ಏಕಾಂಗಿಯಾಗಿ ಪ್ರಧಾನಿ ಮೋದಿಯನ್ನು ಸೋಲಿಸಲು ಕಾಂಗ್ರೆಸ್ ಅಸಮರ್ಥ: ಬಿಜೆಪಿ
ನವದೆಹಲಿ, ಜೂನ್. 23: ಲೋಕಸಭಾ ಚುನಾವಣೆಗಾಗಿ ಪ್ರತಿಪಕ್ಷಗಳ ಸಭೆಯ ಬಗ್ಗೆ ಬಿಜೆಪಿ ಟೀಕೆ ಮಾಡಿದೆ. 2024ರ ಲೋಕಸಭೆ ಚುನಾವಣೆಯಲ್ಲಿ 'ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಕಾಂಗ್ರೆಸ್ ಅಸಮರ್ಥ' ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷವು ಇತರರ ಬೆಂಬಲವನ್ನು ಬಯಸುತ್ತಿದೆ ಎಂದು ಬಿಜೆಪಿ ಶುಕ್ರವಾರ ಅಪಹಾಸ್ಯ ಮಾಡಿದೆ.
ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ವಿರೋಧಿ ರಂಗ ರಚನೆಗೆ ಮಾರ್ಗಸೂಚಿ ರೂಪಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಶುಕ್ರವಾರ ಬಿಹಾರದ ಪಾಟ್ನಾದಲ್ಲಿ ಸಭೆ ನಡೆಸಿದ್ದಾರೆ. ಜನತಾದಳ (ಯುನೈಟೆಡ್) ನ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರು ಸಭೆಯನ್ನು ಆಯೋಜಿಸಿದ್ದರು.

ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಜೆಡಿಯು ಮತ್ತು ಇತರ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತುರ್ತು ಪರಿಸ್ಥಿತಿಯಲ್ಲಿ "ಪ್ರಜಾಪ್ರಭುತ್ವದ ಕೊಲೆ" ಯನ್ನು ಕಂಡ ಕೆಲವು ನಾಯಕರು ಪಾಟ್ನಾದಲ್ಲಿ ಕಾಂಗ್ರೆಸ್ನ ಪರಾಕಾಷ್ಠೆಯ ಅಡಿಯಲ್ಲಿ ಜಮಾಯಿಸಿರುವುದು ವ್ಯಂಗ್ಯ ಎಂದು ಲೇವಡಿ ಮಾಡಿದ್ದಾರೆ.
ಅವರು ಪ್ರಧಾನಿ ಮೋದಿಯನ್ನು ತಾವಾಗಿಯೇ ಎದುರಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ. "ಪ್ರಧಾನಿ ಮೋದಿಯವರನ್ನು ಸೋಲಿಸಲು ಕಾಂಗ್ರೆಸ್ ಅಸಮರ್ಥ ಎಂದು ಬಹಿರಂಗವಾಗಿ ಘೋಷಿಸಿದ್ದಕ್ಕಾಗಿ ನಾನು ವಿಶೇಷವಾಗಿ ಕಾಂಗ್ರೆಸ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಮೋದಿಯನ್ನು ಸೋಲಿಸಲು ಅದಕ್ಕೆ ಬೇರೆ ಪಕ್ಷಗಳ ಬೆಂಬಲದ ಅಗತ್ಯವಿದೆ" ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.
"ಅಧಿಕಾರವು ಅರಮನೆಯಿಂದ ಜನರತ್ತ ಸಾಗಿದೆ. ಅದಕ್ಕಾಗಿಯೇ ತಮ್ಮ ರಾಜಕೀಯ ಪರಂಪರೆಯ ಬಗ್ಗೆ ಹೆಮ್ಮೆಪಡುವ ಜನರು ಈಗ ತುರ್ತು ಪರಿಸ್ಥಿತಿಯಲ್ಲಿ ಯಾರನ್ನು ಕಂಬಿ ಹಿಂದೆ ಹಾಕಿದ್ದರೋ ಅವರ ಬಳಿಗೆ ಹೋಗಬೇಕಾಗಿದೆ" ಎಂದು ಕಿಡಿ ಕಾರಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ಮುಸುಕಿನ ದಾಳಿ ನಡೆಸಿದ ಸ್ಮೃತಿ ಇರಾನಿ, ರಾಜ್ಯದ ಭಾಗಲ್ಪುರ್ ಜಿಲ್ಲೆಯಲ್ಲಿ ಇತ್ತೀಚೆಗೆ ಗಂಗಾನದಿಯ ಮೇಲಿನ ಸೇತುವೆ ಕುಸಿತವನ್ನು ಉಲ್ಲೇಖಿಸಿದ್ದಾರೆ. "ಅವರು ಯಾವ ರೀತಿಯ ಪ್ರಜಾಪ್ರಭುತ್ವ ಸೇತುವೆಯನ್ನು ಕಟ್ಟುತ್ತಾರೆ, ಅವರು ಸೇತುವೆಯನ್ನು ನಿರ್ಮಿಸಲು ಸಾಧ್ಯವಿಲ್ಲ". ಅಭಿವೃದ್ಧಿ ವಿಷಯಗಳಲ್ಲಿ ಒಂದಾಗಲು ಸಾಧ್ಯವಾಗದ ಜನರು ಈಗ ಬ್ಲ್ಯಾಕ್ಮೇಲ್ ಮಾರ್ಗವನ್ನು ಅನುಸರಿಸುತ್ತಿದ್ದಾರೆ ಎಂದು ಸ್ಮೃತಿ ಇರಾನಿ ಕೆಣಕಿದ್ದಾರೆ.
-
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications