ಭಾರತ್ ಜೋಡೋ ಯಾತ್ರೆ: 6 ಡಿಗ್ರಿ ಸೆಲ್ಸಿಯಸ್ನಲ್ಲಿಯೂ ಶರ್ಟ್ಗಳಿಲ್ಲದೆ ನೃತ್ಯ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು
ನವದೆಹಲಿ, ಜ. 08: ಭಾನುವಾರ ಬೆಳಗಿನ ಮೈಕೊರೆಯುವ ಚಳಿಯಲ್ಲಿಯೂ ಕಾಂಗ್ರೆಸ್ ಕಾರ್ಯಕರ್ತರು ಭಾರತ್ ಜೋಡೋ ಯಾತ್ರೆಯಲ್ಲಿ ಶರ್ಟ್ಗಳನನ್ಉ ತೆಗೆದು ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ.
ಕಾಂಗ್ರೆಸ್ ನೇತೃತ್ವದ ಭಾರತ್ ಜೋಡೋ ಯಾತ್ರೆಯು ವರ್ಣರಂಜಿತ ಮೆರವಣಿಗೆಯೊಂದಿಗೆ ಹರಿಯಾಣದ ಕರ್ನಾಲ್ಗೆ ಶನಿವಾರ ಪ್ರವೇಶಿಸಿದೆ. ಭಾನುವಾರ ಬೆಳಿಗ್ಗೆ ಕಾಂಗ್ರೆಸ್ ಬೆಂಬಲಿಗರು ರಾಷ್ಟ್ರಧ್ವಜ ಹಿಡಿದು ಡ್ರಮ್ ಬಾರಿಸಿ ಯಾತ್ರೆಗೆ ಚಾಲನೆ ನೀಡಿದ್ದಾರೆ.
#WATCH | Congress supporters dance shirtless amid dense fog during Bharat Jodo Yatra in Haryana's Karnal pic.twitter.com/0kmHmkL1nK
— ANI (@ANI) January 8, 2023
ಹರಿಯಾಣದ ಕರ್ನಾಲ್ನಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಕೆಲವು ಕಾಂಗ್ರೆಸ್ ಬೆಂಬಲಿಗರು ದಟ್ಟವಾದ ಮಂಜಿನ ನಡುವೆ 'ಶರ್ಟ್ಲೆಸ್' ಆಗಿ ಬಸ್ಗಳ ಮೇಲೆ ನಿಂತು, 6 ಡಿಗ್ರಿ ಸೆಲ್ಸಿಯಸ್ನಲ್ಲಿ ಶರ್ಟ್ ಇಲ್ಲದೆ ನೃತ್ಯ ಮಾಡಿ ಯಾತ್ರೆಗೆ ಹುರುಪು ತುಂಬಿದ್ದಾರೆ.

ಶನಿವಾರ ಕರ್ನಾಲ್ ನಲ್ಲಿ ನಡೆದ ಕಬ್ಬಡಿ ಪಂದ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ವೀಕ್ಷಿಸಿದ್ದರು. ತಮ್ಮ ಬೆಂಬಲಿಗರೊಂದಿಗೆ ಪಂದ್ಯ ವೀಕ್ಷಿದಿದ್ದ ಅವರು ತುಂಬಾ ಉತ್ಸಾಹದಿಂದ ತಲ್ಲೀನರಾಗಿದ್ದರು.
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಅವರು ಸಹ ನಾಯಕ ದೀಪೇಂದರ್ ಹೂಡಾ ಅವರೊಂದಿಗೆ ಹರಿಯಾಣದ ಕ್ರೀಡಾಪಟುಗಳನ್ನು ಭೇಟಿಯಾಗಿದ್ದಾರೆ.
ಒಲಂಪಿಕ್ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ಮತ್ತು ಪಕ್ಷದ ಹಿರಿಯ ನಾಯಕರಾದ ಭೂಪಿಂದರ್ ಸಿಂಗ್ ಹೂಡಾ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಹಲವು ನಾಯಕರೊಂದಿಗೆ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯು ಹರಿಯಾಣದ ಕರ್ನಾಲ್ ಜಿಲ್ಲೆಯ ಮೂಲಕ ಸಾಗಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಮೆರವಣಿಗೆ ನಡೆಯಿತು.

ಕೊರೆಯುವ ಚಳಿ ಮತ್ತು ಮಂಜಿನ ಹೊರತಾಗಿಯೂ, ಪಾಣಿಪತ್ನಲ್ಲಿ ದೊಡ್ಡ ಮೆರವಣಿಗೆ ನಡೆದ ಒಂದು ದಿನದ ನಂತರ ಭಾರತ್ ಜೋಡೋ ಯಾತ್ರೆಯನ್ನು ಸ್ವಾಗತಿಸಲು ಕರ್ನಾಲ್ನಲ್ಲಿ ಅಪಾರ ಜನಸ್ತೋಮ ನೆರೆದಿತ್ತು. ಬೆಳಗ್ಗೆ ಕರ್ನಾಲ್ನ ಘರೌಂಡಾದ ಕೊಹಂಡ್ ಗ್ರಾಮದಿಂದ ಯಾತ್ರೆ ಆರಂಭವಾಗುತ್ತಿದ್ದಂತೆ ರಾಹುಲ್ ಗಾಂಧಿ ಜನರೊಂದಿಗೆ ಹಸ್ತಲಾಘವ ಮಾಡಿ ಮಕ್ಕಳೊಂದಿಗೆ ಫೋಟೋ ತೆಗೆಸಿಕೊಂಡರು.
ಇದರ ಜೊತೆಗೆ ಹಿಂದುಳಿದ ವರ್ಗಗಳ ಸಮುದಾಯದ ನಿಯೋಗವನ್ನು ಭೇಟಿ ಮಾಡಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಸೆ.7ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆ ಜನವರಿ 30ರಂದು ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಮುಕ್ತಾಯವಾಗಲಿದೆ. ರಾಹುಲ್ ಗಾಂಧಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಯಾತ್ರೆಗೆ ಕೊನರ ಹಾಡಲಿದ್ದಾರೆ. ಭಾರತ್ ಜೋಡೋ ಯಾತ್ರೆ ಇದುವರೆಗೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ರಾಜಸ್ಥಾನ, ದೆಹಲಿ ಮತ್ತು ಉತ್ತರ ಪ್ರದೇಶ, ಮಧ್ಯಪ್ರದೇಶಗಳಲ್ಲಿ ಸಂಚರಿಸಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications