ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವಂತೆ ಅಖಿಲೇಶ್ ಯಾದವ್, ಮಾಯಾವತಿಗೆ ಕಾಂಗ್ರೆಸ್ ಆಹ್ವಾನ
ಲಖನೌ, ಡಿಸೆಂಬರ್ 26 : ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಬಿಎಸ್ಪಿ ವರಿಷ್ಠೆ ಮಾಯಾವತಿ ಮತ್ತು ಆರ್ಎಲ್ಡಿಯ ಜಯಂತ್ ಚೌಧರಿ ಸೇರಿದಂತೆ ಬಿಜೆಪಿಯೇತರ ಪಕ್ಷಗಳ ಹಲವು ನಾಯಕರನ್ನು ಉತ್ತರ ಪ್ರದೇಶದ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಆಹ್ವಾನಿಸಿದೆ.
ಲಕ್ನೋ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿರುವ ಮಾಜಿ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಅವರನ್ನು ಯಾತ್ರೆಗೆ ಆಹ್ವಾನಿಸಲಾಗಿದೆ. ವಿವಿಯ ಮತ್ತೊಬ್ಬ ಪ್ರಾಧ್ಯಾಪಕ ರವಿಕಾಂತ್ ಅವರಿಗೂ ಆಹ್ವಾನ ನೀಡಲಾಗಿದೆ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಜನವರಿ 3 ರಂದು ಗಾಜಿಯಾಬಾದ್ನ ಲೋನಿ ಮೂಲಕ ಉತ್ತರ ಪ್ರದೇಶವನ್ನು ಪ್ರವೇಶಿಸಲಿದೆ. ನಂತರ ಅದು ಬಾಗ್ಪತ್ ಮತ್ತು ಶಾಮ್ಲಿ ಮೂಲಕ ಹರಿಯಾಣವನ್ನು ಪ್ರವೇಶಿಸುತ್ತದೆ.

ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಪ್ರಮುಖ ವಿರೋಧ ಪಕ್ಷದ ನಾಯಕರಿಗೆ ಪಕ್ಷ ಆಹ್ವಾನ ನೀಡಿದೆ ಎಂದು ಕಾಂಗ್ರೆಸ್ ವಕ್ತಾರ ಅಶೋಕ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.
ಜನರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶವಿಲ್ಲದ ಪ್ರಸ್ತುತ ದಿನಗಳಲ್ಲಿ, ಜನರ ಮನಸ್ಸನ್ನು ತಿಳಿದುಕೊಳ್ಳಲು ಈ ಯಾತ್ರೆ ಏಕೈಕ ಆಯ್ಕೆಯಾಗಿದೆ ಎಂದು ಅಶೋಕ್ ಸಿಂಗ್ ಹೇಳಿದ್ದಾರೆ.
ಎಲ್ಲ ವಿಪಕ್ಷಗಳು ಈ ಸರ್ಕಾರದ ಬಗ್ಗೆ ಬಹುತೇಕ ಒಂದೇ ಅಭಿಪ್ರಾಯವನ್ನು ಹೊಂದಿರುವುದರಿಂದ ಯಾತ್ರೆಯಲ್ಲಿ ಭಾಗವಹಿಸಲು ಅವರನ್ನು ಆಹ್ವಾನಿಸಲಾಗಿದೆ ಎಂದು ಅಶೋಕ್ ಸಿಂಗ್ ತಿಳಿಸಿದ್ದಾರೆ.

ಯಾದವ್, ಮಾಯಾವತಿ ಮತ್ತು ಚೌಧರಿ ಅವರಲ್ಲದೆ, ಎಸ್ಪಿ ಶಾಸಕ ಶಿವಪಾಲ್ ಸಿಂಗ್ ಯಾದವ್, ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಮಿಶ್ರಾ, ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಓಂಪ್ರಕಾಶ್ ರಾಜ್ಭರ್ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಕಾರ್ಯದರ್ಶಿ ಅತುಲ್ ಅಂಜನ್ ಅವರನ್ನು ಕಾಂಗ್ರೆಸ್ ಆಹ್ವಾನಿಸಿದೆ ಎಂದು ಅವರು ಹೇಳಿದ್ದಾರೆ.
ಯಾತ್ರೆಯ ರಾಜ್ಯ ಸಂಯೋಜಕರಾಗಿರುವ ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರು ಕಳೆದ ವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಭಾರತ್ ಜೋಡೋ ಯಾತ್ರೆಯು ಯಾವುದೇ ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಇಡೀ ದೇಶದ ವಿವಿಧ ಪಕ್ಷಗಳ ನಾಯಕರನ್ನು ಅದರಲ್ಲಿ ಭಾಗವಹಿಸಲು ಆಹ್ವಾನಿಸಲಾಗುವುದು ಎಂದು ಹೇಳಿದ್ದರು. ಆದರೆ, ಆಗ ಆಹ್ವಾನಿತ ನಾಯಕರ ಹೆಸರನ್ನು ಅವರು ಹಂಚಿಕೊಂಡಿರಲಿಲ್ಲ.
ಈ ವರ್ಷದ ಆರಂಭದಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪ್ರಚಾರದ ನೇತೃತ್ವ ವಹಿಸಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶದ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಸಾಗುವ ಯಾತ್ರೆಯು ಈಗಾಗಲೇ 10 ರಾಜ್ಯಗಳಲ್ಲಿ ಕ್ರಮಿಸಿದೆ. 2,800 ಕಿ.ಮೀ.ಗೂ ಹೆಚ್ಚು ಪ್ರಯಾಣಿಸಿರುವ ಯಾತ್ರೆಯು ಒಂಬತ್ತು ದಿನಗಳ ಚಳಿಗಾಲದ ವಿರಾಮದಲ್ಲಿದೆ. ಜನವರಿ 3 ರಂದು ಪುನರಾರಂಭವಾಗಲಿದೆ. ಇದು ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭಗೊಂಡಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications