ಪತ್ನಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಶಾಸಕ

ಅಸ್ಸಾಂನ ಲಖಿಂಪುರ ಜಿಲ್ಲೆಯ ನೌಬೋಚಾದ ಶಾಸಕ ಭರತ್ ಚಂದ್ರ ನರಹ್ ಅವರು ಇಂದು ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದಾರೆ. ಭರತ್ ಚಂದ್ರ ನರಹ್ ಅವರು ತಮ್ಮ ಪತ್ನಿ ರಾನೀ ನರಹ್ ಅವರನ್ನು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಭರವಸೆ ಹೊಂದಿದ್ದರು.ಆದರೆ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ರಾಜೀನಾಮೆಯನ್ನ ನೀಡಿದ್ದಾರೆ.

ಉದಯ್ ಶಂಕರ್ ಹಜಾರಿಕಾ ಅವರನ್ನು ಲಖಿಂಪುರ ಲೋಕಸಭಾ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸಿದ ಎರಡು ದಿನಗಳ ನಂತರ ನೌಬೋಚಾದ ಶಾಸಕ ಭರತ್ ಚಂದ್ರ ನರಹ್ ಅವರುಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

Congress MLA Chandra Narah resigns day after wife Ranee Narah denied ticket

ನೌಬೋಚಾದ ಶಾಸಕ ಭರತ್ ಚಂದ್ರ ನರಹ್ ಅವರು ಪಿಟಿಐ ಜೊತೆ ಹಂಚಿಕೊಂಡ ಒಂದು ಸಾಲಿನ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ನಾನು ಈ ಮೂಲಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ಗೆ ರಾಜೀನಾಮೆ ನೀಡುತ್ತೇನೆ ಎಂದು ಶಾಸಕರು ಪತ್ರದಲ್ಲಿ ತಿಳಿಸಿದ್ದಾರೆ. ನಿನ್ನೆ ಅಸ್ಸಾಂ ಕಾಂಗ್ರೆಸ್‍ನ ಮಾಧ್ಯಮ ಘಟಕದ ಅಧ್ಯಕ್ಷ ಸ್ಥಾನಕ್ಕೂ ಅವರು ರಾಜೀನಾಮೆ ನೀಡಿದ್ದರು.

ಕಾಂಗ್ರೆಸ್ ಪಕ್ಷವು ಉದಯ್ ಶಂಕರ್ ಹಜಾರಿಕಾ ಅವರನ್ನು ಲಖಿಂಪುರ ಲೋಕಸಭಾ ಕ್ಷೇತ್ರದಿಂದ ತನ್ನ ಅಭ್ಯರ್ಥಿಯನ್ನಾಗಿ ಮಾಡಿದೆ ಎಂದು ತಿಳಿದಿದೆ. ಪಕ್ಷದಿಂದ ಟಿಕೆಟ್ ಘೋಷಣೆಯಾದ ತಕ್ಷಣ ನಾರಾ ಕಾಂಗ್ರೆಸ್ ತೊರೆದಿದ್ದಾರೆ. ಇತ್ತೀಚೆಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಮತ್ತು ಭರತ್ ನಹರ್ ಅವರು ಬಿಜೆಪಿಗೆ ಸೇರಲು ಬಯಸಿದರೆ, ಅವರಿಗೆ ಸ್ವಾಗತ ಎಂದು ಹೇಳಿದ್ದರು. ಇಂದು ನಾರಾ ಪಕ್ಷ ತೊರೆದಿದ್ದು, ಶೀಘ್ರದಲ್ಲೇ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ‌ ಸದ್ಯ ಭರತ್ ಚಂದ್ರ ನರಹ್ ಯಾವುದೇ ಹೇಳಿಕೆಯನ್ನುಸಹ ಈ ಬಗ್ಗೆ ನೀಡಿಲ್ಲ.

ಅಸ್ಸಾಂನಲ್ಲಿ ಈ ಬಾರಿ ಮೂರು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವುದು ಗಮನಾರ್ಹ. ಏಪ್ರಿಲ್ 19 ರಂದು ಮೊದಲ ಹಂತ, ಏಪ್ರಿಲ್ 26 ರಂದು ಎರಡನೇ ಹಂತ ಮತ್ತು ಮೇ 7 ರಂದು ಮೂರನೇ ಹಂತದಲ್ಲಿ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+