ಆರ್ಟಿಕರ್ 370 ಪರಾಮರ್ಶೆ ನಡೆಸಲಿದ್ದೇವೆ ಎಂದ ದಿಗ್ವಿಜಯ್ ಸಿಂಗ್: ಬಿಜೆಪಿ ವಾಗ್ದಾಳಿ
ನವದೆಹಲಿ, ಜೂನ್ 13: ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಕ್ಲಬ್ಹೌಸ್ ಸಾಮಾಜಿಕ ಜಾಲತಾಣದಲ್ಲಿ ಆಡಿದ ಮಾತು ಈಗ ವಿವಾದಕ್ಕೆ ಕಾರಣವಾಗಿದೆ. ಈ ಮಾತುಕತೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿರುವುದು ಹಾಗೂ ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವುದಕ್ಕೆ ದಿಗ್ವಿಜಯ್ ಸಿಂಗ್ ಬೇಸರವನ್ನು ವ್ಯಕ್ತಪಡಿಸಿದ್ದರು. ಅಲ್ಲದೆ ಮೋದಿ ಸರ್ಕಾರದ ಅವಧಿಯ ಬಳಿಕ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ವಿಚಾರದಲ್ಲಿ ಮರು ಪರಿಶೀಲನೆ ನಡೆಸುವುದಾಗಿಯೂ ಈ ಆಡಿಯೋ ಸಂವಾದದಲ್ಲಿ ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿದ್ದಾರೆ.
ಈ ಆಡಿಯೋ ಸಂವಾದದ ವಿಚಾರವಾಗಿ ಬಿಜೆಪಿ ಈಗ ತೀವ್ರ ಟೀಕೆಯನ್ನು ಮಾಡುತ್ತಿದ್ದು ದಿಗ್ವಿಜಯ್ ಸಿಂಗ್ ಭಾರತದ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದೆ. ಜೊತೆಗೆ ಪಾಕಿಸ್ತಾನದ ಜೊತೆಗೆ ಅವರು ಒಪ್ಪಂದವನ್ನು ಮಾಡಿಕೊಂಡಿದ್ದಾರೆ ಎಂದು ಕಟು ಟೀಕೆಯನ್ನು ಮಾಡಿದೆ.
ಇನ್ನು ಕ್ಲಬ್ಹೌಸ್ ಸಾಮಾಜಿಕ ಜಾಲತಾಣದ ಆಡಿಯೋ ಸಂವಾದದಲ್ಲಿ ದಿಗ್ವಿಜಯ್ ಸಿಂಗ್ ಈ ಮಾತುಕತೆಗಳನ್ನು ಆಡಿರುವುದು ಪಾಕಿಸ್ತಾನ ಮೂಲದ ಪತ್ರಕರ್ತೆಯ ಜೊತೆಗೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಆರೋಪಿಸಿದ್ದಾರೆ. ಈ ವಿಚಾರವಾಗಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸ್ಪಷ್ಟನೆಯನ್ನು ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದಿಗ್ವಿಜಯ ಸಿಂಗ್ ಅವರು ಭಾರತದ ವಿಷಕಾರುತ್ತಿದ್ದು ಪಾಕಿಸ್ತಾನದ ಜೊತೆಗೆ ಒಪ್ಪಂದ ಮಾಡಿಕೊಳ್ಳುತ್ತಿದ್ದಾರೆ. ಇದೇ ವ್ಯಕ್ತಿ ಪುಲ್ವಾಮ ದಾಳಿಯನ್ನು ಅಪಘಾತ ಎಂದು ಕರೆದಿದ್ದು 26/11 ಮುಂಬೈ ದಾಳಿ ಆರ್ಎಸ್ಎಸ್ನ ಪಿತೂರಿ ಎಂದು ಕರೆದಿದ್ದರು ಎಂದು ಸಂಬಿತ್ ಪಾತ್ರ ಟೀಕಿಸಿದ್ದಾರೆ. ಮುಂದುವರಿದು ಮಾತನಾಡಿದ ಸಂಬಿತ್ ಪಾತ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮಣಿಶಂಕರ್ ಅಯ್ಯರ್ ಹೇಳಿಕೆಗಳನ್ನು ಉಲ್ಲೇಖಿಸಿ ಪಾಕಿಸ್ತಾನದೊಂದಿಗೆ ಕಾಂಗ್ರೆಸ್ ದೊಡ್ಡ ಪ್ರಮಾಣದಲ್ಲಿ ಕೈಜೋಡಿಸಿದ್ದು ದಿಗ್ವಿಜಯ್ ಸಿಂಗ್ ಅವರ ಈ ಮಾತು ಅದು ಭಾಗವಾಗಿದೆ ಎಂದಿದ್ದಾರೆ. ಬಿಜೆಪಿ ಹೊರ ತಂದಿರುವ ಟೂಲ್ಕಿಟ್ನ ಭಾಗ ಇದು. ಮೋದಿ ವಿರುದ್ಧ ಹಾಗೂ ಭಾರತದ ವಿರುದ್ಧ ದ್ವೇಶವನ್ನು ಹರಡಲು ಕಾಂಗ್ರೆಸ್ ಚೀನಾ ಹಾಗೂ ಪಾಕಿಸ್ತಾನದೊಂದಿಗೆ ಕೈಜೋಡಿಸುವ ಮಟ್ಟಿಗೆ ಮುಂದುವರಿದಿದೆ ಎಂದಿದ್ದಾರೆ.
ಇನ್ನು ತನ್ನ ಹೇಳಿಕೆಗೆ ಬಿಜೆಪಿ ನಾಯಕರು ಭಾರೀ ಪ್ರಮಾಣದಲ್ಲಿ ಟೀಕೆ ವ್ಯಕ್ತಪಡಿಸಲು ಆರಂಭಿಸಿದ ಬಳಿಕ ದಿಗ್ವಿಜಯ್ ಸಿಂಗ್ ಸರಣಿ ಟ್ವೀಟ್ಗಳ ಮೂಲಕ ಪ್ರತಿಕ್ರಿಯಿಸಿದ್ದಾರೆ. "ಅಶಿಕ್ಷಿತ ಜನರು 'ಷಲ್' ಮತ್ತು 'ಕನ್ಸಿಡರ್' ಪದಗಳ ಅರ್ಥ ವ್ಯತ್ಯಾಸವನ್ನು ತಿಳಿದಿಲ್ಲ" ಎಂದಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications