Breaking: ಭಾರತ್ ಜೋಡೊ ಯಾತ್ರೆ ಸ್ಥಗಿತಗೊಳಿಸಿದ ಕಾಂಗ್ರೆಸ್
ನವದೆಹಲಿ, ಜನವರಿ 14: ಭಾರತ್ ಜೋಡೊ ಯಾತ್ರೆ ಮೆರವಣಿಗೆಯ ವೇಳೆ ಹೃದಯಾಘಾತದಿಂದ ನಿಧನರಾದ ಪಕ್ಷದ ಸಂಸದ ಸಂತೋಖ್ ಸಿಂಗ್ ಚೌಧರಿ ಅವರಿಗೆ ಗೌರವ ಸೂಚಕವಾಗಿ ಪಂಜಾಬ್ನಲ್ಲಿ ನಡೆಯುತ್ತಿದ್ದ ಭಾರತ್ ಜೋಡೋ ಯಾತ್ರೆಯನ್ನು ಕಾಂಗ್ರೆಸ್ ಶನಿವಾರ ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಿದೆ.
ಮಾಜಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಅವರು ಜನವರಿ 15 ರಂದು ಜಲಂಧರ್ನಲ್ಲಿ ತಮ್ಮ ನಿಗದಿತ ಪತ್ರಿಕಾಗೋಷ್ಠಿಯನ್ನು ಮುಂದೂಡಿದರು. ಈಗ ಅದು ಜನವರಿ 17 ರಂದು ಹೋಶಿಯಾರ್ಪುರದಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ.
ಇಂದು ಬೆಳಗ್ಗೆ ನಿಧನರಾದ ಜಲಂಧರ್ನ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರಿಗೆ ಗೌರವ ಸೂಚಕವಾಗಿ ಭಾರತ್ ಜೋಡೋ ಯಾತ್ರೆಯನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುವುದು. ನಾಳೆ ಮಧ್ಯಾಹ್ನ ಜಲಂಧರ್ನ ಖಾಲ್ಸಾ ಕಾಲೇಜು ಮೈದಾನದಿಂದ ಯಾತ್ರೆ ಪುನರಾರಂಭವಾಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.

"ಜಲಂಧರ್ನ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರ ಅನಿರೀಕ್ಷಿತ ಮತ್ತು ಆಘಾತಕಾರಿ ನಿಧನದಿಂದಾಗಿ ನಾಳೆ ಜಲಂಧರ್ನಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿಯವರ ಪತ್ರಿಕಾಗೋಷ್ಠಿಯನ್ನು ಈಗ ಜನವರಿ 17 ರಂದು ಹೋಶಿಯಾರ್ಪುರದಲ್ಲಿ ನಡೆಸಲಾಗುವುದು ಎಂದು ಅವರು ಮತ್ತೊಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಭಾರತ್ ಜೋಡೋ ಯಾತ್ರೆಯ ವೇಳೆ ಹೃದಯಾಘಾತದಿಂದ ಚೌಧರಿ ಶನಿವಾರ ಬೆಳಿಗ್ಗೆ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ಎರಡು ಬಾರಿ ಸಂಸದರಾಗಿರುವ ಅವರು ಜಲಂಧರ್ನ ಫಿಲ್ಲೌರ್ನಲ್ಲಿ ರಾಹುಲ್ ಗಾಂಧಿ ನೇತೃತ್ವದ ಮೆರವಣಿಗೆಯಲ್ಲಿ ಭಾಗವಹಿಸಿದ್ದರು, ಅವರು ಯಾತ್ರೆ ವೇಳೆ ನಡೆದುಕೊಂಡು ಹೋಗುತ್ತಿದ್ದಾಗ ಮೂರ್ಛೆ ಹೋದರು ಎಂದು ಪಕ್ಷದ ಹಿರಿಯ ನಾಯಕ ಪರತಾಪ್ ಸಿಂಗ್ ಬಾಜ್ವಾ ಹೇಳಿದರು.

ಚೌಧರಿ ಅವರನ್ನು ಆಂಬ್ಯುಲೆನ್ಸ್ನಲ್ಲಿ ಫಗ್ವಾರಾದ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಬಳಿಕ ಅವರ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ಸ್ಥಳಾಂತರಿಸಲಾಯಿತು. ಲೋಹ್ರಿಗೆ ಒಂದು ದಿನದ ವಿರಾಮದ ನಂತರ ಶನಿವಾರ ಪಂಜಾಬ್ನಲ್ಲಿ ಭಾರತ್ ಜೋಡೋ ಯಾತ್ರೆ ಪುನರಾರಂಭಗೊಂಡಿತ್ತು.
-
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications