ಅಕ್ರಮ ವಲಸಿಗರಿಗೆ ಕಾಂಗ್ರೆಸ್ ರಕ್ಷಣೆ?: ವಿಕಿಲೀಕ್ಸ್ ಮಾಹಿತಿ ಬಹಿರಂಗ
ನವದೆಹಲಿ, ಆಗಸ್ಟ್ 3: ಮತ ಬ್ಯಾಂಕ್ಗಾಗಿ ಅಸ್ಸಾಂನಲ್ಲಿರುವ ಅಕ್ರಮ ವಲಸಿಗರಿಗೆ ರಕ್ಷಣೆ ನೀಡಲು ಕಾಂಗ್ರೆಸ್ ಮುಂದಾಗಿತ್ತೇ? ಹೌದು ಎನ್ನುತ್ತಿದೆ ವಿಕಿಲೀಕ್ಸ್ ಬಹಿರಂಗಪಡಿಸಿರುವ ಮಾಹಿತಿ.
ಗಡಿಯೊಳಗೆ ಅಕ್ರಮವಾಗಿ ಒಳನುಸುಳಿ ಬಂದಿದ್ದ ಬಾಂಗ್ಲಾದೇಶದ ವಲಸಿಗರನ್ನು ಮತಬ್ಯಾಂಕ್ಆಗಿ ಪರಿವರ್ತಿಸಿಕೊಳ್ಳಲು ಕಾಂಗ್ರೆಸ್ ತಂತ್ರ ರೂಪಿಸಿತ್ತು ಎಂದು ವಿಕಿಲೀಕ್ಸ್ ಮಾಹಿತಿ ತಿಳಿಸಿದೆ.
2006ರ ಮೇ ತಿಂಗಳಿನಲ್ಲಿ ಅಸ್ಸಾಂನಲ್ಲಿನ ನಡೆದ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವುದನ್ನು ತಡೆಯಲು ವಿದೇಶಿಗರ ಕಾಯ್ದೆಗೆ ತಿದ್ದುಪಡಿ ತರುವುದಾಗಿ ಹೇಳುವ ಮೂಲಕ ವಲಸಿಗ ಮುಸ್ಲಿಮರಿಗೆ ಭರವಸೆ ನೀಡಿದ್ದರು ಎಂದು ವಿಕಿಲೀಕ್ಸ್ ಹೇಳಿದೆ.

2005ರ ಜುಲೈನಲ್ಲಿ ಅಕ್ರಮ ವಲಸಿಗರ ಕಾಯ್ದೆ ಅಸಾಂವಿಧಾನಿಕ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರಿಂದ ಕಾಂಗ್ರೆಸ್ಗೆ ತನ್ನ ಸಾಂಪ್ರದಾಯಿಕ ಮತಬ್ಯಾಂಕ್ ಕಳೆದುಕೊಳ್ಳುವ ಭೀತಿ ಎದುರಾಗಿತ್ತು.
ಈ ಕಾಯ್ದೆಯಲ್ಲಿ ಅಸ್ಸಾಂನಲ್ಲಿರುವ ವಿದೇಶಿಗರನ್ನು ಗುರುತಿಸುವುದು, ಪತ್ತೆ ಮಾಡುವುದು ಮತ್ತು ಗಡಿಪಾರು ಮಾಡುವುದು ಒಳಗೊಂಡಿತ್ತು. ಅಲ್ಲದೆ, 1971ರ ಬಳಿಕ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ರಕ್ಷಿಸುವ ಅಂಶವೂ ಇದರಲ್ಲಿತ್ತು.
ಆದರೆ, ವಿದೇಶಿ ಕಾಯ್ದೆಯನ್ನು ಜಾರಿಗೆ ತರದೇ ಇರುವ ಮೂಲಕ ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ಮುಂದಾಗಿತ್ತು. ಚುನಾವಣೆ ಸಂದರ್ಭದ ಭೇಟಿಯಲ್ಲಿ ಸೋನಿಯಾ ಗಾಂಧಿ, ಕಾಯ್ದೆಗೆ ತಿದ್ದುಪಡಿ ತರುವುದಾಗಿ ಹೇಳಿದ್ದರು.
ಅಸ್ಸಾಂನಲ್ಲಿ ಬಾಂಗ್ಲಾದೇಶಿ ವಲಸಿಗರ ಕಾರಣದಿಂದ ಮುಸ್ಲಿಮರ ಸಂಖ್ಯೆ ಹೆಚ್ಚಾಗಿದೆ. ಅಲ್ಲಿನ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ 13 ಮುಸ್ಲಿಂ ಶಾಸಕರಿದ್ದಾರೆ.
ಹಾಗೆಯೇ, ಗಡಿಪಾರಿನಿಂದ ತಪ್ಪಿಸಿಕೊಳ್ಳಲು ಬಾಂಗ್ಲಾದೇಶಿ ಅಕ್ರಮ ವಲಸಿಗರಿಗೆ ತಮ್ಮ ರಕ್ಷಣೆಗೆ ಬರುವ ಕಾಂಗ್ರೆಸ್ನ ಆಯ್ಕೆ ಕೂಡ ಅನಿವಾರ್ಯವಾಗಿತ್ತು ಎಂದು ವಿಕಿಲೀಕ್ಸ್ ಹೇಳಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications