ದೇಶದ ಜನತೆಗೆ ಯುವರಾಜ ರಾಹುಲ್ ಗಾಂಧಿ ನೀಡಿದ ಆಶ್ವಾಸನೆ
ಕಾಂಗ್ರೆಸ್ಸಿಗೆ ಮತ್ತೆ ಅಧಿಕಾರ ನೀಡಿದರೆ ಕೇವಲ ಆರು ತಿಂಗಳಲ್ಲಿ ದೇಶದ ಸಮಸ್ಯೆಗಳನ್ನು ಪರಿಹರಿಸುತ್ತೇವೆ, ರಾಹುಲ್ ಗಾಂಧಿ. ಪ್ರಧಾನಿ ಮೋದಿ ಮಾತನಾಡುವುದನ್ನು ಕಮ್ಮಿ ಮಾಡಿ ದೇಶದ ಅಭಿವೃದ್ದಿ ಕಡೆ ಗಮನ ಹರಿಸಲಿ ಎಂದು ರಾಹುಲ್ ಸಲಹೆ ನೀಡಿದ್ದಾರೆ.
Recommended Video

ಅಮೇಥಿ, ಅ 5: ತಮ್ಮ ರಾಜಕೀಯ ಕರ್ಮಭೂಮಿ ಅಮೇಥಿಯಲ್ಲಿ ಮೂರು ದಿನಗಳ ಪ್ರವಾಸದಲ್ಲಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ದೇಶದ ಜನತೆಗೆ ಆಶ್ವಾಸನೆಯ ಮಹಾಪೂರವನ್ನೇ ಹರಿಸಿದ್ದಾರೆ.
ಕಾಂಗ್ರೆಸ್ಸಿಗೆ ಮತ್ತೆ ಅಧಿಕಾರ ನೀಡಿದರೆ ಕೇವಲ ಆರು ತಿಂಗಳಲ್ಲಿ ದೇಶದ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದಿರುವ ರಾಹುಲ್, ಪ್ರಧಾನಿ ಮೋದಿ ಮಾತನಾಡುವುದನ್ನು ಕಮ್ಮಿ ಮಾಡಿ ದೇಶದ ಅಭಿವೃದ್ದಿ ಕಡೆ ಗಮನ ಹರಿಸಲಿ ಎಂದು ಸಲಹೆ ನೀಡಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಎರಡು ಕೋಟಿ ಉದ್ಯೋಗವನ್ನು ಸೃಷ್ಟಿಸುತ್ತೇವೆ. ಬರೀ ಪೊಳ್ಳು ಆಶ್ವಾಸನೆ ನೀಡುತ್ತಿರುವ ಪ್ರಧಾನಿ ಅಧಿಕಾರವನ್ನು ನಮಗೆ ಹಸ್ತಾಂತರಿಸಿದರೆ ಆರು ತಿಂಗಳಲ್ಲಿ ಎಲ್ಲಾ ಸಮಸ್ಯೆಗೆ ಇತಿಶ್ರೀ ಹಾಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಅಪನಗದೀಕರಣ, ಜಿಎಸ್ಟಿ ಮುಂತಾದ ಕಾರಣಗಳಿಂದ ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಇಳಿಯುತ್ತಿದೆ, ಇದರ ದುಷ್ಪರಿಣಾಮವನ್ನು ಮೋದಿ ಸರಕಾರಕ್ಕೆ ನಿಭಾಯಿಸಲು ಸಾಧ್ಯವಾಗುತ್ತಿಲ್ಲ, ನಿರುದ್ಯೋಗದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ರಾಹುಲ್, ಮೋದಿ ಸರಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಅಮೇಥಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್, ಅಧಿಕಾರಕ್ಕೆ ಬರಬೇಕು ಎನ್ನುವ ಏಕಮೇವ ಕಾರಣದಿಂದ ಮೋದಿ ಸುಳ್ಳು ಆಶ್ವಾಸನೆಯನ್ನು ದೇಶದ ಜನತೆಗೆ ನೀಡಿದರು. ಅವರು ನೀಡಿದ ಆಶ್ವಾಸನೆಗಳಲ್ಲಿ ಯಾವುದೂ ಈಡೇರಿಲ್ಲ ಎಂದು ರಾಹುಲ್, ಕೇಂದ್ರ ಸರಕಾರವನ್ನು ಟೀಕಿಸಿದ್ದಾರೆ.
ಉತ್ತರಪ್ರದೇಶ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ನಂತರ, ಸ್ವಕ್ಷೇತ್ರಕ್ಕೆ ರಾಹುಲ್ ಗಾಂಧಿ ಭೇಟಿ ನೀಡುತ್ತಿರುವುದು ಇದೇ ಮೊದಲು. ರಾಹುಲ್ ಮೂರು ದಿನದ ಪ್ರವಾಸ, ಬುಧವಾರದಿಂದ ಆರಂಭವಾಗಿದೆ.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications