ಲೋಕಪಾಲರ ನೇಮಕ ಸಭೆಯಿಂದ ದೂರ ಉಳಿದ ಖರ್ಗೆ
ನವದೆಹಲಿ, ಮಾರ್ಚ್ 1: ಲೋಕಪಾಲರ ನೇಮಕಕ್ಕಾಗಿ ಪ್ರಧಾನಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಿಂದ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ದೂರ ಉಳಿದಿದ್ದಾರೆ. ವಿಶೇಷ ಆಹ್ವಾನಿತರಾಗಿ ಸಭೆಗೆ ಅವರನ್ನು ಕರೆಯಲಾಗಿತ್ತು. ಆದರೆ 'ವಿಶೇಷ ಆಹ್ವಾನಿತ'ರಾಗಲು ಖರ್ಗೆ ನಿರಾಕರಿಸಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ್ ಖರ್ಗೆ, "ವಿಶೇಷ ಆಹ್ವಾನಿತರ ಹೆಸರಿನಲ್ಲಿ ಸಭೆಗೆ ಆಹ್ವಾನ ನೀಡಿ ದೇಶದ ಪ್ರಮುಖ ಭ್ರಷ್ಟಾಚಾರ ವಿರೋಧಿ ಕಣ್ಗಾವಲು ಸಂಸ್ಥೆಯ ಮುಖ್ಯಸ್ಥರ ನೇಮಕದಲ್ಲಿ ವಿಪಕ್ಷಗಳ ಧ್ವನಿಯನ್ನು ಕಡೆಗಣಿಸಲಾಗಿದೆ. ಲೋಕಪಾಲ್ ಮತ್ತು ಲೋಕಾಯುಕ್ತ ಆಕ್ಟ್ - 2013 ಒಟ್ಟಾರೆ ತನ್ನ ಸಾರದಲ್ಲಿ ಇದನ್ನು ನಿರಾಕರಿಸುತ್ತದೆ," ಎಂದಿದ್ದಾರೆ.
"ಲೋಕಪಾಲರ ನೇಮಕದಲ್ಲಿ ರಚನಾತ್ಮಕ ಭಾಗವಹಿಸುವಿಕೆಯನ್ನು ನಿರಾಕರಿಸಿ ಕೇವಲ ಕಾಗದದ ದಾಖಲೆಗೋಸ್ಕರ ಈ ದಾರಿ ತುಳಿದಿರುವುದು ಅಚ್ಚರಿಯನ್ನು ಉಂಟುಮಾಡಿದೆ," ಎಂದು ಅವರು ಪತ್ರದಲ್ಲಿ ಖಾರವಾಗಿ ಹೇಳಿದ್ದಾರೆ.

"ಇದೇ ವೇಳೆ ಅವರು ಡಿಸೆಂಬರ್ 18, 2014ರಲ್ಲಿ ಲೋಕಪಾಲ ಕಾಯಿದೆ 2013ಕ್ಕೆ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿತ್ತು. ಈ ಮಸೂದೆಯಲ್ಲಿ ವಿಪಕ್ಷ ನಾಯಕನ ಬದಲು ಅತೀ ದೊಡ್ಡ ಪಕ್ಷದ ನಾಯಕ ಎಂದು ಬದಲಿಸಲಾಗಿತ್ತು. ಇದಕ್ಕೆ ಸಂಸತ್ತಿನ ಸ್ಥಾಯೀ ಸಮಿತಿ ಒಪ್ಪಿಗೆ ನೀಡಿಯೂ ಸರಕಾರ ಇದನ್ನು ಅಂಗೀಕಾರ ಮಾಡಿಲ್ಲ," ಎಂದು ಖರ್ಗೆ ದೂರಿದ್ದಾರೆ.
"ಸಭೆಯಲ್ಲಿ ವಿಶೇಷ ಆಹ್ವಾನಿತನಾಗಿ ಯಾವುದೇ ಹಕ್ಕುಗಳಿಲ್ಲದೆ, ಮತ ಚಲಾಯಿಸುವ ಅವಕಾಶವಿಲ್ಲದೆ ಮತ್ತು ಅಭಿಪ್ರಾಯಗಳನ್ನು ದಾಖಲಿಸುವ ಆಯ್ಕೆಯೂ ಇಲ್ಲದೆ ಭಾಗವಹಿಸುವುದು ಕೇವಲ ಆಟಕ್ಕುಂಟು ಲೆಕ್ಕಕಿಲ್ಲದಂತಾಗುತ್ತದೆ," ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications