Assembly Elections: ಕರ್ನಾಟಕ ಮಾದರಿಯಲ್ಲೇ ಮಧ್ಯಪ್ರದೇಶದಲ್ಲೂ ಬಿಜೆಪಿಯನ್ನು ಕೆಳಗಿಳಿಸಲು ಕಾಂಗ್ರೆಸ್ ಪ್ಲ್ಯಾನ್!
ಭೋಪಾಲ್ ಆಗಸ್ಟ್ 19: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ ಭರ್ಜರಿ ಜಯ ಗಳಿಸಿದ ನಂತರ ಮಧ್ಯಪ್ರದೇಶದಲ್ಲೂ ಅದೇ ಸೂತ್ರವನ್ನು ಬಳಸಲು ಪ್ರಯತ್ನಿಸುತ್ತಿದೆ. ಕೆಲವೇ ತಿಂಗಳಲ್ಲಿ ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ, ಮಿಜೋರಾಂ ರಾಜ್ಯಗಳಿಗೆ ಚುನಾವಣೆ ನಡೆಯಲಿದೆ.
ಆಡಳಿತಾರೂಢ ಬಿಜೆಪಿಯನ್ನು ಕೆಳಗಿಳಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಸಕಲ ತಯಾರಿ ಮಾಡಿಕೊಂಡಿದೆ. ಈಗಾಗಲೆ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪುನರಾಗಮನ ಮಾಡಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಕಾಂಗ್ರೆಸ್ನ ಹೊಸ ದಾಳಿಯನ್ನು ಎದುರಿಸಲು ಬಿಜೆಪಿ ಕೂಡ ತನ್ನ ತಂತ್ರವನ್ನು ಬದಲಾಯಿಸಿದೆ.

ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, "ಇಂದು ನಾವು ಕೊಟ್ಟ ಭರವಸೆಯನ್ನು 100 ರಷ್ಟು ಈಡೇರಿಸುತ್ತೇವೆ ಎಂದು ಹೇಳುತ್ತೇನೆ. ನಾವು ಕರ್ನಾಟಕದ ಜನರಿಗೆ ಈ ಭರವಸೆ ನೀಡಿದ್ದೇವೆ. ಅಲ್ಲಿನ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಮಸೂದೆಯನ್ನು ಅಂಗೀಕರಿಸಿದೆ" ಎಂದು ಹೇಳಿದ್ದಾರೆ.
ಅಂದರೆ ಕರ್ನಾಟಕದಂತೆ ಮಧ್ಯಪ್ರದೇಶದಲ್ಲೂ ಮತದಾರರನ್ನು ಸೆಳೆಯಲು ಕಾಂಗ್ರೆಸ್ ವಿವಿಧ ಭರವಸೆಗಳನ್ನು ನೀಡಿದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ''ಮಹಿಳೆಯರಿಗೆ ಪ್ರತಿ ತಿಂಗಳು 1,500 ನೀಡಲಾಗುವುದು, 500ಕ್ಕೆ ಗ್ಯಾಸ್ ಸಿಲಿಂಡರ್ ಲಭ್ಯವಾಗಲಿದೆ, 100 ಯೂನಿಟ್ ವಿದ್ಯುತ್ ಉಚಿತ, 200 ಯೂನಿಟ್ ವೆಚ್ಚ ಅರ್ಧಕ್ಕೆ ಇಳಿಸಲಾಗುವುದು, ಮಧ್ಯಪ್ರದೇಶದಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಲಾಗುವುದು ಮತ್ತು ಬಡ ರೈತರಿಗೆ ಭಾರೀ ಸಾಲದಲ್ಲಿ ಸಂಪೂರ್ಣ ಸಾಲ ಮನ್ನಾ ಆಗಲಿದೆ,'' ಎಂದು ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಧ್ಯಪ್ರದೇಶದಲ್ಲಿ ಜಾರಿಗೆ ತರಲಾಗುವ ಐದು ಭರವಸೆಗಳು ಇವಾಗಿವೆ ಎಂದು ಅವರು ವಿವರಿಸಿದರು.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಡೆಸಿದ ಮೊದಲ ಕ್ರಮವೆಂದರೆ ರಣದೀಪ್ ಸುರ್ಜೆವಾಲಾ ಅವರು ರಾಜ್ಯದ ಉಸ್ತುವಾರಿ ವಹಿಸಿಕೊಳ್ಳುವುದು. ಸುರ್ಜೇವಾಲಾ ಅವರು ಈ ಹಿಂದೆ ಕಾಂಗ್ರೆಸ್ನ ಕರ್ನಾಟಕ ಉಸ್ತುವಾರಿಯಾಗಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣರಾಗಿದ್ದ ದಕ್ಷಿಣ ರಾಜ್ಯದ ಕಾಂಗ್ರೆಸ್ ತಂತ್ರಜ್ಞ ಸುನಿಲ್ ಕಾನುಗೋಲು ಅವರು ಮಧ್ಯಪ್ರದೇಶದಲ್ಲೂ ಅದೇ ರೀತಿಯ ಫಲಿತಾಂಶಗಳನ್ನು ತರಲು ನಿರ್ಧರಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪ್ರಚಾರದ ವೇಳೆ, ಆಡಳಿತ ಪಕ್ಷದ ಮೇಲೆ "40 ಪ್ರತಿಶತ ಕಮಿಷನ್" ಆರೋಪ ಮಾಡಿತ್ತು, ಆದರೆ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ "ಶೇಕಡಾ 50 ಕಮಿಷನ್" ಆರೋಪ ಮಾಡಿ, ಅದನ್ನು ಶೇಕಡಾ 10 ರಷ್ಟು ಹೆಚ್ಚಿಸಿದೆ. ಈಗಾಗಲೇ ಕಾಂಗ್ರೆಸ್ ನಾಯಕರು "ಕುಂಭಮೇಳದ ಒಳಗೂ ಭ್ರಷ್ಟಾಚಾರ ನಡೆದಿದೆ'' ಎಂದು ಆರೋಪಿಸಿದ್ದಾರೆ.
ಆದರೆ 'ಜನರನ್ನು ದಾರಿತಪ್ಪಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದ್ದು, ಬಿಜೆಪಿ ಇದಕ್ಕೆ ತಕ್ಕ ಉತ್ತರ ನೀಡಲಿದೆ' ಎಂದು ಮಧ್ಯಪ್ರದೇಶ ಬಿಜೆಪಿ ಮುಖ್ಯಸ್ಥ ವಿಡಿ ಶರ್ಮಾ ಹೇಳಿದ್ದಾರೆ.
"ಕಾಂಗ್ರೆಸ್ ನಕಲಿ ಪತ್ರದ ಮೂಲಕ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದೆ. ಇದಕ್ಕೆ ಬಲವಾದ ಉತ್ತರವನ್ನು ನೀಡಲಾಗುವುದು, ಪ್ರತಿಯೊಬ್ಬ ಕಾರ್ಯಕರ್ತರು ಪ್ರಿಯಾಂಕಾ ಗಾಂಧಿಗೆ ಉತ್ತರಿಸುತ್ತಾರೆ. ನೀವು ಕೂಡ ಉತ್ತರಿಸಬೇಕು. ನೀವು ಮಾನನಷ್ಟ ಅಪರಾಧ ಮಾಡಿದ್ದೀರಿ" ಎಂದು ವಿಡಿ ಶರ್ಮಾ ಹೇಳಿದರು.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ವಿರುದ್ಧ ದಾಳಿ ಮಾಡಲು ಹೊಸ ವಿಧಾನಗಳನ್ನು ಬಳಸುತ್ತಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆಯ ನಂತರ, ಪಕ್ಷವು ಮಧ್ಯಪ್ರದೇಶದಲ್ಲಿ 39 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.
"ನಮ್ಮ ಸಿದ್ಧತೆಗಳು ಯುದ್ಧೋಪಾದಿಯಲ್ಲಿ ನಡೆಯುತ್ತಿವೆ. ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಿಸಲು ಹೆದರುತ್ತಿದೆ. ನಾವು ನಮ್ಮ ಅಭ್ಯರ್ಥಿಗಳನ್ನು ಹೆಸರಿಸಿದ್ದೇವೆ. ನಮ್ಮ ಜನರಲ್ಗಳು ಈಗ ಕ್ಷೇತ್ರದಲ್ಲಿದ್ದಾರೆ" ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ವಿಭಾಗೀಯ ಮಟ್ಟದಲ್ಲಿ ಸಭೆ ನಡೆಸುತ್ತಿದೆ. ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಬಿಹಾರದಿಂದ ಸುಮಾರು 230 ಶಾಸಕರು ಏಳು ದಿನಗಳ ಕಾಲ ರಾಜ್ಯದಾದ್ಯಂತ ಜನರನ್ನು ಭೇಟಿಯಾಗಲಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದು, ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ನಂತರ ಪ್ರಚಾರವನ್ನು ತೀವ್ರಗೊಳಿಸಲು ನೋಡುತ್ತಿದೆ, ಅಮಿತ್ ಶಾ ಅವರು ಕೂಡ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.












Click it and Unblock the Notifications