Gujarat Assembly Elections 2022: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಏನಿದೆ?
ಅಹಮದಾಬಾದ್, ನವೆಂಬರ್ 12: ಗುಜರಾತ್ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಣಾಳಿಕೆ ಬಿಡುಗಡೆ ಮಾಡಿದರು.
ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯನ್ನು ಇಂದು ಅಹಮದಾಬಾದ್ನಲ್ಲಿ ಬಿಡುಗಡೆ ಮಾಡಿದೆ. ಅಶೋಕ್ ಗೆಹ್ಲೋಟ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ವೇಳೆ ಕಾಂಗ್ರೆಸ್ನ ಎಲ್ಲ ಪ್ರಮುಖ ನಾಯಕರು ಉಪಸ್ಥಿತರಿದ್ದರು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಗೃಹಿಣಿಯರು, ಯುವಕರು ಮತ್ತು ಶಿಕ್ಷಣದಿಂದ ಆರೋಗ್ಯದವರೆಗೆ ಕಾಳಜಿ ವಹಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದರೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿದೆ. ಇದೇ ವೇಳೆ ಕೆಜಿಯಿಂದ ಪಿಜಿವರೆಗೆ ಉಚಿತವಾಗಿ ಶಿಕ್ಷಣ ನೀಡಲಾಗುವುದು.

ಕಾಂಗ್ರೆಸ್ ಪ್ರಕಟಿಸಿದ ಪ್ರಣಾಳಿಕೆಯ ಪ್ರಮುಖ ಅಂಶಗಳು
*ದೇಶೀಯ ಗ್ಯಾಸ್ ಸಿಲಿಂಡರ್ಗಳಲ್ಲಿ ರಿಯಾಯಿತಿ
*200 ಯೂನಿಟ್ ಗೃಹ ವಿದ್ಯುತ್ ಉಚಿತ
*ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ
* ಶಿಕ್ಷಣಕ್ಕಾಗಿ ಎಲ್ಕೆಜಿಯಿಂದ ಪಿಜಿವರೆಗೆ ಉಚಿತ ಶಿಕ್ಷಣ
*2000 ಹೊಸ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳು
*ಆಧುನಿಕ ಶಿಕ್ಷಣ ಸಂಸ್ಥೆಗಳ ಸ್ಥಾಪನೆ
*ಯುವಕರಿಗೆ 10 ಲಕ್ಷ ಉದ್ಯೋಗ

ಕೋವಿಟಡ್ ಸಂತ್ರಸ್ತರಿಗೆ
*ಕೋವಿಡ್ನಲ್ಲಿ ಮೃತಪಟ್ಟವರ ಪ್ರತಿ ಕುಟುಂಬಕ್ಕೆ 4 ಲಕ್ಷ ರೂ.
*ಆಸ್ಪತ್ರೆಯು ಆಧುನಿಕ ಸೌಲಭ್ಯಗಳು
*ಪ್ರತಿ ಗುಜರಾತ್ ನಾಗರಿಕರಿಗೆ 10 ಲಕ್ಷದವರೆಗೆ ಉಚಿತ ಚಿಕಿತ್ಸೆ
*ಮೂತ್ರಪಿಂಡ ಮತ್ತು ಯಕೃತ್ತಿನ ರೋಗಗಳ ಸಂಪೂರ್ಣ ಚಿಕಿತ್ಸೆ
*ಸಾಮಾಜಿಕ ನ್ಯಾಯಕ್ಕಾಗಿ ನಗರ ಪ್ರದೇಶಗಳಲ್ಲಿ ನಗರ ಉದ್ಯೋಗ ಯೋಜನೆ
*ಇಂದಿರಾ ರಸೋಯಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ಪ್ರಯೋಜನ
*ಕಾನೂನಿನ ಸಂಪೂರ್ಣ ಅನುಷ್ಠಾನ
*ಅರಣ್ಯ ಭೂಮಿಯಲ್ಲಿ ಆದಿವಾಸಿಗಳ ಹಕ್ಕು ವಿತರಣೆ

ಹಿಮಾಚಲ ಚುನಾವಣೆ: ಕಾಂಗ್ರೆಸ್ನ ಭರವಸೆಗಳು
ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜನರಿಗೆ ಹಲವು ಭರವಸೆಗಳನ್ನು ನೀಡಿತ್ತು. ಈ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಸರ್ಕಾರ ರಚಿಸಿದರೆ ಮಹಿಳೆಯರಿಗೆ ಪ್ರತಿ ತಿಂಗಳು 1500 ರೂ. ನೀಡಲಾಗುವುದು ಎಂದು ಕಾಂಗ್ರೆಸ್ ಹೇಳಿದೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ತನ್ನ ಚುನಾವಣೆ ಭರವಸೆಯಲ್ಲಿ ಸರ್ಕಾರ ರಚನೆಯಾದರೆ, ಹಳೆಯ ಪಿಂಚಣಿ ಯೋಜನೆಯಲ್ಲಿ (OPS) ಮತ್ತೆ ಕೆಲಸ ಮಾಡುವುದಾಗಿ ಹೇಳಿದೆ. ಇದಲ್ಲದೇ, ಒಪಿಎಸ್ ಜಾರಿ, 300 ಯೂನಿಟ್ ಉಚಿತ ವಿದ್ಯುತ್ ನೀಡುವುದು, ಕೆ.ಜಿ.ಗೆ 2 ರೂ.ಗೆ ದನದ ಸಗಣಿ ಖರೀದಿ ಸೇರಿದಂತೆ ಮುಂತಾದ ಪ್ರಮುಖ ವಿಷಯಗಳನ್ನು ಕಾಂಗ್ರೆಸ್ ಪಕ್ಷ ಒಳಗೊಂಡಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications