ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಇಬ್ಬರ ಗುಣಗಳಿರುವ ಬಾಳ ಸಂಗಾತಿಯೊಂದಿಗೆ ಜೀವನ ಎಂದ ರಾಹುಲ್ ಗಾಂಧಿ
ನವದೆಹಲಿ, ಡಿ. 29: ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಬಾಳ ಸಂಗಾತಿಯಾಗುವವರ ಕುರಿತು ಮಾತನಾಡಿದ್ದಾರೆ.
ಭಾರತ್ ಜೋಡೋ ಯಾತ್ರೆ ವೇಳೆ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ್ದು, ತಮ್ಮ ತಾಯಿ ಸೋನಿಯಾ ಗಾಂಧಿ ಮತ್ತು ಅಜ್ಜಿ ಇಂದಿರಾ ಗಾಂಧಿ ಅವರ ಗುಣಗಳನ್ನು ಹೊಂದಿರುವ ಸಂಗಾತಿಯೊಂದಿಗೆ ಜೀವನ ನಡೆಸಲು ಬಯಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ದೇಶಾದ್ಯಂತ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಪಾದಯಾತ್ರೆ ಮಾಡುತ್ತಲೇ ಯೂಟ್ಯೂಬ್ ಚಾನೆಲ್ಗೆ ಸಂದರ್ಶನ ನೀಡಿದ್ದಾರೆ. ಈ ವೇಳೆ ಇಂದಿರಾ ಗಾಂಧಿಯಂತಹ ಮಹಿಳೆಯೊಂದಿಗೆ ಜೀವನ ನಡೆಸಲು ಬಯಸುತ್ತಿರಾ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ಈ ಪ್ರಶ್ನೆಗೆ ಉತ್ತರಿಸಿರುವ ಅವರು ತಮ್ಮ ಅಜ್ಜಿ, ಮಾಜಿ ಪ್ರಧಾನಿ ಇಂದಿರ ಆಗಾಂಧಿ ಅವರನ್ನು "ನನ್ನ ಜೀವನದ ಪ್ರೀತಿ ಮತ್ತು ನನ್ನ ಎರಡನೇ ತಾಯಿ" ಎಂದು ಕರೆದಿದ್ದಾರೆ.
"ನಾನು ಆಕೆಯದ್ದೇ ಗುಣಗಳನ್ನು ಹೊಂದಿರುವ ಮಹಿಳೆಗೆ ಆದ್ಯತೆ ನೀಡುತ್ತೇನೆ ಆದರೆ, ನನ್ನ ತಾಯಿ ಮತ್ತು ಅಜ್ಜಿಯ ಗುಣಗಳು ಆಕೆಯಲ್ಲಿದ್ದರೇ ಒಳ್ಳೆಯದು" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಭಾರತ ಐಕ್ಯತಾ ಪಾದಯಾತ್ರೆಯನ್ನು ಮುನ್ನಡೆಸುತ್ತಿರುವ ಮಾಜಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಮೋಟರ್ಸೈಕಲ್ ಮತ್ತು ಸೈಕಲ್ಗಳನ್ನು ಓಡಿಸುವ ಬಗ್ಗೆ ತಮಗಿರು ಪ್ರೀತಿಯ ಬಗ್ಗೆ ಮಾತನಾಡಿದ್ದಾರೆ . ಈ ವೇಳೆ ಎಲೆಕ್ಟ್ರಿಕ್ ಮೋಟಾರ್ಗಳೊಂದಿಗೆ ಬೈಸಿಕಲ್ ಮತ್ತು ಮೌಂಟೇನ್ ಬೈಕ್ಗಳನ್ನು ತಯಾರಿಸುವ ಚೀನಾದ ಎಲೆಕ್ಟ್ರಿಕ್ ಕಂಪನಿಯನ್ನು ಉಲ್ಲೇಖಿಸಿದ್ದಾರೆ.

ತಮ್ಮ ಟ್ವಿಟರ್ ಹ್ಯಾಂಡಲ್ನಲ್ಲಿ ಸಂದರ್ಶನದ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, ತಾನು ಸ್ವಂತ ಕಾರನ್ನು ಹೊಂದಿಲ್ಲ ಎಂಬುದನ್ನು ಬಹಿರಂಗ ಪಡಿಸಿದ್ದಾರೆ.
"ನನಗೆ ನಿಜವಾಗಿಯೂ ಕಾರುಗಳಲ್ಲಿ, ಮೋಟಾರು ಬೈಕ್ಗಳಲ್ಲಿ ಆಸಕ್ತಿ ಇಲ್ಲ, ಆದರೆ ನನಗೆ ಮೋಟಾರು ಬೈಕುಗಳನ್ನು ಓಡಿಸಲು ಆಸಕ್ತಿ ಇದೆ. ನಾನು ಕಾರನ್ನು ಸರಿಪಡಿಸಬಲ್ಲೆ. ಆದರೆ, ನನಗೆ ಕಾರುಗಳ ಹುಚ್ಚಿಲ್ಲ" ಎಂದು ಹೇಳಿದ್ದಾರೆ.
ಸೆಪ್ಟಂಬರ್ ತಿಂಗಳಿನಲ್ಲಿ ತಮಿಳುನಾಡಿನ ಕನ್ಯಾಕುರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆ ಜನವರಿಯಲ್ಲಿ ಜಮ್ಮು ಕಾಶ್ಮೀರದಲ್ಲಿ ಕೊನೆಯಾಗಲಿದೆ. ಈ ಯಾತ್ರೆಯು ಈಗಾಗಲೇ ಕರ್ನಾಟಕ, ತಮಿಳುನಾಡು, ಕೇರಳ ಮಹಾರಾಷ್ಟ್ರ, ತೆಲಂಗಾಣ, ರಾಜಸ್ಥಾನ ಸೇರಿ ಹಲವು ರಾಜ್ಯಗಳಲ್ಲಿ ಸಂಚರಿಸಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications