24 ವರ್ಷಗಳಲ್ಲಿ ಮೊದಲ ಗಾಂಧಿಯೇತರ ಅಧ್ಯಕ್ಷರನ್ನು ಕಾಣಲಿದೆ ಕಾಂಗ್ರೆಸ್
ನವದೆಹಲಿ, ಅ. 17: ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯಲಿದೆ. 24 ವರ್ಷಗಳಲ್ಲಿ ಮೊದಲ ಗಾಂಧಿಯೇತರ ಅಧ್ಯಕ್ಷರನ್ನು ಕಾಂಗ್ಎಸ್ ಕಾಣಲಿದ್ದು, ಗೆದ್ದವರನ್ನು ಸೋನಿಯಾ ಗಾಂಧಿ ಉತ್ತರಾಧಿಕಾರಿ ಎಂದು ಪರಿಗಣಿಸಲಾಗುತ್ತಿದೆ.
ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆಯಲಿರುವ ನಿರ್ಣಾಯಕ ಚುನಾವಣೆಯಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಮುಖಾಮುಖಿಯಾಗಲಿದ್ದಾರೆ. ಪಕ್ಷದ 37 ನೇ ಅಧ್ಯಕ್ಷರನ್ನು ಆಯ್ಕೆ ಮಾಡಲು 9,000 ಕ್ಕೂ ಹೆಚ್ಚು ಕಾಂಗ್ರೆಸ್ ಪ್ರತಿನಿಧಿಗಳು ಮತ ಚಲಾಯಿಸಲಿದ್ದಾರೆ.
ದೇಶದ ಹಳೇಯ ರಾಜಕೀಯ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಆಯ್ಕೆಯಾದವರು ಪ್ರಸ್ತುತ ಮುಖ್ಯಸ್ಥೆಯಾಗಿರುವ ಸೋನಿಯಾ ಗಾಂಧಿಯವರ ಉತ್ತರಾಧಿಕಾರಿಯಾಗುತ್ತಾರೆ.

ಶಶಿ ತರೂರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಇಬ್ಬರೂ ಹಲವು ರಾಜ್ಯಗಳಲ್ಲಿ ಸಕ್ರಿಯವಾಗಿ ಪ್ರಚಾರ ನಡೆಸುತ್ತಿದ್ದಾರೆ. ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರತಿನಿಧಿಗಳನ್ನು ಭೇಟಿ ಮಾಡಿದ್ದಾರೆ.
ಈ ವರ್ಷದ ಆರಂಭದಲ್ಲಿ ರಾಜಸ್ಥಾನದಲ್ಲಿ ನಡೆದ ಮೂರು ದಿನಗಳ ಕಾರ್ಯಕ್ರಮದಲ್ಲಿ ಕಾಂಗ್ರೆಸ್ನ 'ಚಿಂತನ್ ಶಿವರ್' ಘೋಷಣೆಗಳ ಹೆಜ್ಜೆಗಳನ್ನು ಅನುಸರಿಸುವುದಾಗಿ ಮಲ್ಲಿಕಾರ್ಜುನ ಖರ್ಗೆ ಪ್ರತಿಜ್ಞೆ ಮಾಡಿದ್ದಾರೆ. ಇತ್ತ ಶಶಿ ತರೂರ್ ಅವರು ಪಕ್ಷವನ್ನು ವಿಕೇಂದ್ರೀಕರಿಸುವ ಭರವಸೆ ನೀಡಿದ್ದಾರೆ.
ಈ ಬಾರಿಯ ಚುನಾವಣಾ ಪ್ರಕ್ರಿಯೆಯಲ್ಲಿ ಗಾಂಧಿ ಕುಟುಂಬವು ತಟಸ್ಥವಾಗಿ ಉಳಿದಿದೆ. ಸೋನಿಯಾ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಯಾವ ಅಬ್ಯರ್ಥಿಯ ಪರವಾಗಿಯೂ ಇಲ್ಲ ಎಂದು ಸ್ವತಃ ಶಶಿ ತರೂರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಪದೇ ಪದೇ ಹೇಳಿದ್ದಾರೆ.

ಶಶಿ ತರೂರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಪರಸ್ಪರ ಗೌರವಿಸುವುದಾಗಿಯೂ, ಫಲಿತಾಂಶ ಏನೇ ಬಂದರೂ ಲೆಕ್ಕಿಸದೆ ತಮ್ಮ ಪಕ್ಷದ ಒಳಿತಿಗಾಗಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸುವುದಾಗಿಯೂ ಅನೇಕ ಸಂದರ್ಭಗಳಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಈ ಅಧ್ಯಕ್ಷೀಯ ಚುನಾವಣೆ ಪ್ರಮುಖವಾಗಿದೆ. ಪಕ್ಷ ತೀವ್ರ ಬಿಕ್ಕಟ್ಟಿಗೆ ಸಿಲುಕಿರುವ ಸಮಯದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದೆ. ಅಕ್ಟೋಬರ್ 19ರಂದು ಮತದಾನದ ಫಲಿತಾಂಶ ಪ್ರಕಟವಾಗಲಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications