ಭಾರತ್ ಜೋಡೋ ಭದ್ರತೆಯಲ್ಲಿ ಲೋಪ: ಸೂಕ್ತ ಭದ್ರತೆ ನೀಡುವಂತೆ ಅಮಿತ್ ಶಾಗೆ ಕಾಂಗ್ರೆಸ್ ಪತ್ರ
ನವದೆಹಲಿ, ಡಿ. 28: ಭಾರತ್ ಜೋಡೋ ಯಾತ್ರೆಯ ಭದ್ರತೆಯಲ್ಲಿ ಹಲವು ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಬುಧವರಾ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಪಕ್ಷದ ನಾಯಕ ರಾಹುಲ್ ಗಾಂಧಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿದೆ.
ಶನಿವಾರ ದೆಹಲಿ ಪ್ರವೇಶಿಸಿದ ನಂತರ ಭಾರತ್ ಜೋಡೋ ಯಾತ್ರೆಯ ಭದ್ರತೆಯಲ್ಲಿ ಹಲವು ಬಾರಿ ರಾಜಿ ಮಾಡಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ದೆಹಲಿ ಪೊಲೀಸರು, "ಝಡ್ + ಭದ್ರತೆಯನ್ನು ನಿಯೋಜಿಸಲಾಗಿರುವ ರಾಹುಲ್ ಗಾಂಧಿ ಅವರ ಸುತ್ತಲಿನ ಪರಿಧಿಯನ್ನು ನಿರ್ವಹಿಸುವಲ್ಲಿ ಮತ್ತು ಹೆಚ್ಚುತ್ತಿರುವ ಗುಂಪನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ" ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪರಿಸ್ಥಿತಿ ಹೇಗಾಗಿತ್ತು ಎಂದರೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ರಾಹುಲ್ ಗಾಂಧಿಯವರೊಂದಿಗೆ ನಡೆಯುತ್ತಿದ್ದ ಭಾರತ್ ಜೋಡೋ ಯಾತ್ರೆಯ ಪಾದಯಾತ್ರಿಗಳು ಭದ್ರತಾ ಪರಿಧಿಯನ್ನು ರಚಿಸಬೇಕಾಯಿತು. ಆದರೂ ದೆಹಲಿ ಪೊಲೀಸರು "ಮೂಕ ಪ್ರೇಕ್ಷಕರಾಗಿ" ಉಳಿದಿದ್ದರು ಎಂದು ಆರೋಪಿಸಿದ್ದಾರೆ.
ಪ್ರತಿಯೊಬ್ಬ ಭಾರತೀಯನಿಗೂ ದೇಶದಾದ್ಯಂತ ಯಾವುದೇ ಅಡೆತಡೆಯಿಲ್ಲದೆ ಸಂಚರಿಸುವ ಹಕ್ಕಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. "ಭಾರತ್ ಜೋಡೋ ಯಾತ್ರೆಯು ದೇಶಕ್ಕೆ ಶಾಂತಿ ಮತ್ತು ಸೌಹಾರ್ದತೆಯನ್ನು ತರುವ ಪಾದಯಾತ್ರೆಯಾಗಿದೆ. ಸರ್ಕಾರ ಸೇಡಿನ ರಾಜಕಾರಣ ಮಾಡಬಾರದು. ಕಾಂಗ್ರೆಸ್ ನಾಯಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸಬೇಕು ಎಂದು ಪತ್ರದಲ್ಲಿ ಹೇಳಲಾಗಿದೆ.
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದವರನ್ನು ಗುಪ್ತಚರ ಇಲಾಖೆ ವಿಚಾರಣೆ ನಡೆಸುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಹರಿಯಾಣದಲ್ಲಿ ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಮುನ್ನಡೆಸುತ್ತಿದೆ.
ದೇಶದ ಐಕ್ಯತೆಗಾಗಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಮಾಡಿದ ತ್ಯಾಗವನ್ನು ಉಲ್ಲೇಖಿಸಿ, ಪಕ್ಷವು ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರವನ್ನು ಪ್ರವೇಶಿಸುತ್ತಿದ್ದಂತೆ ಭಾರತ್ ಜೋಡೋ ಯಾತ್ರೆ ಮತ್ತು ರಾಹುಲ್ ಗಾಂಧಿಗೆ ಉತ್ತಮ ಭದ್ರತೆ ನೀಡಬೇಕು ಎಂದು ಕೋರಿದೆ.
ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ಯಾತ್ರೆಯನ್ನು ತಡೆಯಲು ಸಂಚು ನಡೆದಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯನ್ನು ರಾಹುಲ್ ಗಾಂಧಿ ಮುನ್ನಡೆಸುತ್ತಿದ್ದಾರೆ. ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಆರಂಭವಾದ ಯಾತ್ರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಗಿಯಲಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ












Click it and Unblock the Notifications