ಜನರ ಸಿಟ್ಟಿಗೆ ಹೆದರಿ ತೈಲ ಬೆಲೆ ಇಳಿಸಿದೆ ಕೇಂದ್ರ ಸರಕಾರ ಎಂದ ಕಾಂಗ್ರೆಸ್
ನವದೆಹಲಿ, ಅಕ್ಟೋಬರ್ 4: ನಾಲ್ಕು ರಾಜ್ಯಗಳಲ್ಲಿನ ವಿಧಾನಸಭೆ ಚುನಾವಣೆ ಕಣ್ಣೆದುರು ಇದ್ದು, ಜನರ ಮುಖದ ಮೇಲೆ ಕೋಪದ ಗೆರೆಗಳನ್ನು ಕಂಡು ಆ ಭಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಕಡಿಮೆ ಮಾಡಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸಿಂಗ್ ಸುರ್ಜೇವಾಲಾ ಕೇಂದ್ರ ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಪೆಟ್ರೋಲ್/ಡೀಸೆಲ್ ಬೆಲೆಯಲ್ಲಿ ಲೀಟರ್ ಗೆ ರು.2.50 ಕಡಿಮೆ ಮಾಡಿದ ಕೇಂದ್ರ ಸರಕಾರದ ನಿರ್ಧಾರ ಘೋಷಣೆ ಮಾಡಿದ ನಂತರ ಕಾಂಗ್ರೆಸ್ ಈ ಪ್ರತಿಕ್ರಿಯೆ ನೀಡಿದೆ. ಜನರ ಕಡೆಗೆ ಹೀಗೆ 1 ಅಥವಾ 2 ರುಪಾಯಿ ತೂರುವ ಬದಲು 2014ರಲ್ಲಿ ಪೆಟ್ರೋಲ್-ಡೀಸೆಲ್ ಯಾವ ಮಟ್ಟದಲ್ಲಿತ್ತೋ ಅಲ್ಲಿಗೆ ತರಲಿ ಎಂದು ಹೇಳಿದೆ.
ಬಿಜೆಪಿ ಅಧಿಕಾರದಲ್ಲಿ ಇರುವ ಮಹಾರಾಷ್ಟ್ರ, ಛತ್ತೀಸ್ ಗಢ, ಜಾರ್ಖಂಡ್ ಮತ್ತು ರಾಜಸ್ತಾನದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಹೆಚ್ಚಿನ ವ್ಯಾಟ್ (ವ್ಯಾಲ್ಯೂ ಆಡೆಡ್ ಟ್ಯಾಕ್ಸ್) ಹೇರಲಾಗುತ್ತಿದೆ. ಇಂಧನವನ್ನು ಜಿಎಸ್ ಟಿ ಅಡಿಯಲ್ಲಿ ತಂದುಬಿಡಲಿ ಎಂದು ಅವರು ಹೇಳಿದ್ದಾರೆ.

ಮಾಹಿ ಹಕ್ಕು ಕಾಯ್ದೆ ಅಡಿ ಕೇಳಿದ ಮಾಹಿತಿಗೆ ಸಿಕ್ಕಿರುವ ಪ್ರತಿಕ್ರಿಯೆ ಪ್ರಕಾರ, ನರೇಂದ್ರ ಮೋದಿ ನೇತೃತ್ವದ ಸರಕಾರವು ಭಾರತದಲ್ಲಿ ಮಾರಾಟ ಮಾಡುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಯ ಅರ್ಧಕ್ಕೂ ಕಡಿಮೆ ಬೆಲೆಗೆ ಬೇರೆ ದೇಶಗಳಿಗೆ ಮಾರಿಕೊಳ್ಳುತ್ತಿದೆ. ತನ್ನದೇ ಜನರಿಗೆ ಈ ಸರಕಾರ ಹೇಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದೆ ಎಂದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಸುರ್ಜೇವಾಲಾ ಹೇಳಿದ್ದಾರೆ.
-
Gas Bill: ಹೋಟೆಲ್ ಬಿಲ್ನಲ್ಲಿ ಗ್ರಾಹಕರಿಗೆ 'ಗ್ಯಾಸ್ ಶುಲ್ಕ' ವಿಧಿಸುವಂತಿಲ್ಲ: ಕೇಂದ್ರದಿಂದ ಖಡಕ್ ಎಚ್ಚರಿಕೆ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications