೇಳಿಕೆಯನ್ನು ನೀಡುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆ ತೆಗೆದುಕೊಳ್ಳುವ ವಿಚಾರದಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಕೂಡಾ ಮೋದಿ ಕಾರ್ಯವೈಖರಿಯನ್ನು ಮೆಚ್ಚಿ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.
ದಿಗ್ವಿಜಯ್ ಸಿಂಗ್ ಮತ್ತು ಶೀಲಾ ಹೇಳಿದ್ದೇನು? ಸ್ಲೈಡಿನಲ್ಲಿ ಮುಂದುವರಿಸಲಾಗಿದೆ

ಕಾಶ್ಮೀರ ಪ್ರವಾಹ
ಕಾಶ್ಮೀರದಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಕೇಂದ್ರ ಸರಕಾರ ನಿಭಾಯಿಸಿದ ರೀತಿಗೆ ದಿಗ್ವಿಜಯ್ ಸಿಂಗ್ ಶ್ಲಾಘಿಸಿದ್ದಾರೆ. ಕೇಂದ್ರ ಸರಕಾರ ಉತ್ತಮವಾಗಿ ಕೆಲಸ ಮಾಡಿದೆ - ದಿಗ್ವಿಜಯ್ ಸಿಂಗ್. (ಚಿತ್ರ : ಪಿಟಿಐ)

ಶೀಲಾ ದೀಕ್ಷಿತ್ ಹೇಳಿದ್ದೇನು?
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆದ್ದ ಪಕ್ಷವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಕಾರ ಬಿಜೆಪಿಯನ್ನು ಸರಕಾರ ರಚಿಸುವಂತೆ ಆಹ್ವಾನಿಸುವುದು ಸೂಕ್ತ - ಶೀಲಾ ದೀಕ್ಷಿತ್ (ಚಿತ್ರ : ಪಿಟಿಐ)

ದಿಗ್ವಿಜಯ್ ಸಿಂಗ್ ಹೇಳಿಕೆ
ರಾಜ್ಯ ಸರಕಾರ ಕೈಚೆಲ್ಲಿ ಕೂತಾಗ ಮೋದಿ ಸರಕಾರ ಕಾಶ್ಮೀರ ಪ್ರವಾಹದ ವಿಚಾರದಲ್ಲಿ ಜನಮೆಚ್ಚುವ ಕೆಲಸ ಮಾಡಿದೆ. ನಮ್ಮ ಸೈನಿಕರಿಗೆ ಅಭಿನಂದನೆಗಳು. ಪಾಕ್ ಆಕ್ರಮಿತ ಕಾಶ್ಮೀರದ ಭಾಗಕ್ಕೆ ಸಹಾಯಹಸ್ತ ನೀಡುವ ಪ್ರಧಾನಿಯವರ ನಿಲುವಿಗೆ ನನ್ನ ಸಹಮತವಿದೆ - ರಾಹುಲ್ ಗಾಂಧಿ ಆಪ್ತ, ಕಾಂಗ್ರೆಸ್ ಹಿರಿಯ ಮುಖಂಡ - ದಿಗ್ವಿಜಯ್ ಸಿಂಗ್. (ಚಿತ್ರ : ಪಿಟಿಐ)

ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ
ದೆಹಲಿಯಲ್ಲಿ ಅಧಿಕಾರಕ್ಕೇರಲು ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಕೆಲವು ದಿನಗಳ ಹಿಂದೆ ಕಾಂಗ್ರೆಸ್ ವಕ್ತಾರರು ಹೇಳಿಕೆ ನೀಡಿದ್ದರು. ಈಗ ಬಿಜೆಪಿಗೆ ಸರಕಾರ ರಚಿಸಲು ಅವಕಾಶ ನೀಡಬೇಕೆನ್ನುವ ಶೀಲಾ ಹೇಳಿಕೆ ಪಕ್ಷಕ್ಕೆ ನುಂಗಲಾರದ ತುತ್ತಾಗಿದೆ.

ಅದು ಅವರ ವೈಯಕ್ತಿಕ ನಿಲುವು
ಇಬ್ಬರು ಹಿರಿಯ ಮುಖಂಡರ ಅಚ್ಚರಿಯ ಹೇಳಿಕೆಯಿಂದ ಮುಜುಗರದಿಂದ ತಪ್ಪಿಸಿಕೊಳ್ಳಲು, ಇದು ಅವರಿಬ್ಬರ ವೈಯಕ್ತಿಕ ನಿಲುವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ವಾಕ್ ಸ್ವಾತಂತ್ರ್ಯವಿದೆ ಎಂದು ಪಕ್ಷದ ವಕ್ತಾರರು ಹೇಳಿದ್ದಾರೆ. (ಚಿತ್ರ : ಪಿಟಿಐ)
-
ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ದಕ್ಷಿಣ ಭಾರತದ ಧ್ವನಿ ಅಡಗಿಸುವ ಪಿತೂರಿ: ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ -
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ












Click it and Unblock the Notifications