ತೆಲಂಗಾಣದಲ್ಲಿ ಕಾಂಗ್ರೆಸ್ ಕಚೇರಿಗೆ ಬೆಂಕಿ, ಪ್ರಚಾರ ಸಾಮಗ್ರಿ ಭಸ್ಮ!
ಹೈದರಾಬಾದ್, ಅಕ್ಟೋಬರ್ 11: ತೆಲಂಗಾಣದ ಮುನುಗೋಡು ಕ್ಷೇತ್ರದ ಕೇಂದ್ರ ಚಂಡೂರು ಮಂಡಲದಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಗೆ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಪಕ್ಷದ ಕಚೇರಿ ಹಾಗೂ ಪ್ರಚಾರ ಸಾಮಗ್ರಿ ಸುಟ್ಟು ಹಾಕಿದ್ದಾರೆ.
ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ ರೇವಂತ್ ರೆಡ್ಡಿ ಮಂಗಳವಾರ ಚಂದೂರ್ನಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಗೆ ಕೆಲವು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. 24 ಗಂಟೆಯೊಳಗೆ ಕಿಡಿಗೇಡಿಗಳನ್ನು ಬಂಧಿಸದಿದ್ದರೆ ಎಸ್ಪಿ ಕಚೇರಿ ಎದುರು ಧರಣಿ ನಡೆಸುವುದಾಗಿ ರೇವಂತ್ರೆಡ್ಡಿ ಎಚ್ಚರಿಕೆ ಹಾಕಿದ್ದಾರೆ.
ಪಕ್ಷದ ಬ್ಲಾಕ್ಗಳನ್ನು ಕೆಡವಿದರೂ, ಪಕ್ಷದ ಕಚೇರಿಗಳನ್ನು ಸುಟ್ಟರೂ ಕಾಂಗ್ರೆಸ್ನ ಬಾವುಟ ಸದಾ ಹಾರಾಡುತ್ತಿರುತ್ತದೆ. ಇಂತಹ ದುಷ್ಟ ಕೃತ್ಯಗಳಿಂದ ಕಾಂಗ್ರೆಸ್ನ ಗೆಲುವನ್ನು ತಡೆಯಲು ಸಾಧ್ಯವಿಲ್ಲ. ಆಡಳಿತ ನಡೆಸುತ್ತಿರುವ ಸರ್ಕಾರ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಟಿಪಿಸಿಸಿ ಮುಖ್ಯಸ್ಥ ರೇವಂತ್ ಹೇಳಿದ್ದಾರೆ.

ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್ಎಸ್) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿಕೊಂಡು ನಮ್ಮ ಕಾರ್ಯಕರ್ತರಿಗೆ ಬೆದರಿಕೆ ಹಾಕಲು ಸಂಚು ರೂಪಿಸಿವೆ. ಆರೋಪಿಗಳನ್ನು ಬಂಧಿಸದಿದ್ದರೆ ಟಿಆರ್ಎಸ್ ಮತ್ತು ಬಿಜೆಪಿ ವಿರುದ್ಧ ಆಂದೋಲನ ನಡೆಸಲಾಗುವುದು ಎಂದು ರೇವಂತ್ ಹೇಳಿದರು.
ಏತನ್ಮಧ್ಯೆ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಆಗಸ್ಟ್ 20 ರಂದು ಉಪಚುನಾವಣೆಯಲ್ಲಿ ಮುನುಗೋಡು ವಿಧಾನಸಭಾ ಸ್ಥಾನಕ್ಕಾಗಿ ತನ್ನ ಪ್ರಚಾರವನ್ನು ಪ್ರಾರಂಭಿಸಿದ್ದು ಮುಂಬರುವ ಮುನುಗೋಡು ಉಪಚುನಾವಣೆಗೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಪ್ರಚಾರ ಆರಂಭಿಸಲು ಮುಖ್ಯಮಂತ್ರಿ ಕೆಸಿಆರ್ ಅವರು ಮುನುಗೋಡು ವಿಧಾನಸಭಾ ಕ್ಷೇತ್ರಕ್ಕೆ ತೆರಳಿದ್ದರು.

ಕಾಂಗ್ರೆಸ್ನ ಹಾಲಿ ಶಾಸಕ ಕೋಮಟಿರೆಡ್ಡಿ ರಾಜ್ ಗೋಪಾಲ್ ರೆಡ್ಡಿ ಇತ್ತೀಚೆಗಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಮುನುಗೋಡು ವಿಧಾನಸಭಾ ಉಪಚುನಾವಣೆ ನಡೆಯಲಿದೆ.












Click it and Unblock the Notifications