ದೆಹಲಿಯ ಇಂದಿರಾ ಭವನ ಉದ್ಘಾಟನೆಗೆ ರಾಜ್ಯ ಕಾಂಗ್ರೆಸ್ ಸಚಿವನಿಗೆ ನೋ ಎಂಟ್ರಿ
ನವದೆಹಲಿಯಲ್ಲಿ ಎಐಸಿಸಿ ನೂತನ ಪ್ರಧಾನ ಕಚೇರಿ ಇಂದಿರಾ ಭವನ ಇಂದು ಉದ್ಘಾಟನೆಗೊಂಡಿದೆ. ಕೋಟ್ಲಾ ರಸ್ತೆಯ 9A ನಲ್ಲಿರುವ ಪಕ್ಷದ ಹೊಸ ಪ್ರಧಾನ ಕಚೇರಿಯನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಿದ್ದ ಕಾಂಗ್ರೆಸ್ ಸಚಿವ ಬೈರತಿ ಸುರೇಶ್ ಅವರಿಗೆ ಪ್ರವೇಶ ನಿರ್ಬಂಧಿಸಿರುವ ಘಟನೆ ವರದಿಯಾಗಿದೆ. ಪಾಸ್ ಇಲ್ಲ ಎನ್ನುವ ಕಾರಣಕ್ಕೆ ಬೈರತಿ ಸುರೇಶ್ ಅವರನ್ನು ಅಲ್ಲಿನ ಸಿಬ್ಬಂದಿ ತಡೆದಿದ್ದಾರೆ ಎಂದು ಹೇಳಲಾಗಿದೆ.
ಎಐಸಿಸಿ ನೂತನ ಕೇಂದ್ರ ಕಚೇರಿಯಾಗಿ "ಇಂದಿರಾ ಭವನ"ವನ್ನು ಇಂದು ಧ್ವಜಾರೋಹಣದ ಮೂಲಕ ಲೋಕಾರ್ಪಣೆಗೊಳಿಸಲಾಯಿತು. ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ಈ ನೂತನ ಕಚೇರಿಯನ್ನು ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಕೂಡ ತೆರಳಿದ್ದು, ಈ ವೇಳೆ ಬೈರತಿ ಸುರೇಶ್ ಅವರಿಗೆ ಸಿಬ್ಬಂದಿ ನೋ ಎಂಟ್ರಿ ಎಂದಿದ್ದಾರೆ.

ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹೆಸರನ್ನು ಕಾಂಗ್ರೆಸ್ ಪ್ರಧಾನ ಕಚೇರಿಗೆ ಇಡಲಾಗಿದೆ. ಇಂದಿರಾಗಾಂಧಿ ಅವರು ಪಕ್ಷಕ್ಕೆ ನೀಡಿದ ಕೊಡುಗೆಗಳ ಸ್ಮರಣಾರ್ಥ ಅವರ ಹೆಸರನ್ನೇ ನೂತನ ಕಚೇರಿಗೆ ಇಡಲಾಗಿದೆ. ಈ ಹಿಂದೆಯೇ ಈ ಕಚೇರಿ ಉದ್ಘಾಟನೆಗೆ ಎಲ್ಲ ತಯಾರಿ ನಡೆದಿತ್ತು. ಆದರೆ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡ ಕಾರಣ ಇದು ವಿಳಂಬವಾಗಿತ್ತು. ಸದ್ಯ ಈ ಕಚೇರಿಯನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಿಸಲಾಗಿದೆ.

47 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದ ಕೇಂದ್ರ ಕಚೇರಿಯನ್ನು ಅಕ್ಬರ್ ರಸ್ತೆಗೆ ಸ್ಥಳಾಂತರಿಸಲಾಗಿತ್ತು. ಇನ್ನು ಈ ಕಾರ್ಯಕ್ರಮದಲ್ಲಿ ಮಾತನಾಡಿರುವ ರಾಹುಲ್ ಗಾಂಧಿ, ಹೊಸ ಕೇಂದ್ರ ಕಚೇರಿ ಸಾಮಾನ್ಯ ಕಟ್ಟಡವಲ್ಲ, ದೇಶದ ಮಣ್ಣಿನಿಂದ ಹುಟ್ಟಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಮೋಹನ್ ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್, ಆರೆಸ್ಸೆಸ್ ಮುಖ್ಯಸ್ಥರಾದ ಭಾಗವತ್ ಅವರು ಸಂವಿಧಾನದ ಮೇಲೆ ದಾಳಿಯಾದಾಗ ನಮ್ಮ ಸ್ವಾತಂತ್ರ್ಯದ ಸಂಕೇತವಲ್ಲ ಎಂದರು. ಮೋಹನ್ ಭಾಗವತ್ ಅವರು ಸ್ವತಂತ್ರ ಚಳುವಳಿ, ಸಂವಿಧಾನದ ಬಗ್ಗೆ ತಮ್ಮ ಅಭಿಪ್ರಾಯವನ್ನು ಪ್ರತಿ ಎರಡು ಮೂರು ದಿನಗಳಿಗೊಮ್ಮೆ ರಾಷ್ಟ್ರಕ್ಕೆ ತಿಳಿಸುವ ದಿಟ್ಟತನವನ್ನು ಹೊಂದಿದ್ದಾರೆ.

ಸಂವಿಧಾನ ಅಸಿಂಧು, ಬ್ರಿಟಿಷರ ವಿರುದ್ಧದ ಹೋರಾಟ ಅಸಿಂಧು ಎಂದು ಅವರು ನಿನ್ನೆ ಹೇಳಿದ್ದು ದೇಶದ್ರೋಹ. ಇದನ್ನು ಸಾರ್ವಜನಿಕವಾಗಿ ಹೇಳುವ ಧೈರ್ಯವನ್ನು ಅವರು ಹೊಂದಿದ್ದಾರೆ. ಇದನ್ನೇ ಬೇರೆ ಯಾವುದೇ ದೇಶದಲ್ಲಿ ಮಾಡಿದ್ದರೆ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿರಲಿಲ್ಲ ಎಂದು ಹೇಳುವುದು ಪ್ರತಿಯೊಬ್ಬ ಭಾರತೀಯ ವ್ಯಕ್ತಿಗೆ ಮಾಡಿದ ಅವಮಾನ ಎಂದು ರಾಹುಲ್ ಗಾಂಧಿ ದೂರಿದ್ದಾರೆ. ಅಲ್ಲದೆ ನಾವು ಈ ಅಸಂಬದ್ಧತೆಯನ್ನು ಕೇಳುವುದನ್ನು ನಿಲ್ಲಿಸುವ ಸಮಯ ಇದೀಗ ಬಂದಿದೆ ಎಂದೂ ರಾಹುಲ್ ಹೇಳಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications