ನಗರ ನಕ್ಸಲರ ಜೊತೆಯಲ್ಲಿರುವ ಕಾಂಗ್ರೆಸ್ ಪಕ್ಷ ಕಂಪನಿಯಂತೆ ಕಾರ್ಯನಿರ್ವಹಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
ಭೋಪಾಲ್, ಸೆಪ್ಟೆಂಬರ್ 25: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಲವು ವರ್ಷಗಳ ಕಾಲ ಭಾರತದ ಜನರನ್ನು ಬಡವರನ್ನಾಗಿ ಕಾಂಗ್ರೆಸ್ ಇರಿಸಿದೆ. ಈಗ ಇದೇ ಪಕ್ಷವು ನಗರ ನಕ್ಸಲರ ಜೊತೆಯಲ್ಲಿದೆ. ಇದು ಕಂಪನಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಮಧ್ಯಪ್ರದೇಶದ ಭೋಪಾಲ್ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿರುವ ಅವರು, 'ಕಾಂಗ್ರೆಸ್ ತನ್ನನ್ನು ತಾನು ಬದಲಾಯಿಸಿಕೊಳ್ಳಲು ಬಯಸುವುದಿಲ್ಲ. ದೇಶವನ್ನು ಬದಲಾಯಿಸಲೂ ಬಯಸುವುದಿಲ್ಲ' ಎಂದು ಟೀಕಿಸಿದ್ದಾರೆ.

'ಕಾಂಗ್ರೆಸ್ ಪಕ್ಷವು ಒಂದೇ ಕುಟುಂಬವನ್ನು ವೈಭವೀಕರಿಸುವಲ್ಲಿ ನಿರತವಾಗಿದೆ. ಕಾಂಗ್ರೆಸ್ ಪಕ್ಷವು ಪ್ರಜಾಪ್ರಭುತ್ವವನ್ನು ಕುಟುಂಬ ವ್ಯವಸ್ಥೆಯಾಗಿ ಪರಿವರ್ತಿಸಿದೆ. ಇದು ಭಾರತದಲ್ಲಿ ಭ್ರಷ್ಟ ವ್ಯವಸ್ಥೆಯನ್ನು ಪೋಷಿಸುತ್ತಲೇ ಇದೆ. ಬಡವರು ಯಾವಾಗಲೂ ಸಹಾಯ ಹಸ್ತ ಚಾಚಬೇಕು ಎನ್ನುವಂತಹ ವ್ಯವಸ್ಥೆಯನ್ನು ಕಾಂಗ್ರೆಸ್ ಹುಟ್ಟು ಹಾಕಿದೆ. ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ದೇಶದ ಜನರನ್ನು ಬಡವರನ್ನಾಗಿ ಮಾಡಿದೆ' ಎಂದು ಮೋದಿ ಹೇಳಿದ್ದಾರೆ.
'ಕಾಂಗ್ರೆಸ್ಗೆ ದೇಶದ ಹಿತಾಸಕ್ತಿಯನ್ನು ನೋಡುವ ಅಥವಾ ಅರ್ಥಮಾಡಿಕೊಳ್ಳುವ ಸಾಮರ್ಥ್ಯವಿಲ್ಲ. ಅದಕ್ಕಾಗಿಯೇ ಅಭಿವೃದ್ಧಿ ಹೊಂದಿದ ಭಾರತಕ್ಕೆ ಸಂಬಂಧಿಸಿದ ಪ್ರತಿಯೊಂದು ಯೋಜನೆಯನ್ನು ಅದು ಟೀಕಿಸುತ್ತಿದೆ' ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯುವಕರು, ಬಡವರು, ಮಹಿಳೆಯರು ಹಾಗೂ ಮೊದಲ ಬಾರಿಯ ಮತದಾರರು ಕಾಂಗ್ರೆಸ್ ಮತಹಾಕದಂತೆ ಪ್ರಧಾನಿ ಮೋದಿ ಮನವಿ ಮಾಡಿಕೊಂಡಿದ್ದಾರೆ.
'50 ವರ್ಷಗಳ ಹಿಂದೆ ಗರೀಬಿ ಹಠಾವೋ ಎಂಬ ಘೋಷಣೆಯನ್ನು ಮಾಡಿದವರು ಯಾರು? ಕಾಂಗ್ರೆಸ್ ತನ್ನ ಭರವಸೆಯನ್ನು ಈಡೇರಿಸಿದೆಯೇ?' ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.
ನಾನು ನಿಮಗೆ ಇನ್ನೊಂದು ಅಂಕಿಅಂಶವನ್ನು ಹೇಳಲು ಬಯಸುತ್ತೇನೆ. ಕೇವಲ 5 ವರ್ಷಗಳ ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶದಲ್ಲಿ 130 ಮಿಲಿಯನ್ ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ಅವರು ಹೇಳಿದ್ದಾರೆ.

'ಇದು ಮೋದಿಯ ಭರವಸೆಯ ಫಲಿತಾಂಶ. ಮೋದಿ ಭರವಸೆ ನೀಡಿದಾಗ ಮತ್ತು ಬಿಜೆಪಿ ಭರವಸೆ ನೀಡಿದಾಗ ಅದು ಪ್ರತಿ ಮನೆ ಮತ್ತು ಪ್ರತಿ ಫಲಾನುಭವಿಗೆ ತಲುಪುತ್ತದೆ. ನೆನಪಿಡಿ, ಮೋದಿ ಎಂದರೆ ಪ್ರತಿಯೊಂದು ಗ್ಯಾರಂಟಿ ಈಡೇರಿಸುವ ಗ್ಯಾರಂಟಿ' ಎಂದು ಅವರು ತಿಳಿಸಿದ್ದಾರೆ.
'ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರವು ಎರಡು ದಶಕಗಳನ್ನು ಪೂರೈಸಿದೆ. ಪ್ರಥಮ ಬಾರಿಗೆ ಮತ ಹಾಕಲಿರುವ ಯುವಕರು ಬಿಜೆಪಿ ಸರಕಾರವನ್ನು ಮಾತ್ರ ನೋಡಿದ್ದಾರೆ. ಈ ಯುವಕರು ಕಾಂಗ್ರೆಸ್ನ ಕೆಟ್ಟ ಆಡಳಿತ ಮತ್ತು ದುಷ್ಕೃತ್ಯಗಳನ್ನು ನೋಡದಿರುವುದು ಅದೃಷ್ಟ' ಎಂದೂ ಅವರು ಪ್ರತಿಪಾದಿಸಿದ್ದಾರೆ.
'ಸ್ವಾತಂತ್ರ್ಯದ ನಂತರ, ಮಧ್ಯಪ್ರದೇಶವನ್ನು ಕಾಂಗ್ರೆಸ್ ದೀರ್ಘಕಾಲ ಆಳಿತು. ಆದರೆ, ಇದು ಸಂಪನ್ಮೂಲಗಳಿಂದ ಸಮೃದ್ಧವಾಗಿರುವ ಮಧ್ಯಪ್ರದೇಶವನ್ನು ಬಿಮಾರು ಮಧ್ಯಪ್ರದೇಶವನ್ನಾಗಿ ಪರಿವರ್ತಿಸಿತು' ಎಂದು ಅವರು ಆರೋಪಿಸಿದ್ದಾರೆ.
'ರಾಜಸ್ಥಾನದಲ್ಲಿ ಅವರಿಗೆ ಅವಕಾಶ ಸಿಕ್ಕಿತು. ಕಾಂಗ್ರೆಸ್ ಅಲ್ಲಿ ಹೇಗೆ ವಿನಾಶವನ್ನು ತಂದಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ' ಎಂದು ಹೇಳಿದ್ದಾರೆ.
'ಕಾಂಗ್ರೆಸ್ ವಂಶಾಡಳಿತ ಪಕ್ಷ, ಸಾವಿರಾರು ಕೋಟಿ ಹಗರಣಗಳ ಇತಿಹಾಸವನ್ನು ಸೃಷ್ಟಿಸಿದ ಪಕ್ಷ, ವೋಟ್ ಬ್ಯಾಂಕ್ ಅನ್ನು ಸಮಾಧಾನಪಡಿಸುವ ಪಕ್ಷವಾಗಿದೆ. ಅದಕ್ಕೆ ಸಣ್ಣದೊಂದು ಅವಕಾಶ ಸಿಕ್ಕರೆ ಮಧ್ಯಪ್ರದೇಶವು ದೊಡ್ಡ ನಷ್ಟವನ್ನು ಅನುಭವಿಸುತ್ತದೆ' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications