ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ನಡುವೆ ಕಿತ್ತಾಟ
ನವದೆಹಲಿ, ಮಾರ್ಚ್ 2: ಕಾಂಗ್ರೆಸ್ ಪಕ್ಷದ ಕೇಂದ್ರದಲ್ಲಿನ ಪ್ರಮುಖ ನಾಯಕರ ನಡುವಿನ ಸಂಘರ್ಷ ಭುಗಿಲೆದ್ದಿದೆ. ಹಿರಿಯ ಮುಖಂಡರಾದ ಆನಂದ್ ಶರ್ಮಾ ಮತ್ತು ಅಧೀರ್ ರಂಜನ್ ಚೌಧುರಿ ನಡುವೆ ತೀವ್ರ ವಾಕ್ಸಮರ ನಡೆಯುತ್ತಿದೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜಾತ್ಯಾತೀತ ದಳ (ಐಎಸ್ಎಫ್) ಜತೆ ಕಾಂಗ್ರೆಸ್ನ ಹೊಂದಾಣಿಕೆಯನ್ನು ಆನಂದ್ ಶರ್ಮಾ ಪ್ರಶ್ನಿಸಿದ್ದರು. ಕೋಮುವಾದದ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಆಯ್ಕೆಗಳನ್ನು ಹುಡುಕಬಾರದು ಎಂದು ಅವರು ಹೇಳಿದ್ದರು.
ಕಾಂಗ್ರೆಸ್ನ ನಾಯಕತ್ವದ ವಿರುದ್ಧ ಕಳೆದ ವರ್ಷ ಪತ್ರ ಬರೆದಿದ್ದ 'ಜಿ-23' ನಾಯಕರ ಗುಂಪಿನ ಸದಸ್ಯರಾಗಿರುವ ಆನಂದ್ ಶರ್ಮಾ, ಐಎಸ್ಎಫ್ನಂತಹ ಪಕ್ಷದೊಂದಿಗಿನ ಕಾಂಗ್ರೆಸ್ ಮೈತ್ರಿಯು ಕಾಂಗ್ರೆಸ್ನ ಸೈದ್ಧಾಂತಿಕ ನಿಲುವಿಗೆ ಪೆಟ್ಟು ನೀಡುತ್ತದೆ. ಈ ಮೈತ್ರಿಯ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪರಾಮರ್ಶೆ ನಡೆಸಬೇಕು ಎಂದು ಒತ್ತಾಯಿಸಿದ್ದರು.
ಇದಕ್ಕೆ ತಿರುಗೇಟು ನೀಡಿರುವ ಪಶ್ಚಿಮ ಬಂಗಾಳ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧುರಿ, ಆನಂದ್ ಶರ್ಮಾ ಅವರ ಟೀಕೆಯು ಬಿಜೆಪಿಯ ಧ್ರುವೀಕರಣ ಕಾರ್ಯಸೂಚಿಗೆ ಅನುಕೂಲ ಮಾಡಿಕೊಡುವುದೇ ಆಗಿದೆ ಎಂದು ಹೇಳಿದ್ದಾರೆ. ಮುಂದೆ ಓದಿ.

ವಾಸ್ತವ ತಿಳಿದುಕೊಳ್ಳಿ
'ಆನಂದ್ ಶರ್ಮಾ ಅವರೇ ವಾಸ್ತವಗಳನ್ನು ಅರಿತುಕೊಳ್ಳಿ' ಎಂದು ಆನಂದ್ ಶರ್ಮಾ ವಿರುದ್ಧ ಸರಣಿ ಟ್ವೀಟ್ಗಳನ್ನು ಮಾಡಿರುವ ಅಧೀರ್ ರಂಜನ್, 'ಕಾಂಗ್ರೆಸ್ಸಿಗರ ಒಂದು ಆಯ್ದ ಭಿನ್ನಮತೀಯರ ಗುಂಪು ವೈಯಕ್ತಿಕ ಹಿತಕರ ಜಾಗವನ್ನು ಯಾವಾಗಲೂ ನೋಡುತ್ತಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳುವುದನ್ನು ನಿಲ್ಲಿಸಲಿ' ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಮೈತ್ರಿಕೂಟದ ಭಾಗ
'ಸಿಪಿಎಂ ನೇತೃತ್ವದ ಎಡಪಕ್ಷಗಳು ಪಶ್ಚಿಮ ಬಂಗಾಳದಲ್ಲಿ ಜಾತ್ಯತೀಯ ಮೈತ್ರಿಕೂಟವನ್ನು ಮುನ್ನಡೆಸುತ್ತಿವೆ. ಕಾಂಗ್ರೆಸ್ ಅದರ ಅವಿಭಾಜ್ಯ ಅಂಗವಾಗಿದೆ. ನಾವು ಬಿಜೆಪಿಯ ಕೋಮು ಹಾಗೂ ವಿಭಜನೀಯ ರಾಜಕಾರಣವನ್ನು ಮತ್ತು ದುರಾಡಳಿತವನ್ನು ಸೋಲಿಸಲು ದೃಢನಿರ್ಧಾರ ತೆಗೆದುಕೊಂಡಿದ್ದೇವೆ' ಎಂದು ತಿಳಿಸಿದ್ದಾರೆ.

ಬಿಜೆಪಿ ನೆರವಾಗಲಿದೆ
'ಕಾಂಗ್ರೆಸ್ಗೆ ತನ್ನ ಸೀಟುಗಳ ಸಂಪೂರ್ಣ ಹಂಚಿಕೆಯನ್ನು ಪಡೆದುಕೊಂಡಿದೆ. ಎಡಪಂಥವು ತನ್ನಲ್ಲಿನ ಸೀಟುಗಳನ್ನು ಹೊಸದಾಗಿ ಸೃಷ್ಟಿಯಾದ ಜಾತ್ಯತೀತ ಪಡೆ ಐಎಸ್ಎಫ್ ಜತೆ ಹಂಚಿಕೊಳ್ಳುತ್ತಿದೆ. ಸಿಪಿಎಂ ನೇತೃತ್ವದ ಪಡೆಯನ್ನು ಕೋಮುವಾದಿ ಎಂದು ಕರೆಯುವ ನಿಮ್ಮ ನಿರ್ಧಾರವು ಬಿಜೆಪಿಯ ಧ್ರುವೀಕರಣ ರಾಜಕೀಯಕ್ಕೆ ಮಾತ್ರವೇ ನೆರವಾಗಲಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ.

ಹೇಳಿಕೆ ದುರದೃಷ್ಟಕರ
ತಮ್ಮ ವಿರುದ್ಧ ಅಧೀರ್ ರಂಜನ್ ಅವರು ನೀಡಿರುವ ಹೇಳಿಕೆ 'ದುರದೃಷ್ಟಕರ' ಎಂದು ಆನಂದ್ ಶರ್ಮಾ ವ್ಯಾಖ್ಯಾನಿಸಿದ್ದಾರೆ. 'ನಾನು ಹೇಳಿರುವುದು ನನ್ನ ಕಳವಳದ ಅಭಿವ್ಯಕ್ತಿ. ನಾನು ಕಾಂಗ್ರೆಸ್ನ ಸಿದ್ಧಾಂತಗಳಿಗೆ ಅಚಲವಾಗಿ ಬದ್ಧನಾಗಿದ್ದೇನೆ. ಆದರೆ ನಾನು ಇತಿಹಾಸಕಾರ ಹಾಗೂ ಪಕ್ಷದ ಸಿದ್ಧಾಂತವಾದಿ. ಆ ನೆಲೆಗಟ್ಟಿನಲ್ಲಿ ನನ್ನ ಹೇಳಿಕೆಯನ್ನು ತೆಗೆದುಕೊಳ್ಳಬೇಕು' ಆನಂದ್ ಶರ್ಮಾ ಹೇಳಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications