ಸಚಿನ್ ಪೈಲಟ್ ಅಮಾನತು: ಕೊನೆಗೂ ಮೌನ ಮುರಿದ ರಾಹುಲ್ ಗಾಂಧಿ
ನವದೆಹಲಿ, ಜುಲೈ 15: ತಮ್ಮ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸಚಿನ್ ಪೈಲಟ್ ತಲೆದಂಡದ ನಂತರ, ಕೊನೆಗೂ ರಾಹುಲ್ ಗಾಂಧಿ ಈ ವಿಚಾರದಲ್ಲಿ ಮೌನ ಮುರಿದಿದ್ದಾರೆ.
Recommended Video
ಪಕ್ಷದ ವಿದ್ಯಾರ್ಥಿ ಘಟಕ ಎನ್ಎಸ್ಯುಐನ ಸಭೆಯಲ್ಲಿ ಮಾತನಾಡುತ್ತಿದ್ದ ರಾಹುಲ್, "ಪಕ್ಷ ತೊರೆಯಲು ಬಯಸುವವರು ಪಕ್ಷವನ್ನು ಬಿಟ್ಟು ಹೋಗಬಹುದು. ಇದರಿಂದ, ನಿಮ್ಮಂತಹ ಯುವ ಮುಖಂಡರಿಗೆ ಪಕ್ಷದ ಬಾಗಿಲು ತೆರೆದಂತಾಗುತ್ತದೆ" ಎಂದು ಹೇಳಿದರು.
ಸಚಿನ್ ಪೈಲಟ್ ಹೆಸರನ್ನು ರಾಹುಲ್ ಗಾಂಧಿ ಉಲ್ಲೇಖಿಸದಿದ್ದರೂ, ವಿದ್ಯಾರ್ಥಿ ಘಟಕದ ಸಭೆಯಲ್ಲಿ ರಾಹುಲ್ ಗಾಂಧಿ, ಪೈಲಟ್ ಅವರನ್ನು ಉಲ್ಲೇಖಿಸಿಯೇ ಈ ಮಾತನ್ನು ಹೇಳಿದ್ದಾರೆ. ಆಮೂಲಕ, ಸಚಿನ್ ಪೈಲಟ್, ಕಾಂಗ್ರೆಸ್ ತೊರೆಯುವುದಿದ್ದರೆ ಅಭ್ಯಂತರವಿಲ್ಲ ಎನ್ನುವ ನಿರ್ಧಾರಕ್ಕೆ ಕಾಂಗ್ರೆಸ್ ಬಂದಂತಿದೆ ಎಂದೇ ವ್ಯಾಖ್ಯಾನಿಸಲಾಗುತ್ತದೆ.
ಮಧ್ಯಪ್ರದೇಶದ ಯುವ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ರೀತಿಯಲ್ಲಿಯೇ ಸಚಿನ್ ಪೈಲಟ್ ಕಾಂಗ್ರೆಸ್ ತೊರೆಯಬಹುದು ಎನ್ನುವ ಮಾತಿಗೆ ಸದ್ಯ ಪೈಲಟ್ ಪ್ರತಿಕ್ರಿಯೆ ನೀಡಿ, ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟನೆಯನ್ನು ನೀಡಿದ್ದಾಗಿದೆ.
|
ಪಕ್ಷ ವಿರೋಧಿ ಚಟುವಟಿಕೆಯನ್ನು ಸಹಿಸುವುದಿಲ್ಲ
ಸಚಿನ್ ಪೈಲಟ್ ಬಂಡಾಯ ಎದ್ದಾಗ, ಕಾಂಗ್ರೆಸ್ಸಿನ ಹಿರಿಯ ಮುಖಂಡ ಕಪಿಲ್ ಸಿಬಲ್ ಕೂಡಾ ಬೇಸರ ವ್ಯಕ್ತಪಡಿಸಿದ್ದರು. ಪಕ್ಷ ಎತ್ತ ಸಾಗುತ್ತಿದೆ ಎಂದು ಟ್ವೀಟ್ ಮಾಡಿದ್ದರು. ಎನ್ಎಸ್ಯುಐ ಸಭೆಯಲ್ಲಿ ರಾಹುಲ್ ಗಾಂಧಿ, ಪಕ್ಷ ವಿರೋಧಿ ಚಟುವಟಿಕೆಯನ್ನು ಸಹಿಸುವುದಿಲ್ಲ ಎನ್ನುವ ರೀತಿಯಲ್ಲಿ ಮಾತನಾಡಿದ್ದಾರೆ.

ಕಮಲ್ ನಾಥ್ ಮತ್ತು ಅಶೋಕ್ ಗೆಹ್ಲೋಟ್
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ, ಯುವ ನಾಯಕರಿಗೇ ಮಣೆ ಹಾಕಬೇಕೆಂದು ರಾಹುಲ್ ಗಾಂಧಿ ಒತ್ತಡ ತಂದಿದ್ದರು. ಆದರೆ, ಕಮಲ್ ನಾಥ್ ಮತ್ತು ಅಶೋಕ್ ಗೆಹ್ಲೋಟ್, ಇಬ್ಬರೂ, ಸೋನಿಯಾ ಗಾಂಧಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಆ ವೇಳೆಯೇ, ಸಿಂಧಿಯಾ ಮತ್ತು ಪೈಲಟ್, ಹೈಕಮಾಂಡ್ ವಿರುದ್ದ ಬೇಸರಗೊಂಡಿದ್ದರು.
|
ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಸಂಜಯ್ ಝಾ
ಸಚಿನ್ ಪೈಲಟ್ ಪರ ಹೇಳಿಕೆ ನೀಡಿದ್ದಕ್ಕಾಗಿ ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಸಂಜಯ್ ಝಾ ಅವರನ್ನು ಅಮಾನತುಗೊಳಿಸಲಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿರುವ ಝೂ, ""ಕಾಂಗ್ರೆಸ್ ಸಿದ್ಧಾಂತಕ್ಕೆ ನಾನು ನಿಷ್ಠನಾಗಿದ್ದೇನೆ. ನನ್ನ ನಿಷ್ಠೆಯು ಯಾವುದೇ ವ್ಯಕ್ತಿ ಅಥವಾ ಕುಟುಂಬಕ್ಕೆ ಅಲ್ಲ. ನಾನು ಗಾಂಧಿ-ನೆಹರೂ ಆದರ್ಶವಾದಿಯಾಗಿ ಉಳಿದಿದ್ದೇನೆ. ಯುದ್ಧ ಈಗ ಪ್ರಾರಂಭವಾಗಿದೆ" ಇದು ಝೂ ಮಾಡಿರುವ ಟ್ವೀಟ್.
|
ಪ್ರಿಯಾ ದತ್ ಟ್ವೀಟ್
'ನನ್ನ ಇನ್ನೋರ್ವ ಸ್ನೇಹಿತ ಪಕ್ಷ ತೊರೆದರು. ಸಿಂಧಿಯಾ ಮತ್ತು ಪೈಲಟ್ ನನ್ನ ಸ್ನೇಹಿತರಾಗಿದ್ದವರು. ಇಬ್ಬರು ಯುವ ನಾಯಕರು, ಸಾಮರ್ಥ್ಯವುಳ್ಲವರು ಪಕ್ಷದಿಂದ ಹೊರಹೋಗುತ್ತಿರುವುದು ವಿಷಾದನೀಯ. ಪಕ್ಷದ ಕಷ್ಟದ ಸಮಯದಲ್ಲಿ ಸಂಘಟನೆ ಮಾಡಿದ್ದವರು. ಮಹತ್ವಾಕಾಂಕ್ಷೆ ಹೊಂದುವುದು ತಪ್ಪಲ್ಲ"ಎಂದು ಪ್ರಿಯಾ ದತ್ ಟ್ವೀಟ್ ಮಾಡಿದ್ದಾರೆ.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications