ನನ್ನ ಬದುಕು ಹಾಳು ಮಾಡಿದ್ದು ಕಾಂಗ್ರೆಸ್: ಮುಲಾಯಂ ಸಿಂಗ್
ಕಾಂಗ್ರೆಸ್ ನಿಂದ ನನ್ನ ಬದುಕು ಹಾಳಾಯಿತು. ಅಖಿಲೇಶ್ ನನ್ನು ಮುಖ್ಯಮಂತ್ರಿ ಮಾಡಿದ ನನ್ನಿಂದ ತಪ್ಪಾಯಿತು ಎಂದು ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಮಾಧ್ಯಮದವರ ಎದುರು ಅಲವತ್ತುಕೊಂಡಿದ್ದಾರೆ
ಲಖನೌ, ಮೇ 8: ಕಾಂಗ್ರೆಸ್ ಜತೆಗೆ ಸಮಾಜವಾದಿ ಪಕ್ಷ ಮೈತ್ರಿ ಮಾಡಿಕೊಂಡಿದ್ದಕ್ಕೆ ಈಗ ಆಕ್ರೋಶ ವ್ಯಕ್ತಪಡಿಸಿರುವ ಮುಲಾಯಂ ಸಿಂಗ್ ಯಾದವ್, ನನ್ನ ಮಗ ಅಖಿಲೇಶ್ ನನ್ನು ಮುಖ್ಯಮಂತ್ರಿ ಮಾಡಿದ್ದು ದೊಡ್ಡ ತಪ್ಪು ಎಂದಿದ್ದಾರೆ. ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಂಡಿದ್ದೇ ಪಕ್ಷದ ಇಂದಿನ ದುಃಸ್ಥಿತಿಗೆ ಕಾರಣ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಜತೆಗೆ ಮೈತ್ರಿ ಬೇಡ ಎಂದು ಅಖಿಲೇಶ್ ಗೆ ಹೇಳಿದೆ. ಆತ ನನ್ನ ಮಾತು ಕೇಳಲಿಲ್ಲ. ಸೋಲಿಗೆ ಪಕ್ಷವೇ ಕಾರಣ ಹೊರತು ಜನರಲ್ಲ ಎಂದು ಮುಲಾಯಂ ಮಾಧ್ಯಮದವರಿಗೆ ಹೇಳಿದ್ದಾರೆ. ಕಾಂಗ್ರೆಸ್ ನನ್ನ ಜೀವನವನ್ನೇ ಹಾಳು ಮಾಡಿದೆ. ಕಾಂಗ್ರೆಸ್ ನನ್ನ ವಿರುದ್ಧ ದೂರುಗಳಾನ್ನು ದಾಖಲಿಸಿತು ಮತ್ತು ಅದೇ ಪಕ್ಷದ ಜತೆಗೆ ಅಖಿಲೇಶ್ ಮೈತ್ರಿ ಮಾಡಿಕೊಂಡರು ಎಂದು ಅವರು ಹೇಳಿದ್ದಾರೆ.[ಮಾಯಾವತಿ, ಅಖಿಲೇಶ್, ಮುಲಾಯಂ ಭದ್ರತೆ ಹಿಂಪಡೆದ ಯೋಗಿ ಸರ್ಕಾರ]

ಅದು ನನ್ನ ತಪ್ಪು. ಅಖಿಲೇಶ್ ನನ್ನು ನಾನೇ ಮುಖ್ಯಮಂತ್ರಿ ಮಾಡಿದೆ. ಇನ್ನೂರಾ ಇಪ್ಪತ್ನಾಲ್ಕು ಸ್ಥಾನದಿಂದ ನಲವತ್ತೇಳು ಸ್ಥಾನಕ್ಕೆ ಕುಸಿತ ಕಾಣುವಂತಾಯಿತು. ಜೌನ್ ಪುರ್ ಕ್ಕೆ ಶಿವಪಾಲ್ ಯಾದವ್ ಗೆ ಬೆಂಬಲಿಸಿ ತೆರಳಿದಾಗ ನಾನು ಮುಖ್ಯಮಂತ್ರಿ ಆಗಿರಬೇಕಿತ್ತು ಎಂದು ಸಮಾಜವಾದಿ ಪಕ್ಷದ ಸ್ಥಾಪಕರೂ ಆದ ಮುಲಾಯಂ ಸಿಂಗ್ ಯಾದವ್ ಬೇಸರ ವ್ಯಕ್ತಪಡಿಸಿದ್ದಾರೆ.[ಮುಲಾಯಂ ಬಂಗ್ಲೆ ಮೇಲೆ ವಿದ್ಯುತ್ ಇಲಾಖೆ ದಾಳಿ]
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications