ಶ್ರಮಿಕ್ ರೈಲು ಸಂಚಾರ; ರೈಲ್ವೆ ಇಲಾಖೆ ಹೊಸ ಮಾರ್ಗಸೂಚಿ
ನವದೆಹಲಿ, ಮೇ 19 : ಲಾಕ್ ಡೌನ್ ಪರಿಣಾಮ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಶ್ರಮಿಕ್ ರೈಲಿನ ಮೂಲಕ ಕರೆದುಕೊಂಡು ಹೋಗಲಾಗುತ್ತಿದೆ. ಆದರೆ, ಈ ವಿಚಾರ ಈಗ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿಗೆ ಕಾರಣವಾಗಿದೆ.
ಮಂಗಳವಾರ ಕೇಂದ್ರ ರೈಲ್ವೆ ಸಚಿವಾಲಯ ಶ್ರಮಿಕ್ ರೈಲಿನ ಸಂಚಾರದ ವಿಚಾರದಲ್ಲಿ ಮಾರ್ಗಸೂಚಿಯನ್ನು ತಿದ್ದುಪಡಿ ಮಾಡಿದೆ. ಒಂದು ರಾಜ್ಯದ ಒಪ್ಪಿಗೆ ಸಿಕ್ಕರೆ ಶ್ರಮಿಕ್ ರೈಲು ಓಡಿಸಲಾಗುತ್ತದೆ ಎಂದು ಹೇಳಿದೆ.
ಒಂದು ರಾಜ್ಯ ಕಾರ್ಮಿಕರನ್ನು ವಾಪಸ್ ಕಳಿಸಲು ಶ್ರಮಿಕ್ ರೈಲು ಓಡಿಸಲು ಒಪ್ಪಿಗೆ ಕೇಳಿದರೆ ಕೆಲವೊಂದು ರಾಜ್ಯ ಒಪ್ಪಿಗೆ ಕೊಡುತ್ತಿರಲಿಲ್ಲ. ಆದ್ದರಿಂದ, ಕಾರ್ಮಿಕರಿಗೆ ತೊಂದರೆ ಉಂಟಾಗಿತ್ತು.

ಹೊಸ ಪರಿಷ್ಕೃತ ಮಾರ್ಗಸೂಚಿ ಪ್ರಕಾರ ಒಂದು ರಾಜ್ಯ ಕಾರ್ಮಿಕರನ್ನು ವಾಪಸ್ ಕಳಿಸಲು ಪಟ್ಟಿ ನೀಡಿದರೆ ಸಾಕು. ಆ ಪಟ್ಟಿಗೆ ಕಾರ್ಮಿಕರು ತಲುಪಬೇಕಾದ ರಾಜ್ಯದ ಒಪ್ಪಿಗೆ ಬೇಕಾಗಿಲ್ಲ. ಪಟ್ಟಿ ಕೊಟ್ಟ ರಾಜ್ಯದಿಂದ ರೈಲನ್ನು ಓಡಿಸಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
ಕೇಂದ್ರ ರೈಲ್ವೆ ಇಲಾಖೆಯೇ ರಾಜ್ಯದ ಜೊತೆ ಚರ್ಚೆ ಮಾಡಿ ಅಗತ್ಯವಾದ ಬೋಗಿಯ ಸಂಖ್ಯೆ, ನಿಲ್ದಾಣದ ವಿವರವನ್ನು ಅಂತಿಮಗೊಳಿಸಲಿದೆ. ರಾಜ್ಯ/ಕೇಂದ್ರಾಡಳಿತ ಪ್ರದೇಶಗಳು ಯಾವ ರಾಜ್ಯಕ್ಕೆ ಕಾರ್ಮಿಕರನ್ನು ವಾಪಸ್ ಕಳಿಸಬೇಕು ಎಂದು ರೈಲ್ವೆಗೆ ತಿಳಿಸಿದರೆ ಸಾಕು.
ಕಾರ್ಮಿಕರು ರೈಲು ಹತ್ತುವಾಗ ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು. ನಿಲ್ದಾಣದಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು ಎಂದು ರೈಲ್ವೆ ಇಲಾಖೆ ಹೊಸ ಮಾರ್ಗಸೂಚಿಯಲ್ಲಿ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.
-
Gold Price: ಸತತ 2ನೇ ದಿನವು ಬಂಗಾರದ ಬೆಲೆ ಭಾರೀ ಏರಿಕೆ, ದಾಖಲೆ ಬರೆದ ಬೆಳ್ಳಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
New Railway Line: 6000 ಕಿಮೀ ರೈಲ್ವೆ ಜಾಲ ವಿಸ್ತರಣೆ, 100 ಯೋಜನೆಗಳ ಜಾರಿಗೆ ₹1.53 ಲಕ್ಷ ಕೋಟಿ ಹೂಡಿಕೆ -
Gold Price Update: ಆಭರಣಪ್ರಿಯರೇ ಗಮನಿಸಿ, ಅಕ್ಷಯ ತೃತೀಯ ಮುನ್ನವೇ ಗಗನಕ್ಕೇರಿದ ಚಿನ್ನದ ದರ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ











Click it and Unblock the Notifications