'ಹುವಾ ತೋ ಹುವಾ' ಎಂದ ಸ್ಯಾಮ್ ಪಿತ್ರೋಡಾಗೆ ಪಂಚ್ ನೀಡಿದ ಮೋದಿ
ರೋಹ್ಟಕ್(ಹರ್ಯಾಣ), ಮೇ 10: "ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು ಸಿಖ್ ದಂಗೆಯ ಬಗ್ಗೆ ನೀಡಿದ 'ಹುವಾ ತೋ ಹುವಾ' ಹೇಳಿಕೆ ಕಾಂಗ್ರೆಸ್ಸಿಗರ ದುರಹಂಕಾರದ ಪ್ರವೃತ್ತಿಗೆ ಸಾಕ್ಷಿ" ಎಂದು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಅವರನ್ನು ತರಾಟೆಗೆ ತೆಗೆದುಕೊಂಡರು.
ಹರ್ಯಾಣದ ರೋಹ್ಟಕ್ ನಲ್ಲಿ ಶುಕ್ರವಾರ ಪ್ರಚಾರ ಸಭೆ ನಡೆಸುತ್ತಿದ್ದ ಮೋದಿ, ಸ್ಯಾಮ್ ಪಿತ್ರೋಡಾ ಅವರ ಹೇಳಿಕೆ, ಕಾಂಗ್ರೆಸ್ ನ ನಡವಳಿಕೆ ಮತ್ತು ಮಾನಸಿಕತೆಯನ್ನು ತೋರಿಸಿಕೊಡುತ್ತದೆ ಎಂದರು.
1984 ರಲ್ಲಿ ನಡೆದ ಸಿಖ್ ದಾಳಿಯಲ್ಲಿ ಸಿಖ್ಕರನ್ನು ಕೊಲ್ಲಲು ಆಗಿನ ಪ್ರಧಾನಿ ರಾಜೀವ್ ಗಾಂಧಿ ಅವರೇ ಸೂಚನೆ ನೀದಿದ್ದರು ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದ ಸ್ಯಾಮ್ ಪಿತ್ರೋಡಾ, "ಆಗಿದ್ದು ಆಯ್ತು,(ಹುವಾ ತೋ ಹುವಾ) ಭೂತಕಾಲದ ಬಗ್ಗೆ ಯೋಚಿಸಿ ಪ್ರಯೋಜನವಿಲ್ಲ" ಎಂದಿದ್ದರು. ಈ ಹೇಳಿಕೆಯನ್ನು ಗಂಭಿರವಾಗಿ ಪರಿಗಣಿಸಿದ್ದ ಬಿಜೆಪಿ ನಾಯಕರು ಪಿತ್ರೋಡಾ ಅವರನ್ನು ಟೀಕಿಸಿದ್ದರು. 'ನನ್ನ ಹೇಳಿಕೆಯನ್ನು ತಿರುಚಲಾಗಿದೆ' ಎಂದು ನಂತರ ಪಿತ್ರೋಡಾ ಹೇಳಿದ್ದರು.

ಈ ಕುರಿತು ಇಂದಿನ ತಮ್ಮ ಭಾಷಣದಲ್ಲಿ ಮಾತನಾಡಿದ ಮೋದಿ, 'ಹುವಾ ತೋ ಹುವಾ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡರು, ಗಾಂಧಿ ಕುಟುಂಬದ ಆಪ್ತರೊಬ್ಬರು ಹೇಳಿದ್ದಾರೆ. ಈ ಮೂರು ಪದಗಳ ಮೂಲಕ ಅವರು ಕಾಂಗ್ರೆಸ್ಸಿಗರ ನಡವಳಿಕೆ ಮತ್ತು ಮಾನಸಿಕತೆಯನ್ನು ತೋರಿಸಿಕೊಟ್ಟಿದ್ದಾರೆ. ಅವರ ದುರಹಂಕಾರಕ್ಕೆ ಇದು ನಿದರ್ಶನ' ಎಂದಿದ್ದಾರೆ.
ಸಾವಿರಾರು ಸಿಖ್ಕರನ್ನು ಅವರ ಮನೆಯಿಂದ ಎಳೆದುತಂದು ಕೊಲ್ಲಲಾಯ್ತು. ಅದಕ್ಕೆ ಕಾಂಗ್ರೆಸ್ 'ಆಗಿದ್ದೆಲ್ಲ ಆಯ್ತು' ಎನ್ನುತ್ತದೆಂದರೆ ಇದು ದುರಹಂಕಾರದ ಪರಮಾವಧಿಯಲ್ಲವೇ? ಎಂದು ಮೋದಿ ಪ್ರಶ್ನಿಸಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications