ರಾಜ್ಯಪಾಲ ಬಂಡಾರು ದತ್ತಾತ್ರೇಯ ಮೇಲೆ ಹಲ್ಲೆ ನಡೆಸಿದ ಕಾಂಗ್ರೆಸ್ ಶಾಸಕರು
ಶಿಮ್ಲಾ, ಫೆಬ್ರವರಿ 26: ಹಿಮಾಚಲ ಪ್ರದೇಶದ ವಿಧಾನಸಭೆಯಲ್ಲಿ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ತಳ್ಳಾಡಿದ ದುರ್ಘಟನೆ ನಡೆದಿದೆ. ಬಜೆಟ್ ಅಧಿವೇಶನದ ಮೊದಲವಾದ ಶುಕ್ರವಾರ ವಿಧಾನಸಭೆಯಲ್ಲಿ ಭಾಷಣ ಮಾಡಿ ತೆರಳುವಾಗ ಕೆಲವು ಕಾಂಗ್ರೆಸ್ ಶಾಸಕರು ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.
ರಾಜ್ಯಪಾಲರು ಅಧಿವೇಶನದಲ್ಲಿ ಭಾಷಣ ಮುಗಿಸಿ ತಮ್ಮ ವಾಹನದತ್ತ ಹೋಗುತ್ತಿದ್ದರು. ಆಗ ಕಾಂಗ್ರೆಸ್ ಶಾಸಕರು ಹಲ್ಲೆ ನಡೆಸಿದ್ದಾರೆ. ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ವಿರೋಧಪಕ್ಷದ ನಾಯಕ ಮುಕೇಶ್ ಅಗ್ನಿಹೋತ್ರಿ ಸೇರಿದಂತೆ ಕಾಂಗ್ರೆಸ್ನ ಶಾಸಕರಾದ ಹರ್ಷವರ್ಧನ್ ಚೌಹಾಣ್, ಸುಂದರ್ ಸಿಂಗ್ ಠಾಕೂರ್, ಸತ್ಪಾಲ್ ರಾಜಡಾ ಮತ್ತು ವಿನಯ್ ಕುಮಾರ್ ಅವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಅಂಗೀಕರಿಸಿದ್ದರು ಎಂದು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಭಾರದ್ವಾಜ್ ತಿಳಿಸಿದ್ದಾರೆ.
ಹಿಮಾಚಲ ಪ್ರದೇಶ ವಿಧಾನಸಭೆಯನ್ನು ಸೋಮವಾರ 2 ಗಂಟೆಯವರೆಗೂ ಮುಂದೂಡಲಾಗಿತ್ತು. ಸಚಿವ ಸುರೇಶ್ ಭಾರದ್ವಾಜ್ ಅವರು ಮಂಡಿಸಿದ್ದ ನಿರ್ಣಯವನ್ನು ಪರಿಗಣಿಸುವ ಸಲುವಾಗಿ ಶುಕ್ರವಾರ 1 ಗಂಟೆಗೆ ಸದನ ಪುನರಾರಂಭಗೊಂಡಿತ್ತು.

ಆದರೆ ವಿರೋಧಪಕ್ಷ ಕಾಂಗ್ರೆಸ್ ಸದಸ್ಯರ ಗದ್ದಲದಿಂದ ರಾಜ್ಯಪಾಲರು ತಮ್ಮ ಭಾಷಣದ ಕೊನೆಯ ಸಾಲನ್ನು ಮಾತ್ರ ಓದಲು ಸಾಧ್ಯವಾಯಿತು. ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸದನ ಸೇರಿದಾಗ ವಿರೋಧಪಕ್ಷದ ನಾಯಕ ಮುಕೇಶ್ ಅಗ್ನಿಹೋತ್ರಿ ತಮ್ಮ ಸೀಟಿನಿಂದು ಎದ್ದು ನಿಂತು ಘೋಷಣೆಗಳನ್ನು ಕೂಗಿದರು.
ಅಡುಗೆ ಅನಿಲ, ಪೆಟ್ರೋಲ್ ಡೀಸೆಲ್ ದರ ಏರಿಕೆಯ ಬಗ್ಗೆ ಭಾಷಣದಲ್ಲಿ ಏನನ್ನೂ ಪ್ರಸ್ತಾಪಿಸಿಲ್ಲ. ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆ ಎಂದು ಆರೋಪಿಸಿದರು. ಸದನದಲ್ಲಿ ಕಾಂಗ್ರೆಸ್ ಸದಸ್ಯರು ತೋರಿದ ವರ್ತನೆಯನ್ನು ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಖಂಡಿಸಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications