Get Updates
Get notified of breaking news, exclusive insights, and must-see stories!

Gujarat Assembly Elections 2022: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಏನಿದೆ?

ಅಹಮದಾಬಾದ್‌, ನವೆಂಬರ್ 12: ಗುಜರಾತ್ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಣಾಳಿಕೆ ಬಿಡುಗಡೆ ಮಾಡಿದರು.

ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯನ್ನು ಇಂದು ಅಹಮದಾಬಾದ್‌ನಲ್ಲಿ ಬಿಡುಗಡೆ ಮಾಡಿದೆ. ಅಶೋಕ್ ಗೆಹ್ಲೋಟ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ವೇಳೆ ಕಾಂಗ್ರೆಸ್‌ನ ಎಲ್ಲ ಪ್ರಮುಖ ನಾಯಕರು ಉಪಸ್ಥಿತರಿದ್ದರು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಗೃಹಿಣಿಯರು, ಯುವಕರು ಮತ್ತು ಶಿಕ್ಷಣದಿಂದ ಆರೋಗ್ಯದವರೆಗೆ ಕಾಳಜಿ ವಹಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದರೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿದೆ. ಇದೇ ವೇಳೆ ಕೆಜಿಯಿಂದ ಪಿಜಿವರೆಗೆ ಉಚಿತವಾಗಿ ಶಿಕ್ಷಣ ನೀಡಲಾಗುವುದು.

Congress Releases Election Manifesto For Gujarat Assembly Elections

ಕಾಂಗ್ರೆಸ್ ಪ್ರಕಟಿಸಿದ ಪ್ರಣಾಳಿಕೆಯ ಪ್ರಮುಖ ಅಂಶಗಳು

*ದೇಶೀಯ ಗ್ಯಾಸ್ ಸಿಲಿಂಡರ್‌ಗಳಲ್ಲಿ ರಿಯಾಯಿತಿ
*200 ಯೂನಿಟ್ ಗೃಹ ವಿದ್ಯುತ್ ಉಚಿತ
*ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ
* ಶಿಕ್ಷಣಕ್ಕಾಗಿ ಎಲ್‌ಕೆಜಿಯಿಂದ ಪಿಜಿವರೆಗೆ ಉಚಿತ ಶಿಕ್ಷಣ
*2000 ಹೊಸ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳು
*ಆಧುನಿಕ ಶಿಕ್ಷಣ ಸಂಸ್ಥೆಗಳ ಸ್ಥಾಪನೆ
*ಯುವಕರಿಗೆ 10 ಲಕ್ಷ ಉದ್ಯೋಗ

Congress Releases Election Manifesto For Gujarat Assembly Elections

ಕೋವಿಟಡ್ ಸಂತ್ರಸ್ತರಿಗೆ

*ಕೋವಿಡ್‌ನಲ್ಲಿ ಮೃತಪಟ್ಟವರ ಪ್ರತಿ ಕುಟುಂಬಕ್ಕೆ 4 ಲಕ್ಷ ರೂ.
*ಆಸ್ಪತ್ರೆಯು ಆಧುನಿಕ ಸೌಲಭ್ಯಗಳು
*ಪ್ರತಿ ಗುಜರಾತ್‌ ನಾಗರಿಕರಿಗೆ 10 ಲಕ್ಷದವರೆಗೆ ಉಚಿತ ಚಿಕಿತ್ಸೆ
*ಮೂತ್ರಪಿಂಡ ಮತ್ತು ಯಕೃತ್ತಿನ ರೋಗಗಳ ಸಂಪೂರ್ಣ ಚಿಕಿತ್ಸೆ
*ಸಾಮಾಜಿಕ ನ್ಯಾಯಕ್ಕಾಗಿ ನಗರ ಪ್ರದೇಶಗಳಲ್ಲಿ ನಗರ ಉದ್ಯೋಗ ಯೋಜನೆ
*ಇಂದಿರಾ ರಸೋಯಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ಪ್ರಯೋಜನ
*ಕಾನೂನಿನ ಸಂಪೂರ್ಣ ಅನುಷ್ಠಾನ
*ಅರಣ್ಯ ಭೂಮಿಯಲ್ಲಿ ಆದಿವಾಸಿಗಳ ಹಕ್ಕು ವಿತರಣೆ

Congress Releases Election Manifesto For Gujarat Assembly Elections

ಹಿಮಾಚಲ ಚುನಾವಣೆ: ಕಾಂಗ್ರೆಸ್‌ನ ಭರವಸೆಗಳು

ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜನರಿಗೆ ಹಲವು ಭರವಸೆಗಳನ್ನು ನೀಡಿತ್ತು. ಈ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಸರ್ಕಾರ ರಚಿಸಿದರೆ ಮಹಿಳೆಯರಿಗೆ ಪ್ರತಿ ತಿಂಗಳು 1500 ರೂ. ನೀಡಲಾಗುವುದು ಎಂದು ಕಾಂಗ್ರೆಸ್‌ ಹೇಳಿದೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ತನ್ನ ಚುನಾವಣೆ ಭರವಸೆಯಲ್ಲಿ ಸರ್ಕಾರ ರಚನೆಯಾದರೆ, ಹಳೆಯ ಪಿಂಚಣಿ ಯೋಜನೆಯಲ್ಲಿ (OPS) ಮತ್ತೆ ಕೆಲಸ ಮಾಡುವುದಾಗಿ ಹೇಳಿದೆ. ಇದಲ್ಲದೇ, ಒಪಿಎಸ್ ಜಾರಿ, 300 ಯೂನಿಟ್ ಉಚಿತ ವಿದ್ಯುತ್ ನೀಡುವುದು, ಕೆ.ಜಿ.ಗೆ 2 ರೂ.ಗೆ ದನದ ಸಗಣಿ ಖರೀದಿ ಸೇರಿದಂತೆ ಮುಂತಾದ ಪ್ರಮುಖ ವಿಷಯಗಳನ್ನು ಕಾಂಗ್ರೆಸ್‌ ಪಕ್ಷ ಒಳಗೊಂಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+