ಸ್ವಾತಂತ್ರ್ಯದಲ್ಲಿ ಕಾಂಗ್ರೆಸ್ ಕೊಡುಗೆ ದೊಡ್ಡದು, ಆದರೆ, ಇತರರ ಪಾತ್ರವಿಲ್ಲ ಎಂದು ಪ್ರಚಾರ ಮಾಡಬಾರದು: ಅಮಿತ್ ಶಾ
ನವದೆಹಲಿ, ಜ. 11: ಕಾಂಗ್ರೆಸ್ ನೇತೃತ್ವದ ಸ್ವಾತಂತ್ರ್ಯ ಚಳವಳಿಯು ಭಾರತದ ಸ್ವಾತಂತ್ರ್ಯಕ್ಕೆ ದೊಡ್ಡ ಕೊಡುಗೆಯನ್ನು ನೀಡಿದೆ ಎಂದು ಬುಧವಾರ ಒಪ್ಪಿಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆದರೆ, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಇತರರ ಪಾತ್ರವಿಲ್ಲ ಎಂದು ಪ್ರಚಾರ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಲೇಖಕ ಸಂಜೀವ್ ಸನ್ಯಾಲ್ ಬರೆದ 'ರೆವಲ್ಯೂಷನರೀಸ್' ಭಾರತ ತನ್ನ ಸ್ವಾತಂತ್ರ್ಯವನ್ನು ಹೇಗೆ ಪಡೆದುಕೊಂಡಿತು ಎಂಬುದರ ಇನ್ನೊಂದು ಕಥೆ' ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅಮಿತ್ ಶಾ ಮಾತನಾಡಿದ್ದಾರೆ.
ಪುಸ್ತಕದ ಶೀರ್ಷಿಕೆಯಲ್ಲಿರುವ 'ಇತರ ಕಥೆ' ಎಂಬ ಪದವು ಸ್ವಾತಂತ್ರ್ಯ ಹೋರಾಟದಲ್ಲಿ ಇತರರ ಕೊಡುಗೆಗಳ ಇತರ ದೃಷ್ಟಿಕೋನವನ್ನು ಪ್ರಸ್ತುತಪಡಿಸುವ ಪುಸ್ತಕದ ಸಾರಾಂಶವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

"ಇತಿಹಾಸ ಬರವಣಿಗೆ ಮತ್ತು ಶಿಕ್ಷಣದ ಮೂಲಕ ಸಾರ್ವಜನಿಕರ ಮೇಲೆ ಒಂದು ದೃಷ್ಟಿಕೋನವನ್ನು ಹೇರಲಾಗಿದೆ. ಜನರ ಮೇಲೆ ಹೇರಿರುವ ದೃಷ್ಟಿಕೋನದ ಬಗ್ಗೆ, ಅಹಿಂಸಾತ್ಮಕ ಹೋರಾಟವು ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರವನ್ನು ಹೊಂದಿಲ್ಲ, ಇತಿಹಾಸದ ಭಾಗವಲ್ಲ ಎಂದು ನಾನು ಹೇಳುವುದಿಲ್ಲ. ಇದು ಇತಿಹಾಸದ ಒಂದು ಭಾಗ. ಜೊತೆಗೆ ದೊಡ್ಡ ಕೊಡುಗೆಯನ್ನು ನೀಡಿದೆ. ಹಾಗೆಯೇ ಹೋರಾಟದಲ್ಲಿ ವಿವಿಧ ವ್ಯಕ್ತಿಗಳು ಮತ್ತು ಸಂಘಟನೆಗಳ ಕೊಡುಗೆಗಳಿವೆ. ಸ್ವಾತಂತ್ರ್ಯವು ಪ್ರತಿಯೊಬ್ಬರ ಸಾಮೂಹಿಕ ಫಲಿತಾಂಶವಾಗಿದೆ" ಎಂದು ಅಮಿತ್ ಶಾ ತಿಳಿಸಿದ್ದಾರೆ.
"ಕಾಂಗ್ರೆಸ್ ನೇತೃತ್ವದ ಚಳವಳಿಯು ದೇಶದ ಸ್ವಾತಂತ್ರ್ಯಕ್ಕೆ ದೊಡ್ಡ ಕೊಡುಗೆಯನ್ನು ನೀಡಿದೆ. ಆದರೆ ಬೇರೆ ಯಾರೂ ಕೊಡುಗೆ ನೀಡಿಲ್ಲ ಎಂಬ ಈ ನಿರೂಪಣೆ ಸರಿಯಲ್ಲ. ಏಕೆಂದರೆ ನಾವು ದೇಶದ ಸ್ವಾತಂತ್ರ್ಯವನ್ನು ವಿಶ್ಲೇಷಿಸಿದರೆ, ಹಲವಾರು ಜನರು, ಸಂಘಟನೆಗಳು, ಸಿದ್ಧಾಂತಗಳು ಮತ್ತು ಹಲವು ಮಾರ್ಗಗಳು ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿವೆ. ಭಾರತದ ಸ್ವಾತಂತ್ರ್ಯವು ಈ ಎಲ್ಲದರ ಸಾಮೂಹಿಕ ಫಲಿತಾಂಶವಾಗಿದೆ" ಎಂದು ಅಮಿತ್ ಶಾ ಹೇಳಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications