Rahul Gandhi: ಸಂಸತ್ನಲ್ಲಿ ವಿರೋಧ ಪಕ್ಷದ ನಾಯಕರಾಗುತ್ತಾರಾ ರಾಹುಲ್ ಗಾಂಧಿ?
ದೆಹಲಿ, ಜೂನ್ 06: ಲೋಕಸಭಾ ಚುನಾವಣೆ ಫಲಿತಾಂಶ ಬಂದಿದ್ದು, ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಗದ್ದುಗೆ ಹಿಡಿಯುವುದು ಫಿಕ್ಸ್ ಆಗಿದೆ. ಇದರ ಬೆನ್ನಲ್ಲೇ ಕ್ಯಾಬಿನೆಟ್ ರಚನೆಯ ಸರ್ಕಸ್ ಶುರುವಾಗಿದೆ. ಇತ್ತ ಸಂಸತ್ ವಿರೋಧ ಪಕ್ಷದ ನಾಯಕನ ಆಯ್ಕೆ ಕುರಿತು ಚರ್ಚೆ ನಡೆಯುತ್ತಿದೆ.
ಹೌದು, 2024 ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಬಣದ ಪ್ರಬಲ ಪ್ರದರ್ಶನದ ನಡುವೆ 99 ಸ್ಥಾನಗಳನ್ನು ಕಾಂಗ್ರೆಸ್ ಹೊಂದಿದೆ. ಕಾಂಗ್ರೆಸ್ ಇದೀಗ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಅರ್ಹವಾಗಿದೆ.ಇದರ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರತಿಷ್ಠಿತ ಹುದ್ದೆಯನ್ನು ಅಲಂಕರಿಸಬೇಕೆಂಬ ಕೂಗು ಕೇಳಿ ಬರುತ್ತಿದ್ದು, ಕಾಂಗ್ರೆಸ್ ಸಂಸದ-ಚುನಾಯಿತ ಮಾಣಿಕಂ ಟ್ಯಾಗೋರ್ ಅವರು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಕೆಳಮನೆಯಲ್ಲಿ ವಿರೋಧಪಕ್ಷದ ನಾಯಕರಾಗಬೇಕು ಎಂದು ಒತ್ತಾಯಿಸಿದ್ದಾರೆ.

ನಾನು ನನ್ನ ನಾಯಕ ರಾಹುಲ್ ಗಾಂಧಿಯವರ ಹೆಸರಿನ ಮೇಲೆ ಮತ ಕೇಳಿದೆ. ಅವರು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಬೇಕು ಎಂದು ನಾನು ಭಾವಿಸುತ್ತೇನೆ. ಚುನಾಯಿತ ಕಾಂಗ್ರೆಸ್ ಸಂಸದರೂ ಇದೇ ರೀತಿ ಯೋಚಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಕಾಂಗ್ರೆಸ್ ಸಂಸದೀಯ ಪಕ್ಷ ಯಾವ ರೀತಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು. ನಮ್ಮದು ಡೆಮಾಕ್ರಟಿಕ್ ಪಕ್ಷ ಎಂದು ತಮಿಳುನಾಡಿನ ವಿರುದುನಗರದಿಂದ ಗೆಲುವು ಸಾಧಿಸಿರುವ ಟ್ಯಾಗೋರ್ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ರಾಜ್ಯಸಭಾ ಸಂಸದ ವಿವೇಕ್ ಟಂಖಾ ಅವರು ಈ ಬಗ್ಗೆ ಮಾತನಾಡಿ, ರಾಹುಲ್ ಜಿ ಪ್ರಚಾರವನ್ನು ಮುಂದಾಳತ್ವದಲ್ಲಿ ಮುನ್ನಡೆಸಿದರು. ಅವರು ಪಕ್ಷದ ಮುಖವಾಗಿದ್ದರು. ಅವರು ಲೋಕಸಭೆಯ ಸಂಸದೀಯ ಪಕ್ಷದ ನಾಯಕತ್ವ ವಹಿಸುವ ಕರ್ತವ್ಯವನ್ನು ಹೊಂದಿದ್ದಾರೆ.ರಾಹುಲ್ ಗಾಂಧಿ ಅವರು ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಪಕ್ಷದ ನಾಯಕರು/ಸಂಸದರು ತೆಗೆದುಕೊಳ್ಳಬೇಕಾಗಿದೆ. ಅದು ಅವಿರೋಧ ಆಯ್ಕೆಯಾಗಿರುತ್ತದೆ ಎಂದಿದ್ದಾರೆ
ಇನ್ನೂ ಕಾಂಗ್ರೆಸ್ ನಾಯಕ ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಅವರು ಕೂಡ ರಾಹುಲ್ ಗಾಂಧಿ ಅವರ ಪರ ಬ್ಯಾಟಿಂಗ್ ಬೀಸಿದ್ದಾರೆ. ಆ ಸ್ಥಾನ ಕಾಂಗ್ರೆಸ್ಗೆ ಬರಲಿದೆ ಎಂದು ನಾನು ಭಾವಿಸುತ್ತೇನೆ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ, ಕಾಂಗ್ರೆಸ್ ಪರವಾಗಿ ರಾಹುಲ್ ಗಾಂಧಿ ಅವರೇ ವಿರೋಧ ಪಕ್ಷದ ನಾಯಕರಾಗಬೇಕು ಎಂದು ಹೇಳಿದರು. ಕಾಂಗ್ರೆಸ್ ನಾಯಕರಷ್ಟೇ ಅಲ್ಲ, ಶಿವಸೇನಾದ (ಯುಬಿಟಿ) ಸಂಸದ ಸಂಜಯ್ ರಾವತ್ ಕೂಡ ರಾಹುಲ್ ಗಾಂಧಿಯನ್ನು ಕೊಂಡಾಡಿದ್ದಾರೆ.
ರಾವತ್ ಮಾತನಾಡಿ, ರಾಹುಲ್ ಗಾಂಧಿ ನಾಯಕತ್ವವನ್ನು ಒಪ್ಪಿಕೊಳ್ಳಲು ಸಿದ್ಧರಿದ್ದರೆ, ನಾವು ಏಕೆ ವಿರೋಧಿಸುತ್ತೇವೆ? ಅವರು ಹಲವಾರು ಬಾರಿ ರಾಷ್ಟ್ರೀಯ ನಾಯಕ ಎಂದು ಸಾಬೀತುಪಡಿಸಿದ್ದಾರೆ. ಅವರು ಜನಪ್ರಿಯ ನಾಯಕರಲ್ಲಿ ಒಬ್ಬರು. ನಾವೆಲ್ಲರೂ ಅವರನ್ನು ಪ್ರೀತಿಸುತ್ತೇವೆ. ಮೈತ್ರಿಯಲ್ಲಿ ಯಾವುದೇ ಆಕ್ಷೇಪ ಮತ್ತು ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದ್ದಾರೆ. 2004 ರಲ್ಲಿ ಅವರು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ನಂತರ, 53 ವರ್ಷದ ನಾಯಕ ಅವರು ತಮ್ಮ ಪಕ್ಷ ಅಧಿಕಾರದಲ್ಲಿದ್ದಾಗಲೂ ಯಾವುದೇ ಸಾಂವಿಧಾನಿಕ ಹುದ್ದೆಯನ್ನು ಹೊಂದಿರಲಿಲ್ಲ ಎಂದು ತಿಳಿಸಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications