ಸಂವಿಧಾನದಲ್ಲಿ 'ಜಾತ್ಯತೀತ', 'ಸಮಾಜವಾದಿ' ಪದ ಕುರಿತು ಅರ್ಜಿ ವಿಚಾರಣೆಗೆ ಸಮ್ಮತಿ
ನವದೆಹಲಿ, ಸಪ್ಟೆಂಬರ್ 03: ರಾಜ್ಯಸಭಾ ಮಾಜಿ ಸಂಸದ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಂವಿಧಾನದ ಪೀಠಿಕೆಯಲ್ಲಿನ "ಸಮಾಜವಾದಿ" ಮತ್ತು "ಜಾತ್ಯತೀತ" ಪದಗಳನ್ನು ಅಳಿಸಲು ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪಟ್ಟಿ ಮಾಡಿದೆ. ಈ ಮನವಿ ಸೆಪ್ಟೆಂಬರ್ 23 ರಂದು ಸಿಜೆಐ ಯುಯು ಲಲಿತ್ ಅವರ ಮುಂದೆ ವಿಚಾರಣೆಗೆ ಬರಲಿದೆ.
1976ರಲ್ಲಿ ಇಂದಿರಾ ಗಾಂಧಿ ಸರ್ಕಾರವು ತಂದ 42ನೇ ಸಾಂವಿಧಾನಿಕ ತಿದ್ದುಪಡಿಯ ಅಡಿಯಲ್ಲಿ ಸಂವಿಧಾನದ ಪೀಠಿಕೆಯಲ್ಲಿ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ಸೇರಿಸಲಾಗಿತ್ತು. ತಿದ್ದುಪಡಿಯು ಪೀಠಿಕೆಯಲ್ಲಿನ ಭಾರತದ ವಿವರಣೆಯನ್ನು "ಸಾರ್ವಭೌಮ, ಪ್ರಜಾಪ್ರಭುತ್ವ ಗಣರಾಜ್ಯ" ಎಂಬುದನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ ಗಣರಾಜ್ಯ ಎಂದು ಬರೆಯಲಾಗಿತ್ತು.
ಪೀಠಿಕೆಯು ಸಾಮಾನ್ಯ ಶಾಸನಕ್ಕೆ ಸಮಾನವಾಗಿಲ್ಲದ ಕಾರಣ ನೀತಿ ನಿರೂಪಕರು ಅದನ್ನು ಬದಲಾಯಿಸಲು ಅಥವಾ ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಸ್ವಾಮಿ ವಾದಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಎಂಎಂ ಸುಂದ್ರೇಶ್ ಅವರ ಪೀಠದ ಮುಂದೆ ಪಟ್ಟಿ ಮಾಡಲಾಗಿದೆ. ಸಿಜೆಐ ಅವರ ನ್ಯಾಯಾಲಯದಲ್ಲಿ ಇದೇ ರೀತಿಯ ಮನವಿಯನ್ನು ಪರಿಗಣಿಸಿ, ತಮ್ಮ ಆದೇಶದಲ್ಲಿ ಪೀಠವು ಹೀಗೆ ಹೇಳಿದೆ. ಪ್ರತ್ಯಕ್ಷವಾಗಿ ಹಾಜರಾಗುವ ಅರ್ಜಿದಾರರಾದ ಸುಬ್ರಮಣಿಯನ್ ಸ್ವಾಮಿ ಅವರು 2022 ರ ಡ್ಲ್ಯೂ ಪಿ.(ಸಿ) ಸಂಖ್ಯೆ 645 ರ ಒಂದೇ ರೀತಿಯ ರಿಟ್ ಅರ್ಜಿಯನ್ನು ಸಲ್ಲಿಸಿರುತ್ತಾರೆ. ಈ ನ್ಯಾಯಾಲಯದ ಮೊದಲ ಪೀಠದಲ್ಲಿ ಈ ರಿಟ್ ಅರ್ಜಿಯನ್ನು 2022ರ ರಿಟ್ ಅರ್ಜಿ (ಸಿ) ಸಂಖ್ಯೆ 645 ನೊಂದಿಗೆ ಸೇರಿಸಲಾಗಿದೆ ಎನ್ನಲಾಗಿದೆ.
ಪೀಠಿಕೆಯು ಸಂವಿಧಾನದ ಅಗತ್ಯ ಲಕ್ಷಣಗಳನ್ನು ಮಾತ್ರವಲ್ಲದೆ ಒಂದು ಏಕೀಕೃತ ಸಮಗ್ರ ಸಮುದಾಯವನ್ನು ರಚಿಸುವ ಆಶಯದೊಂದಿಗೆ ವಿವಿಧ ಗುಂಪುಗಳು ಮತ್ತು ಹಿತಾಸಕ್ತಿಗಳು ಸಂವಿಧಾನವನ್ನು ಅಳವಡಿಸಿಕೊಂಡ ಮೂಲಭೂತ ಪರಿಸ್ಥಿತಿಗಳನ್ನು ರೂಪಿಸಿದೆ. ಸಂವಿಧಾನದ ಮೂಲಭೂತ ರಚನೆಯ ಅವಿಭಾಜ್ಯ ಅಂಗವಾಗಿರುವ ನ್ಯಾಯಾಂಗ ವಿಮರ್ಶೆಯ ಪರಿಕಲ್ಪನೆ, ಧರ್ಮದ ಸ್ವಾತಂತ್ರ್ಯದ ಹಕ್ಕುಗಳಿಗೆ ಅಳವಡಿಕೆ ವಿರುದ್ಧವಾಗಿದೆ. ನಮ್ಮ ಸಂವಿಧಾನದ ಸೌಧವು ಹಲವಾರು ಆಧಾರಗಳ ಮೇಲೆ ನಿರ್ಮಿಸಲ್ಪಟ್ಟಿದೆ ಮತ್ತು ನಿಂತಿದೆ, ಅವುಗಳಲ್ಲಿ ಯಾವುದನ್ನಾದರೂ ತೆಗೆದುಹಾಕಿದರೆ ಸಂವಿಧಾನವು ಕುಸಿಯುತ್ತದೆ ಎಂದು ಸ್ವಾಮಿ ಅರ್ಜಿಯಲ್ಲಿ ತಿಳಿಸಿದ್ದಾರೆ. ಕೊನೆಯದಾಗಿ, ಸಂವಿಧಾನವು ಸಂಸತ್ತಿಗೆ ಸೀಮಿತ ತಿದ್ದುಪಡಿ ಅಧಿಕಾರವನ್ನು ನೀಡಿದೆ ಎಂದು ಸಲ್ಲಿಸಲಾಗಿದೆ. ಸಂಸತ್ತು ಆ ಸೀಮಿತ ಅಧಿಕಾರದ ಅಡಿಯಲ್ಲಿ ಆ ಅಧಿಕಾರವನ್ನು ಸಂಪೂರ್ಣ ಅಧಿಕಾರವಾಗಿ ವಿಸ್ತರಿಸಲು ಸಾಧ್ಯವಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಸಂವಿಧಾನದ ಪೀಠಿಕೆ ಅರ್ಜಿ ಜೊತೆ 2015 ರ ಉದ್ಯೋಗ ಹಗರಣದಲ್ಲಿ ಆರೋಪಿಗಳು ಉದ್ಯೋಗಾಕಾಂಕ್ಷಿಗಳಿಂದ ಲಂಚ ಪಡೆದ ಆರೋಪದಲ್ಲಿ ತಮಿಳುನಾಡಿನ ಹಾಲಿ ವಿದ್ಯುತ್ ಸಚಿವ ವಿ ಸೆಂಥಿಲ್ ಬಾಲಾಜಿ ಸೇರಿದಂತೆ ನಾಲ್ವರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶವನ್ನು ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಅಬ್ದುಲ್ ನಜೀರ್ ಮತ್ತು ವಿ ರಾಮಸುಬ್ರಮಣಿಯನ್ ಅವರಿದ್ದ ಪೀಠವು ಆದೇಶವನ್ನು ಕಾಯ್ದಿರಿಸಿದೆ.

ಜಾಮೀನು ರಹಿತ ವಾರಂಟ್: ಅರ್ಜಿ ವಿಚಾರಣೆಗೆ ಪಟ್ಟಿ
ಅಲ್ಲದೆ ಉನ್ನಾವೋ ಅತ್ಯಾಚಾರದ ಆರೋಪ ಎದುರಿಸುತ್ತಿರುವ ಆರೋಪಿಗಳಲ್ಲಿ ಒಬ್ಬನ ತಂದೆ ಸಲ್ಲಿಸಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಯುಪಿ ವಿಚಾರಣಾ ನ್ಯಾಯಾಲಯದಿಂದ ದೆಹಲಿಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಸಂಜೀವ್ ಖನ್ನಾ ಮತ್ತು ದಿನೇಶ್ ಮಾಹೇಶ್ವರಿ ಅವರ ಪೀಠದ ಮುಂದೆ ಉನ್ನಾವೊ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಹೊರಡಿಸಿದ ಜಾಮೀನು ರಹಿತ ವಾರಂಟ್ಗಳಿಗೆ ತಡೆಯಾಜ್ಞೆ ನೀಡುವಂತೆ ಸಂತ್ರಸ್ತೆ ಕೋರಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದಿನೇಶ್ ಮಹೇಶ್ವರಿ ಅವರ ಪೀಠದ ಮುಂದೆ ಪಟ್ಟಿ ಮಾಡಲಾಗಿದೆ.

ಸಂವಿಧಾನಕ್ಕೆ ತಿದ್ದುಪಡಿಯ ಅಗತ್ಯ
ಸಂಸ್ಕೃತವನ್ನು ರಾಷ್ಟ್ರೀಯ ಭಾಷೆಯನ್ನಾಗಿ ಘೋಷಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂಆರ್ ಷಾ ಮತ್ತು ಕೃಷ್ಣ ಮುರಾರಿ ಅವರ ಪೀಠವು ಭಾಷೆಯ ರಾಷ್ಟ್ರೀಯ ಸ್ಥಾನಮಾನವು ನೀತಿ ನಿರ್ಧಾರವಾಗಿದ್ದು, ಸಂವಿಧಾನಕ್ಕೆ ತಿದ್ದುಪಡಿಯ ಅಗತ್ಯವಿರುತ್ತದೆ ಎಂಬ ಅಂಶವನ್ನು ಒತ್ತಿಹೇಳಿದೆ.

ವಿ ದಿ ಸಿಟಿಜನ್ಸ್ ಎನ್ಜಿಒ ತನಿಖೆ ನಡೆಸಲು ಅನುಮತಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ಮತ್ತು ಸಿಖ್ಖರ ಉದ್ದೇಶಿತ ಹತ್ಯೆಗಳ ಬಗ್ಗೆ ಎಸ್ಐಟಿಯಿಂದ ತನಿಖೆ ನಡೆಸುವಂತೆ ಕೋರಿ ಕೇಂದ್ರ ಸರ್ಕಾರ ಮತ್ತು ಜಮ್ಮು ಕಾಶ್ಮೀರದ ಆಡಳಿತವನ್ನು ಸಂಪರ್ಕಿಸಲು "ವಿ ದಿ ಸಿಟಿಜನ್ಸ್" ಎಂಬ ಎನ್ಜಿಒಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸ್ವಾತಂತ್ರ್ಯ ನೀಡಿದೆ. "ಇದು ಸಂಪೂರ್ಣವಾಗಿ ಕಾರ್ಯನಿರ್ವಾಹಕರ ಸ್ಥಾನದಲ್ಲಿರುತ್ತದೆ ಎಂದು ಪೀಠ ಹೇಳಿದೆ.

ಹೈಕೋರ್ಟ್ಗಳ ಆಯ್ಕೆ ಅನುಮತಿಸಲಾಗಲ್ಲ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಚುನಾವಣಾ ಅರ್ಜಿಯನ್ನು ಪಶ್ಚಿಮ ಬಂಗಾಳದಿಂದ ಹೊರಕ್ಕೆ ವರ್ಗಾಯಿಸುವಂತೆ ಕೋರಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಹೈಕೋರ್ಟ್ಗೆ 'ತಪ್ಪು' ಸಂದೇಶವನ್ನು ಕಳುಹಿಸುವುದರಿಂದ ಹೈಕೋರ್ಟ್ಗಳ ಆಯ್ಕೆಯನ್ನು ಅನುಮತಿಸಲಾಗುವುದಿಲ್ಲ ಎಂದು ಪೀಠವು ಅಭಿಪ್ರಾಯಪಟ್ಟಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications