ನ್ಯಾಷನಲ್ ಹೆರಾಲ್ಡ್: ಕಾಂಗ್ರೆಸ್ ನಾಯಕರಿಗೀಗ ಚಂದಾದಾರರ ಚಿಂತೆ
ಬೆಂಗಳೂರು, ಜೂನ್ 16: ಬೆಂಗಳೂರಿನಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಸ್ಮರಣ ಸಂಚಿಕೆ ಬಿಡುಗಡೆಯಾಗಿದೆ. ಇದೇ 20ರಂದು ದೆಹಲಿಯಲ್ಲಿ ಪತ್ರಿಕೆ ಉದ್ಘಾಟನೆಯಾಗಲಿದೆ. ಆದರೆ ಪತ್ರಿಕೆಗೆ ಚಾಲನೆ ಸಿಗುವ ಮೊದಲೇ ಚಂದಾದರರನ್ನು ಹುಡುಕುವ 'ಹೊರೆ'ಯನ್ನು ಕಾಂಗ್ರೆಸ್ ನಾಯಕರಿಗೆ ನೀಡಲಾಗಿದೆ.
ಎಲ್ಲಾ ರಾಜ್ಯಗಳ ಕಾಂಗ್ರೆಸ್ ಘಟಕಗಳಿಗೆ ಚಂದಾದಾರರಾಗಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಓದುವಂತೆ ಸಲಹೆ ನೀಡಿರುವ ಹೈಕಮಾಂಡ್ ಜತೆಗೆ ಚಂದಾದಾರರನ್ನು ಹೊಂದಿಸುವಂತೆಯೂ ಹೇಳಿದೆ. ಸದ್ಯ ಪತ್ರಿಕೆ ಆನ್ಲೈನಿನಲ್ಲಿ ಮಾತ್ರ ಲಭ್ಯವಿದ್ದು ಸದ್ಯದಲ್ಲೇ ಮುದ್ರಣ ಪ್ರತಿಯೂ ಹೊರ ಬರಲಿದೆ.

ನೀಲಭ್ ಮಿಶ್ರಾ ಸಂಪಾದಕತ್ವದಲ್ಲಿ ಹೊರ ಬರುತ್ತಿರುವ ಪತ್ರಿಕೆಯ ಸದ್ಯದ ವಾರ್ಷಿಕ ಚಂದಾ 1,000 ರೂಪಾಯಿ ಇದೆ. ಎಲ್ಲಾ ರಾಜ್ಯ ಘಟಕಗಳಿಗೂ ಕನಿಷ್ಠ 35,000 ಚಂದಾದಾರರನ್ನು ಹೊಂದಿಸುವಂತೆ ಹೈಕಮಾಂಡಿನಿಂದ ನಿರ್ದೇಶನ ಬಂದಿದೆ.
ಅದರಲ್ಲೂ ಸದ್ಯದಲ್ಲೇ ಚುನಾವಣೆ ನಡೆಯಲಿರುವ ಕರ್ನಾಟಕದಲ್ಲಿ ಹೆಚ್ಚಿನ ಚಂದಾದರನ್ನು ಮಾಡುವಂತೆ ನಾಯಕರಿಗೆ ಸೂಚನೆ ನೀಡಿದೆ. ಜಿಲ್ಲಾಘಟಗಳ ವಿಸ್ತಾರ, ಕಾರ್ಯಕರ್ತರ ಸಂಖ್ಯೆ ನೋಡಿಕೊಂಡು ಟಾರ್ಗೆಟ್ ನೀಡಲು ಕಾಂಗ್ರೆಸ್ ಯೋಚಿಸಿದೆ. ಸದ್ಯಕ್ಕೆ ಅಧಿಕೃತವಾಗಿ ಯಾವುದೇ ಸೂಚನೆಗಳು ಬಂದಿಲ್ಲವಾದರೂ ಸದ್ಯದಲ್ಲೇ ನಿರ್ದೇಶನಗಳನ್ನು ನೀಡುವ ಸಾಧ್ಯತೆ ಇದೆ.
ಸದ್ಯಕ್ಕೆ ಪತ್ರಿಕೆಯನ್ನು ಮನೆಮನೆಗೆ ತಲುಪಿಸಿ ಜನಪ್ರಿಯತೆ ಪಡೆಯುವ ಜತೆಗೆ ಪಕ್ಷಕ್ಕೆ ಆದಾಯದ ಮೂಲವನ್ನು ಹೊಂದಿಸುವ ಗುರಿಯನ್ನೂ ಕಾಂಗ್ರೆಸ್ ಹಾಕಿಕೊಂಡಿದೆ.

ಹಿರಿಯ ನಾಯಕರಿಗೆ ನಿಮ್ಮ ಸ್ವಂತ ಶಕ್ತಿ ಮೇಲೆ 'ಸಹಾಯ' ಮಾಡುವಂತೆ ಕಾಂಗ್ರೆಸ್ ಹೇಳಿದ್ದರೆ, ಕಾರ್ಯಕರ್ತರಿಗೆ ಪತ್ರಿಕೆಯನ್ಜು ಜನಪ್ರಿಯಗೊಳಿಸಸುವ ಜವಾಬ್ದಾರಿ ನೀಡಲಾಗಿದೆ. ಹೀಗಾಗಿ ಚುನಾವಣೆಯ ಸಿದ್ಧತೆಯ ಮಧ್ಯೆ ಚಂದಾದಾರನ್ನು ಹೊಂದಿಸುವ ಹೆಚ್ಚುವರಿ ಹೊಣೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಮೇಲಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications