ಅಶ್ಲೀಲ ವಿಡಿಯೋ ನೋಡಿದ್ದಕ್ಕೆ ಸದನದಿಂದ ಶಾಸಕ ಅಮಾನತು
ಭುವನೇಶ್ವರ, ಡಿ.16: ಸದನದಲ್ಲಿ ಅಶ್ಲೀಲ ವಿಡಿಯೋ ನೋಡಿ ಸಿಕ್ಕಿ ಬಿದ್ದ ಕಾಂಗ್ರೆಸ್ ಶಾಸಕ ನಬಾ ಕಿಶೋರ್ ದಾಸ್ ಅವರನ್ನು ಒಡಿಶಾ ವಿಧಾನಸಭೆಯಿಂದ ಅಮಾನತುಗೊಳಿಸಲಾಗಿದೆ. ಆದರೆ, ಅಮಾನತು ಆದೇಶ ಕೇವಲ 7 ದಿನಕ್ಕೆ ಸೀಮಿತವಾಗಿದ್ದು, ವಿಪಕ್ಷಗಳು ಹೆಚ್ಚಿನ ಪ್ರಮಾಣದ ತನಿಖೆ ಹಾಗೂ ಶಿಕ್ಷೆಗೆ ಆಗ್ರಹಿಸಿವೆ.
ಒಡಿಶಾದ ವಿಧಾನಸಭೆ ಆಧಿವೇಶನ ನಡೆಯುವ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರೊಬ್ಬರು ಮೊಬೈಲ್ ಫೋನಿನಲ್ಲಿ ನೋಡಬಾರದ್ದು ನೋಡಿ ಸಿಕ್ಕಿ ಬಿದ್ದಿದ್ದರು. ಈ ಬಗ್ಗೆ ಕೊನೆಗೂ ಸ್ಪೀಕರ್ ನಿರಂಜನ್ ಪೂಜಾರಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ಇದಕ್ಕೂ ಮುನ್ನ ಸದನದ ಶಿಸ್ತು ಪಾಲನಾ ಸಮಿತಿಗೆ ಈ ವಿಷಯ ತಲುಪಿ ನಂತರ ಮುಖ್ಯ ಸಚೇತಕ ಅನಂತ್ ದಾಸ್ ಅವರು ನಿರ್ಣಯಕ್ಕೆ ಮನ್ನಣೆ ನೀಡಿದ್ದರು.

ಬಿಜೆಪಿ ಗರಂ: ಪ್ರಕರಣವನ್ನು ಮುಚ್ಚಿ ಹಾಕಲು ಬಿಜೆಡಿ ಯತ್ನಿಸುತ್ತಿದೆ. ಸದನ ಸಮಿತಿ ವರದಿ ಬರುವ ಮುನ್ನವೇ ಆತುರವಾಗಿ ಅಮಾನತು ನಿರ್ಣಯ ಮಂಡಿಸಿ, ಜಾರಿಗೊಳಿಸಲಾಗಿದೆ ಎಂದು ಬಿಜೆಪಿ ಶಾಸಕ ವರ್ಧನ್ ಸಿಂಗ್ ದೇವ್ ಪ್ರತಿಕ್ರಿಯಿಸಿದ್ದಾರೆ.
ಒಡಿಶಾದ ಹಿರಿಯ ಕಾಂಗ್ರೆಸ್ ನಾಯಕ ನಬಾ ಕಿಶೋರ್ ದಾಸ್ ಅವರ ಮೇಲೆ ಅಸೆಂಬ್ಲಿಯಲ್ಲಿ ಪ್ರಶ್ನೋತ್ತರ ವೇಳೆ ನಡೆಯುವಾಗ ಅಶ್ಲೀಲ ವಿಡಿಯೋ ನೋಡಿದ ಆರೋಪ ಹೊರೆಸಲಾಗಿದೆ. ಕಾಂಗ್ರೆಸ್ ಶಾಸಕರ ಈ ಕೃತ್ಯದಿಂದ ನಾವೆಲ್ಲ ತಲೆತಗ್ಗಿಸುವಂತಾಗಿದೆ. ಸದನದ ಮರ್ಯಾದೆ ಮಣ್ಣುಪಾಲಾಗಿದೆ. ತಕ್ಷಣವೇ ಶಾಸಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಬಿಜೆಡಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಪ್ರಮೀಳಾ ಮಲ್ಲಿಕ್ ಅವರು ಆಗ್ರಹಿಸಿದ್ದಾರೆ. ಅದರೆ, ಆರೋಪವನ್ನು ಅಲ್ಲಗೆಳೆದಿರುವ ಕಾಂಗ್ರೆಸ್ ನಾಯಕ, ನಾನು ಇದಕ್ಕೆ ಸದನದಲ್ಲೇ ಉತ್ತರಿಸುತ್ತೇನೆ ಎಂದಿದ್ದರು.
ಝಾರುಗುಡದ ಶಾಸಕ ಕಿಶೋರ್ ಅವರು ಸದನದಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿರುವ ದೃಶ್ಯಾವಳಿಗಳನ್ನು ಸ್ಥಳೀಯ ಸುದ್ದಿ ವಾಹಿನಿಯೊಂದು ಪ್ರಸಾರ ಮಾಡಿತ್ತು.
ನನ್ನ ಮೊಬೈಲ್ ನಲ್ಲಿ ವಿಡಿಯೋ ಆಟೋ ಪ್ಲೇ ಆಯಿತು. ಏನು ಎಂದು ನೋಡುತ್ತಿದ್ದೆ ಅಷ್ಟೇ. ಇಂಟರ್ನೆಟ್ ಆನ್ ಮಾಡಿದ ತಕ್ಷಣ ಈ ರೀತಿ ಆಗಿದ್ದು, ತಕ್ಷಣ ಆಫ್ ಮಾಡಿದೆ. ನಾನು ಅಡಲ್ಟ್ ವಿಡಿಯೋ ನೋಡೇ ಇಲ್ಲ ಎಂದು ದಾಸ್ ಅವರು ಪ್ರತಿಕ್ರಿಯಿಸಿದ್ದಾರೆ. ದಾಸ್ ಅವರ ಹೇಳಿಕೆಗೆ ಕಾಂಗ್ರೆಸ್ ಶಾಸಕ ಪ್ರಫುಲ ಮಾಂಝಿ ಸೇರಿದಂತೆ ಅನೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications