Get Updates
Get notified of breaking news, exclusive insights, and must-see stories!

Manipur Violence: 2 ರಾಷ್ಟ್ರಗಳ ಭಯೋತ್ಪಾದಕರೊಂದಿಗೆ ಸಂಚು: ಮಣಿಪುರದ ಶಂಕಿತನ ಬಂಧನ!

ನವದೆಹಲಿ ಸೆಪ್ಟೆಂಬರ್ 30: 2 ರಾಷ್ಟ್ರಗಳ ಭಯೋತ್ಪಾದಕರೊಂದಿಗೆ ಸಂಚು ನಡೆಸಿದ್ದಕ್ಕಾಗಿ ಮಣಿಪುರದ ಶಂಕಿತನನ್ನು ಬಂಧಿಸಲಾಗಿದೆ. ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನ ಭಯೋತ್ಪಾದಕರೊಂದಿಗೆ ಅಂತರಾಷ್ಟ್ರೀಯ ಸಂಚು ರೂಪಿಸಿದ ಪ್ರಕರಣದಲ್ಲಿ ಮಣಿಪುರದ ಬೆಟ್ಟದ ಜಿಲ್ಲೆ ಚುರಾಚಂದ್‌ಪುರದಲ್ಲಿ ಶಂಕಿತ ಭಯೋತ್ಪಾದಕನನ್ನು ದೇಶದ ಉನ್ನತ ಭಯೋತ್ಪಾದನಾ ನಿಗ್ರಹ ಸಂಸ್ಥೆ ಬಂಧಿಸಿದೆ. ಶಂಕಿತನನ್ನು ವಿಚಾರಣೆಗಾಗಿ ಮತ್ತು ಹೆಚ್ಚಿನ ತನಿಖೆಗಾಗಿ ದೆಹಲಿಗೆ ಕರೆತರಲಾಗಿದೆ.

ಅಷ್ಟೇ ಅಲ್ಲ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದಲ್ಲಿರುವ ಆತನ ಜಾಲವು ಮಣಿಪುರ ಬಿಕ್ಕಟ್ಟನ್ನು ಬಳಸಿಕೊಳ್ಳಲು ಪ್ರಯತ್ನಿಸಿದೆ ಎಂದು ಭಯೋತ್ಪಾದನಾ ವಿರೋಧಿ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಎಕ್ಸ್‌ (ಹಿಂದಿನ ಟ್ವಿಟರ್) ಪೋಸ್ಟ್‌ನಲ್ಲಿ ಭಯೋತ್ಪಾದಕ ಆರೋಪಿಯನ್ನು ಸೆಮಿನ್‌ಲುನ್ ಗ್ಯಾಂಗ್ಟೆ ಎಂದು ಹೇಳಿದ್ದು, ಈತ "ಮಣಿಪುರದಲ್ಲಿ ಅಶಾಂತಿ ಹಾಗೂ ಜನಾಂಗೀಯತೆಯನ್ನು ಬಳಸಿಕೊಳ್ಳುವ ಮೂಲಕ ಭಾರತದ ವಿರುದ್ಧ ಯುದ್ಧ ನಡೆಸಲು ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಸಂಘಟನೆಗಳ ನಾಯಕತ್ವದ ಪಿತೂರಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ" ಎಂದು ಎನ್‌ಐಎ ತಿಳಿಸಿದೆ.

manipur-suspect-arrested

ಜೂನ್ 22ರಂದು ಮಣಿಪುರದ ಕ್ವಾಕ್ಟಾದಲ್ಲಿ ವ್ಯಕ್ತಿಯೊಬ್ಬನನ್ನು ಕೊಂದ ಕಾರ್ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಸೆಮಿನ್‌ಲುನ್ ಗ್ಯಾಂಗ್ಟೆ ಎಂದು ಪೊಲೀಸ್ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ. ಜೂನ್ 22 ರಂದು ಸಣ್ಣ ಸೇತುವೆಯೊಂದರ ಬಳಿ ನಿಲ್ಲಿಸಲಾಗಿದ್ದ ಸ್ಕಾರ್ಪಿಯೋ ಎಸ್‌ಯುವಿ ಸ್ಫೋಟಗೊಂಡಿದ್ದು, ಹಿಂಸಾಚಾರದ ಗಂಭೀರತೆಗೆ ತಿರುಗಲು ಕಾರಣವಾಯಿತು. ದಾಳಿಯು ತರಬೇತಿ ಪಡೆದ ಭಯೋತ್ಪಾದಕರ ಕೈಗಳಿಂದ ನಡೆದಿತ್ತು ಎಂದು ಮೂಲಗಳು ಹೇಳಿದ್ದವು. ಆದರೆ ಗ್ಯಾಂಗ್ಟೆ ಯಾವ ಭಯೋತ್ಪಾದಕ ಗುಂಪಿಗೆ ಸೇರಿದವನು ಎಂದು ಎನ್‌ಐಎ ಹೇಳಿಲ್ಲ.

ಸುಮಾರು 25 ಕುಕಿ ದಂಗೆಕೋರ ಗುಂಪುಗಳು ಹೆಚ್ಚಾಗಿ ಚುರಾಚಂದ್‌ಪುರದಲ್ಲಿ ನೆಲೆಗೊಂಡಿವೆ. ಕೇಂದ್ರ, ರಾಜ್ಯ ಮತ್ತು ಮಿಲಿಟರಿಯೊಂದಿಗೆ ತ್ರಿಪಕ್ಷೀಯ ಕಾರ್ಯಾಚರಣೆಗಳ ಅಮಾನತು (SoO) ಒಪ್ಪಂದಕ್ಕೆ ಸಹಿ ಹಾಕಿವೆ. ಅದರ ಅಡಿಯಲ್ಲಿ ದಂಗೆಕೋರರು ಗೊತ್ತುಪಡಿಸಿದ ಶಿಬಿರಗಳಲ್ಲಿ ಉಳಿಯಬೇಕು ಮತ್ತು ಅವರ ಶಸ್ತ್ರಾಸ್ತ್ರಗಳನ್ನು ಮೇಲ್ವಿಚಾರಣೆಯಲ್ಲಿ ಇರಿಸಲಾಗುತ್ತದೆ. ಆದಾಗ್ಯೂ ಒಪ್ಪಂದಕ್ಕೆ ಸಹಿ ಹಾಕಿರುವ ಕೆಲವು ಗುಂಪುಗಳ ಬಂಡುಕೋರರು ಮಣಿಪುರ ಹಿಂಸಾಚಾರದಲ್ಲಿ ಭಾಗವಹಿಸುತ್ತಿದ್ದಾರೆ ಎಂಬ ಆರೋಪಗಳಿವೆ. ಜುಲೈನಲ್ಲಿ ಎನ್‌ಐಎ ತನ್ನದೇ ಆದ ಪ್ರಕರಣವನ್ನು ದಾಖಲಿಸಿತ್ತು.

ವಿವಿಧ ಜನಾಂಗೀಯ ಗುಂಪುಗಳ ನಡುವೆ ಬಿರುಕು ಮೂಡಿಸುವ ಮತ್ತು ಯುದ್ಧ ಮಾಡುವ ಉದ್ದೇಶದಿಂದ ಹಿಂಸಾಚಾರದ ಘಟನೆಗಳಲ್ಲಿ ಪಾಲ್ಗೊಳ್ಳಲು ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಗುಂಪುಗಳು ಭಾರತದಲ್ಲಿನ ಉಗ್ರಗಾಮಿ ನಾಯಕರ ಒಂದು ವಿಭಾಗದೊಂದಿಗೆ ಸಂಚು ರೂಪಿಸಿವೆ ಎಂದು ಭಾರತ ಸರ್ಕಾರ ತನಿಖೆಯಿಂದ ತಿಳಿದುಬಂದಿದೆ ಎಂದು ಎನ್ಐಎ ಇಂದು ಹೇಳಿಕೆಯಲ್ಲಿ ತಿಳಿಸಿದೆ.

ಈ ಉದ್ದೇಶಕ್ಕಾಗಿ ನಾಯಕತ್ವದ ಗುಂಪು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ರೀತಿಯ ಭಯೋತ್ಪಾದಕ ಯಂತ್ರಾಂಶಗಳನ್ನು ಖರೀದಿಸಲು ಹಣವನ್ನು ಒದಗಿಸುತ್ತಿದೆ. ಇವುಗಳನ್ನು ಗಡಿಯಾಚೆಯಿಂದ ಮತ್ತು ಪ್ರಸ್ತುತ ಜನಾಂಗೀಯತೆಯನ್ನು ಪ್ರಚೋದಿಸಲು ಈಶಾನ್ಯ ರಾಜ್ಯಗಳಲ್ಲಿ ಸಕ್ರಿಯವಾಗಿರುವ ಇತರ ಭಯೋತ್ಪಾದಕ ಸಂಘಟನೆಗಳಿಂದ ಪಡೆಯಲಾಗುತ್ತಿದೆ ಎಂದು ಎನ್‌ಐಎ ಹೇಳಿದೆ.

ಕಳೆದ ಒಂಬತ್ತು ದಿನಗಳಲ್ಲಿ ಮಣಿಪುರದಲ್ಲಿ ಬಂಧಿಸಲಾದ ಎರಡನೇ ಭಯೋತ್ಪಾದಕ ಶಂಕಿತ ಸೆಮಿನ್‌ಲುನ್ ಗ್ಯಾಂಗ್ಟೆ. ಸೆಪ್ಟೆಂಬರ್ 22 ರಂದು ಎನ್ಐಎ ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಯರಂಗತೇಮ್ ಆನಂದ್ ಸಿಂಗ್ ಅವರನ್ನು ಬಂಧಿಸಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+