'ವಿಷ'ಕಾರಿದ ಸೋನಿಯಾ ಮೇಲೆ ಕೆಂಡಕಾರಿದ ಮೋದಿ
ಮೀರತ್ (ಉತ್ತರ ಪ್ರದೇಶ), ಫೆ. 2 : ಬಿಜೆಪಿ ವಿಷದ ಬೀಜ ಬಿತ್ತುತ್ತಿದೆ ಎಂದ ಸೋನಿಯಾ ಗಾಂಧಿ ಮೇಲೆ ಹರಿಹಾಯ್ದಿರುವ ಭಾರತ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು, ಕಳೆದ 64 ವರ್ಷಗಳಿಂದ ವಿಷದ ಬೀಜ ಬಿತ್ತುತ್ತಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುಲಬರ್ಗದಲ್ಲಿ ಶನಿವಾರ ಮಾಡಿದ ಭಾಷಣದಲ್ಲಿ ಸೋನಿಯಾ ಗಾಂಧಿ ಅವರು, "ವಿಷದ ಬೀಜ ಬಿತ್ತುತ್ತಿರುವವರನ್ನು, ಜಾತ್ಯತೀತ ವಾದದಲ್ಲಿ ನಂಬಿಕೆ ಇಲ್ಲದವರನ್ನು, ಯಶಸ್ಸಿಗಾಗಿ ಹಿಂಸೆಯನ್ನು ಪ್ರೋತ್ಸಾಹಿಸುವ ಹೊಲಸು ರಾಜಕೀಯ ಆಟ ಆಡುವವರನ್ನು ನೀವು ನಂಬುವುದಿಲ್ಲ ಎಂದು ಗೊತ್ತು" ಎಂದು ಬಿಜೆಪಿ ಮೇಲೆ ಕೆಂಡ ಕಾರಿದ್ದರು. [ಅಧಿಕಾರಕ್ಕಾಗಿ ಬಿಜೆಪಿ ಹಪಾಹಪಿ : ಸೋನಿಯಾ]
ಮೀರತ್ ಜಿಲ್ಲೆಯ ಗೋರಖಪುರದಲ್ಲಿ ಭಾನುವಾರ ಮಧ್ಯಾಹ್ನ ಬೃಹತ್ ಸಭೆ ಉದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ ಅವರು, "ಕಾಂಗ್ರೆಸ್ ಒಡೆದು ಆಳುವ ಪಕ್ಷ. ಮತ ಬ್ಯಾಂಕ್ ಗಳಲ್ಲಿ ಅದಕ್ಕೆ ಅಪಾರವಾದ ನಂಬಿಕೆ. ಎರಡು ಕೋಮುಗಳ ನಡುವೆ ಜಗಳ ತಂದಿಡುವುದು ಅದಕ್ಕೆ ತೃಪ್ತಿ" ಎಂದು ವ್ಯಂಗ್ಯವಾಡಿದ್ದಾರೆ.

1857ರ ಹುತಾತ್ಮರ ಅವಮಾನ : ಇತಿಹಾಸದ ಪುಟಗಳನ್ನು ಕೆದಕುತ್ತ ಕಾಂಗ್ರೆಸ್ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ ಮೋದಿ ಅವರು, "1857ರ ಮೊದಲ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದ ಹುತಾತ್ಮರನ್ನು ಕಾಂಗ್ರೆಸ್ ಅವಮಾನಿದೆ. ಕಾಂಗ್ರೆಸ್ ಮತ್ತು ಯುಪಿಎಗಳಿಗೆ ಜನರು 1857ರ ದಂಗೆಯನ್ನು ನೆನಪಿನಲ್ಲಿಡುವುದು ಬೇಕಾಗಿಲ್ಲ" ಎಂದು ಕಾಲೆಳೆದಿದ್ದಾರೆ.
ಆಮ್ ಆದ್ಮಿ ಪಕ್ಷದ ವಿರುದ್ಧವೂ ಮಾತಿನ ಲಹರಿ ಹರಿಬಿಟ್ಟ ಮೋದಿ, ಈಶಾನ್ಯ ಭಾರತ ಮತ್ತು ಆಫ್ರಿಕಾ ಜನರನ್ನು ರಕ್ಷಿಸುವಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಕ್ಷ ಸಂಪೂರ್ಣ ಸೋತಿದೆ ಎಂದು ಟೀಕಿಸಿದರು. ಭಾರತದ ಈಶಾನ್ಯ ಭಾಗದಲ್ಲಿರುವ ಮಕ್ಕಳು ಕೂಡ ನಮ್ಮ ಮಕ್ಕಳೇ ಅಲ್ಲವೆ ಎಂದು ಪ್ರಶ್ನಿಸಿದರು.
ತಮ್ಮ ಎಂದಿನ ಶೈಲಿಯಲ್ಲಿ ನಿರರ್ಗಳವಾಗಿ ಭಾಷಣ ಮಾಡಿದ ಮೋದಿ ನಂತರ ಉತ್ತರ ಪ್ರದೇಶದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಸಮಾಜವಾದಿ ಪಕ್ಷವನ್ನು ಗುರಿ ಮಾಡಿಕೊಂಡರು. ರಾಜ್ಯದಲ್ಲಿ ಅವ್ಯಾಹತವಾಗಿ ಭ್ರಷ್ಟಾಚಾರ ನಡೆಯುತ್ತಿದ್ದು, ದುರಾಡಳಿತ ಮನೆಮಾಡಿದ ಎಂದ ಅವರು, ಸಮಾಜವಾದಿ ಪಕ್ಷವನ್ನು ಸಮಾಜ ವಿದ್ರೋಹಿ ಸರಕಾರ ಎಂದು ಟೀಕಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications