ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ದಿನದೊಳಗೆ ರೈತರ ಸಾಲಮನ್ನಾ: ರಾಹುಲ್
ಅಹಮದಾಬಾದ್, ಡಿಸೆಂಬರ್ 8: ಗುಜರಾತಿನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 10 ದಿನಗಳೊಳಗೆ ರೈತರ ಸಾಲ ಮನ್ನಾ ಮಾಡಲು ಯೋಜನೆ ರೂಪಿಸಲಾಗುವುದು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ನಾನು ತಪ್ಪು ಮಾಡ್ತೇನೆ, ಆದ್ರೆ ಮೋದಿಯಂತೆ ಅಲ್ಲ: ರಾಹುಲ್ ಗಾಂಧಿ
ಎರಡನೇ ಹಂತದ ಮತದಾನ ನಡೆಯಲಿರುವ ಉದಯಪುರದ ಚೊಟ್ಟಾದಲ್ಲಿ ಅವರು ಚುನಾವಣಾ ಭಾಷಣದಲ್ಲಿ ಈ ಘೋಷಣೆ ಮಾಡಿದ್ದಾರೆ.
ಗುಜರಾತಿನಲ್ಲಿ ಕಾಂಗ್ರೆಸ್ ಗೆಲುವು ಶತಃಸಿದ್ಧ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಬಿರುಗಾಳಿ ಅದರ ದಾರಿಯಲ್ಲಿ ಸಾಗುತ್ತಿದೆ ಎಂದು ರಾಹುಲ್ ಗಾಂಧಿ ಬಣ್ಣಿಸಿದ್ದಾರೆ.
ಗುಜರಾತಿನಲ್ಲಿ ನಾಳೆ ಅಂದರೆ ಡಿಸೆಂಬರ್ 9ರಂದು ಮೊದಲ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 14ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 18ರ ಸೋಮವಾರ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ.
Comments
gujarat rahul gandhi congress bjp gujarat assembly elections 2017 ಗುಜರಾತ್ ರಾಹುಲ್ ಗಾಂಧಿ ಬಿಜೆಪಿ ಕಾಂಗ್ರೆಸ್
English summary
Gujarat assembly elections 2017: Congress party within 10 days of winning the elections will make a policy for farmer loan waiver sadi Rahul Gandhi in Chotta Udaipur.
Story first published: Friday, December 8, 2017, 14:27 [IST]