ಮಹಿಳಾ ಮೀಸಲಾತಿ ಮಸೂದೆ: ಕಾಂಗ್ರೆಸ್ನಿಂದ 21 ನಗರದಲ್ಲಿ 21 ಸುದ್ದಿಗೋಷ್ಠಿ
ನವದೆಹಲಿ, ಸೆಪ್ಟಂಬರ್ 24: ಮಹಿಳಾ ಮೀಸಲಾತಿಯ ನಾರಿಶಕ್ತಿ ವಂದನಾ ಮಸೂದೆಗೆ ಸಂಬಂಧಿಸಿದಂತೆ ವಿಪಕ್ಷ ಕಾಂಗ್ರೆಸ್ ಇಂದು ಸೋಮವಾರ (ಸೆ.25) ದೇಶದ 21 ನಗರಗಳಲ್ಲಿ ಪತ್ರಿಕಾಗೋಷ್ಠಿ ನಡೆಸಲಿದೆ. ವಿಶೇಷವೆಂದರೆ 21 ಮಹಿಳಾ ನಾಯಕಿಯರು ಈ ಪಾಲ್ಗೊಂಡು ಈ ಮಸೂದೆ ಮತ್ತು ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಬಹಿರಂಗಪಡಿಸಲಿದ್ದಾರೆ ಎಂದು ವರದಿ ಆಗಿದೆ.
ಕೇಂದ್ರ ಬಿಜೆಪಿ ಸರ್ಕಾರವು ಕಳೆದ ಐದು ದಿನಗಳ ವಿಶೇಷ ಸಂಸತ್ತು ಅಧಿವೇಶನದಲ್ಲಿ ಲೋಕಸಭೆ ಮತ್ತು ವಿಧಾನಸಭೆಯ ಚನಾವಣೆಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ನೀಡುವ ನಾರಿಶಕ್ತಿ ವಂದನಾ ಮಸೂದೆ ಅನುಮೋದನೆ ಪಡೆದು ಅಂಗೀಕರಿಸಿತು.

ಈ ಮಸೂದೆಯನ್ನು ಬೆಂಬಲಿಸಿರುವ ಕಾಂಗ್ರೆಸ್ ವಿಳಂಬ ಧೋರಣೆ, ಚುನಾವಣೆ ತಂತ್ರ ಸೇರಿದಂತೆ ಕೆಲವು ವಿಚಾರಗಳ ಕುರಿತು ಕೇಂದ್ರದ ವಿರುದ್ಧ ವಾಗ್ದಾಳೀ ನಡೆಸಿತ್ತು. ಅದರ ಭಾಗವಾಗೇ ಇಂದು 21 ನಗರಗಳಲ್ಲಿ ಪತ್ರಿಕಾಗೋಷ್ಠಿ ನಡೆಸಲಿದೆ.
ಸಂಸದೆ ರಜನಿ ಪಾಟೀಲ್ ಅಹಮದಾಬಾದ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿದರೆ, ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ನೆಟ್ಟಾ ಡಿಸೋಜಾ ಹೈದರಾಬಾದ್ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಂಡಿದ್ದಾರೆ.
ಇನ್ನೂ ಜೈಪುರದಲ್ಲಿ ಅಲ್ಕಾ ಲಂಬಾ, ಭುವನೇಶ್ವರದಲ್ಲಿ ರಂಜೀತ್ ರಂಜನ್,ಮುಂಬೈನಲ್ಲಿ ಅಮೀ ಯಾಗ್ನಿಕ್, ರಾಂಚಿಯಲ್ಲಿ ರಾಗಿಣಿ ನಾಯಕ್ ಹಾಗೂ ಶ್ರೀನಗರದಲ್ಲಿ ಶಾಮಾ ಮೊಹಮದ್ ಸೇರಿದಂತೆ ಇನ್ನಿತರ ನಗರಗಳಲ್ಲಿ ಅಲ್ಲಿನ ಕಾಂಗ್ರೆಸ್ ಪ್ರಮುಖ ಮುಖಂಡರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಕಾಂಗ್ರೆಸ್ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರು 21 ನಗರಗಳಲ್ಲಿ 21 ಮಹಿಳಾ ನಾಯಕರಿಂದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಸೂದೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಜೆಂಡಾ, ಮಹಿಳಾ ಮೀಸಲಾತಿ ಹೆಸರಿನಲ್ಲಿ ಕೇಂದ್ರದ ವಿಶ್ವಾಸ ಘಾತುಕತನವನ್ನು ಬಹಿರಂಗಪಡಿಸಲಾಗುವುದು ಎಂದು ಕಾಂಗ್ರೆಸ್ ತಿಳಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications