ಸದನದಲ್ಲಿ ಅಶ್ಲೀಲ ವಿಡಿಯೋ ನೋಡಿ ಸಿಕ್ಕಿ ಬಿದ್ದ ಕಾಂಗ್ರೆಸ್ ಶಾಸಕ
ಭುವನೇಶ್ವರ, ಡಿ. 15: ಕರ್ನಾಟಕದ ಬ್ಲೂ ಬಾಯ್ಸ್ ನೆನಪಿಸುವಂಥ ಘಟನೆಗೆ ಒಡಿಶಾದ ವಿಧಾನಸಭೆ ಆಧಿವೇಶನ ಕೂಡಾ ಸಾಕ್ಷಿಯಾಗಿದೆ. ಕಾಂಗ್ರೆಸ್ ಶಾಸಕರೊಬ್ಬರು ಮೊಬೈಲ್ ಫೋನಿನಲ್ಲಿ ನೋಡಬಾರದ್ದು ನೋಡಿ ಸಿಕ್ಕಿ ಬಿದ್ದಿದ್ದಾರೆ.
ಒಡಿಶಾದ ಹಿರಿಯ ಕಾಂಗ್ರೆಸ್ ನಾಯಕ ನಬಾ ಕಿಶೋರ್ ದಾಸ್ ಅವರ ಮೇಲೆ ಅಸೆಂಬ್ಲಿಯಲ್ಲಿ ಪ್ರಶ್ನೋತ್ತರ ವೇಳೆ ನಡೆಯುವಾಗ ಅಶ್ಲೀಲ ವಿಡಿಯೋ ನೋಡಿದ ಆರೋಪ ಹೊರೆಸಲಾಗಿದೆ.[ಚಿಟ್ ಫಂಡ್ ವಂಚನೆ, ಸಿಬಿಐ ವಶಕ್ಕೆ ರೂಪದರ್ಶಿ]
ಕಾಂಗ್ರೆಸ್ ಶಾಸಕರ ಈ ಕೃತ್ಯದಿಂದ ನಾವೆಲ್ಲ ತಲೆತಗ್ಗಿಸುವಂತಾಗಿದೆ. ಸದನದ ಮರ್ಯಾದೆ ಮಣ್ಣುಪಾಲಾಗಿದೆ. ತಕ್ಷಣವೇ ಶಾಸಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಬಿಜೆಡಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಪ್ರಮೀಳಾ ಮಲ್ಲಿಕ್ ಅವರು ಆಗ್ರಹಿಸಿದ್ದಾರೆ. ಅದರೆ, ಆರೋಪವನ್ನು ಅಲ್ಲಗೆಳೆದಿರುವ ಕಾಂಗ್ರೆಸ್ ನಾಯಕ, ನಾನು ಇದಕ್ಕೆ ಸದನದಲ್ಲೇ ಉತ್ತರಿಸುತ್ತೇನೆ ಎಂದಿದ್ದಾರೆ.

ಝಾರುಗುಡದ ಶಾಸಕ ಕಿಶೋರ್ ಅವರು ಸದನದಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿರುವ ದೃಶ್ಯಾವಳಿಗಳನ್ನು ಸ್ಥಳೀಯ ಸುದ್ದಿ ವಾಹಿನಿಯೊಂದು ಪ್ರಸಾರ ಮಾಡಿತ್ತು.
'ನನ್ನ ಮೊಬೈಲ್ ನಲ್ಲಿ ವಿಡಿಯೋ ಆಟೋ ಪ್ಲೇ ಆಯಿತು. ಏನು ಎಂದು ನೋಡುತ್ತಿದ್ದೆ ಅಷ್ಟೇ. ಇಂಟರ್ನೆಟ್ ಆನ್ ಮಾಡಿದ ತಕ್ಷಣ ಈ ರೀತಿ ಆಗಿದ್ದು, ತಕ್ಷಣ ಆಫ್ ಮಾಡಿದೆ. ನಾನು ಅಡಲ್ಟ್ ವಿಡಿಯೋ ನೋಡೇ ಇಲ್ಲ' ಎಂದು ದಾಸ್ ಅವರು ಪ್ರತಿಕ್ರಿಯಿಸಿದ್ದಾರೆ. ದಾಸ್ ಅವರ ಹೇಳಿಕೆಗೆ ಕಾಂಗ್ರೆಸ್ ಶಾಸಕ ಪ್ರಫುಲ ಮಾಂಝಿ ಸೇರಿದಂತೆ ಅನೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ.
2012ರ ಫೆಬ್ರವರಿ 7ರಂದು ಕರ್ನಾಟಕದಲ್ಲಿ ವಿಧಾನಸಭಾ ಕಲಾಪ ನಡೆಯುತ್ತಿರುವಾಗ ಕೃಷ್ಣ ಪಾಲೇಮಾರ್ ಮತ್ತು ಸಿ.ಸಿ.ಪಾಟೀಲ್ ಹಾಗೂ ಲಕ್ಷ್ಮಣ್ ಸವದಿ ಅವರು ಅಶ್ಲೀಲ ವಿಡಿಯೋ ನೋಡಿ ಸುದ್ದಿಯಾಗಿದ್ದರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications