ಕಳಪೆ ಪ್ರದರ್ಶನದ ಸತ್ಯವನ್ನು ಕಾಂಗ್ರೆಸ್ ಒಪ್ಪಿಕೊಳ್ಳಲೇಬೇಕು: ತಾರೀಖ್ ಅನ್ವರ್
ನವದೆಹಲಿ, ನವೆಂಬರ್ 12: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೆಟ್ಟ ಪ್ರದರ್ಶನ ನೀಡಿದೆ ಎಂಬ ಸತ್ಯವನ್ನು ಪಕ್ಷ ಒಪ್ಪಿಕೊಳ್ಳಲೇಬೇಕು ಎಂದು ಕಾಂಗ್ರೆಸ್ ಮುಖಂಡ ಮತ್ತು ಪ್ರಧಾನ ಕಾರ್ಯದರ್ಶಿ ತಾರೀಖ್ ಅನ್ವರ್ ಹೇಳಿದ್ದಾರೆ.
ಸರಣಿ ಟ್ವೀಟ್ಗಳನ್ನು ಮಾಡಿರುವ ತಾರೀಖ್, ಚುನಾವಣೆಯಲ್ಲಿ ಕಾಂಗ್ರೆಸ್ನ ಕಳಪೆ ಪ್ರದರ್ಶನ ಮಹಾಘಟಬಂಧನ ಸರ್ಕಾರ ರಚನೆಯಿಂದ ವಂಚಿತವಾಗುವಂತೆ ಮಾಡಿತು ಎಂದಿದ್ದಾರೆ. ಪಕ್ಷದ ಈ ಹೀನಾಯ ಸೋಲಿನ ಬಗ್ಗೆ ತುರ್ತು ಮತ್ತು ಆಳವಾದ ಆತ್ಮಾವಲೋಕನ ನಡೆಸಬೇಕಿದೆ ಎಂದು ಸಲಹೆ ನೀಡಿದ್ದಾರೆ.
'ನಾವು ಸತ್ಯವನ್ನು ಒಪ್ಪಿಕೊಳ್ಳಲೇಬೇಕು. ಕಾಂಗ್ರೆಸ್ನ ಕಳಪೆ ಪ್ರದರ್ಶನದಿಂದಾಗಿ ಬಿಹಾರವು ಮಹಾಘಟಬಂಧನ ಸರ್ಕಾರ ಹೊಂದುವುದರಿಂದ ವಂಚಿತವಾಯಿತು' ಎಂದು ತಾರೀಖ್ ಅನ್ವರ್ ಹೇಳಿದ್ದಾರೆ.

'ಕಾಂಗ್ರೆಸ್ ತಾನು ಎಲ್ಲಿ ಎಡವಿದ್ದು ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಹಾಗೆಯೇ ಬಿಹಾರದಲ್ಲಿ ಎಐಎಂಐಎಂ ಪ್ರವೇಶ ಪಡೆದಿರುವುದು ಒಳ್ಳೆಯ ಸೂಚನೆಯಲ್ಲ. ಎಲ್ಲ ಮಾದರಿಯಲ್ಲಿನ ಕೋಮುವಾದವನ್ನೂ ಕಾಂಗ್ರೆಸ್ ವಿರೋಧಿಸುತ್ತದೆ. ಬಿಜೆಪಿಯು ಹಿಂದೂಗಳನ್ನು ಸೇರಿಸುವಂತೆಯೇ ಎಐಎಂಐಎಂ ಮುಸ್ಲಿಮರ ಬೆಂಬಲವನ್ನು ಕ್ರೋಡೀಕರಿಸುತ್ತದೆ. ಇಬ್ಬರೂ ಒಬ್ಬರಿಗೊಬ್ಬರು ನೆರವಾಗುತ್ತಾರೆ' ಎಂದು ಟೀಕಿಸಿದ್ದಾರೆ.
'ಇದು ಸಮಾಜಕ್ಕೆ ದೊಡ್ಡ ಪ್ರಮಾಣದಲ್ಲಿ ಒಳ್ಳೆಯ ಸಂಗತಿಯಲ್ಲ. ಜನಸಾಂದ್ರತೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹೆಸರಾದ ಮುಸ್ಲಿಮರು ಇರುವ ಕೋಸಿ ಸೀಮಾಂಚಲದಲ್ಲಿ ಎಐಎಂಐಎಂ ತನ್ನ ಖಾತೆ ತೆರೆದಿದೆ. 70 ಸೀಟುಗಳಲ್ಲಿ ಸ್ಪರ್ಧಿಸಿ 51ರಲ್ಲಿ ಪಕ್ಷವು ಸೋಲು ಕಂಡಿರುವುದು ಭಾರಿ ಹಿನ್ನಡೆಯಾಗಿದೆ' ಎಂದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications