Exit Poll Debates: ಎಕ್ಸಿಟ್ ಪೋಲ್ ಚರ್ಚೆಯಲ್ಲಿ ಭಾಗಿಯಾಗಲ್ಲ ಕಾಂಗ್ರೆಸ್! ಕಾರಣವೇನು?
ನವದೆಹಲಿ, ಜೂನ್. 01: ಟಿವಿ ಚಾನೆಲ್ಗಳಲ್ಲಿ ಲೋಕಸಭೆಯ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ. ಟಿಆರ್ಪಿಗಾಗಿ ಊಹಾಪೋಹ ಹರಡುವ ಚರ್ಚೆಗಳಿಗೆ ಹೊಗಲು ಬಯಸುವುದಿಲ್ಲ ಎಂದು ಹೇಳಿದೆ. ಮತದಾರರು ಈಗಾಗಲೇ ಮತ ಚಲಾಯಿಸಿದ್ದಾರೆ ಮತ್ತು ಅವರ ತೀರ್ಪು ಬಂದಿದೆ ಎಂದು ಕಾಂಗ್ರೆಸ್ ವಕ್ತಾರ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ಪವನ್ ಖೇರಾ ಹೇಳಿದ್ದಾರೆ.
" ಲೋಕಸಭಾ ಚುನಾವಣಾ ಫಲಿತಾಂಶಗಳು ಜೂನ್ 4 ರಂದು ಹೊರಬೀಳುತ್ತವೆ. ಅದಕ್ಕೂ ಮೊದಲು, ಟಿಆರ್ಪಿಗಾಗಿ ಊಹಾಪೋಹ ಹಂಚುವ ಚರ್ಚೆಗಳಲ್ಲಿ ಪಾಲ್ಗೊಳ್ಳಲು ನಮಗೆ ಯಾವುದೇ ಕಾರಣವಿಲ್ಲ" ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಟ್ವಿಟರ್ನಲ್ಲಿ ಹೇಳಿಕೆ ಹಂಚಿಕೊಂಡಿದ್ದಾರೆ.

"ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಎಕ್ಸಿಟ್ ಪೋಲ್ಗಳ ಚರ್ಚೆಗಳಲ್ಲಿ ಭಾಗವಹಿಸುವುದಿಲ್ಲ. ಯಾವುದೇ ಚರ್ಚೆಯ ಉದ್ದೇಶವು ಜನರಿಗೆ ತಿಳಿಸುವುದು. ನಾವು ಜೂನ್ 4 ರಿಂದ ಸಂತೋಷದಿಂದ ಚರ್ಚೆಗಳಲ್ಲಿ ಭಾಗವಹಿಸುತ್ತೇವೆ" ಎಂದು ಪವನ್ ಖೇರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಕ್ಷದೊಳಗೆ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎಕ್ಸಿಟ್ ಪೋಲ್ ಚರ್ಚೆ: ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ
ಜೂನ್ 1 ರಂದು ನಡೆಯಲಿರುವ ಲೋಕಸಭಾ ಚುನಾವಣೆ 2024 ರ ಎಕ್ಸಿಟ್ ಪೋಲ್ ಚರ್ಚೆಯಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧರಿಸಿದ್ದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿದೆ, ಪಕ್ಷದ ನಾಯಕ ರಾಹುಲ್ ಗಾಂಧಿ ಪಕ್ಷದಲ್ಲಿ ಪ್ರಮುಖ ಪಾತ್ರ ವಹಿಸಲು ಪ್ರಾರಂಭಿಸಿದಾಗಿನಿಂದ ಕಾಂಗ್ರೆಸ್ ಇಂತಹ ಚರ್ಚೆಗಳನ್ನು ನಿರಾಕರಿಸುತ್ತಿದೆ ಎಂದು ಹೇಳಿದ್ದಾರೆ.

ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, '' ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಚುನಾವಣೆಯ ಮೂಲಕ ಪ್ರಚಾರ ನಡೆಸಿದೆ. ಆದರೆ ಅದು ಈಗ ವಾಸ್ತವವನ್ನು ಅರಿತುಕೊಂಡಿದೆ. ನಾಳೆ ಚುನಾವಣೆಯ ನಂತರ ಪ್ರಸಾರವಾಗಲಿರುವ ಎಕ್ಸಿಟ್ ಪೋಲ್ಗಳಲ್ಲಿ ಅದು ಸೋಲನ್ನು ಎದುರಿಸುತ್ತಿದೆ" ಎಂದು ಕಿಡಿಕಾರಿದ್ದಾರೆ.
"ಶನಿವಾರದಂದು ಎಕ್ಸಿಟ್ ಪೋಲ್ ಭವಿಷ್ಯವಾಣಿಗಳ ಕುರಿತು ಮಾಧ್ಯಮಗಳಿಂದ ಪ್ರಶ್ನೆಗಳನ್ನು ಎದುರಿಸಲು ಕಾಂಗ್ರೆಸ್ಗೆ 'ಮುಖವಿಲ್ಲ'. ಆದ್ದರಿಂದ ಅದು ಸಂಪೂರ್ಣ ಚರ್ಚೆಯನ್ನು ನಿರಾಕರಿಸುತ್ತಿದೆ ಮತ್ತು ಅದರಲ್ಲಿ ಚರ್ಚೆಯಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳುತ್ತಿದೆ" ಎಂದಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, 'ಎಕ್ಸಿಟ್ ಪೋಲ್ಗಳು ಬಹಳ ಸಮಯದಿಂದ ನಡೆಯುತ್ತಿವೆ ಆದರೆ, ಸೋಲಿನ ಕಾರಣ, ಅವರಿಗೆ ಹೇಗೆ ವಿವರಿಸಬೇಕೆಂದು ತಿಳಿದಿಲ್ಲ ಮತ್ತು ಅದಕ್ಕಾಗಿಯೇ ಅವರು ಎಕ್ಸಿಟ್ ಪೋಲ್ಗಳನ್ನು ಬಹಿಷ್ಕರಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಎಕ್ಸಿಟ್ ಪೋಲ್ಗಳನ್ನು ನಿರಾಕರಿಸಬಾರದು. ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು' ಎಂದು ತಿಳಿಸಿದ್ದಾರೆ.
ಭಾರತೀಯ ಚುನಾವಣಾ ಆಯೋಗವು ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ, ಲೋಕಸಭಾ ಚುನಾವಣೆಯ ಮತದಾನ ಮುಗಿದ ನಂತರ ಜೂನ್ 1 ರಂದು ಸಂಜೆ 6:30 ರ ನಂತರ ಎಕ್ಸಿಟ್ ಪೋಲ್ ಡೇಟಾ ಮತ್ತು ಅದರ ಫಲಿತಾಂಶಗಳನ್ನು ಪ್ರಕಟಿಸಬಹುದು.
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications