Breaking: 4 ತಿಂಗಳ ಜೈಲು, 2,000 ದಂಡದ ತೀರ್ಪು, ಮಲ್ಯ ಬೇಸರ!
ನವದೆಹಲಿ, ಜುಲೈ 11: ಕಳೆದ 2017ರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಉದ್ಯಮಿ ವಿಜಯ್ ಮಲ್ಯ ಬೇಸರ ವ್ಯಕ್ತಪಡಿಸಿದ್ದಾರೆ.
Recommended Video
ಬ್ರಿಟನ್ನಲ್ಲೇ ಐದು ವರ್ಷಗಳಿಂದ ನೆಲೆಸಿರುವ ಮಾಜಿ ಕಿಂಗ್ಫಿಷರ್ ಏರ್ಲೈನ್ಸ್ ಮುಖ್ಯಸ್ಥ ವಿಜಯ್ ಮಲ್ಯಗೆ ಸೋಮವಾರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ನಾಲ್ಕು ತಿಂಗಳ ಜೈಲುಶಿಕ್ಷೆ ಮತ್ತು 2,000 ರೂಪಾಯಿ ನಗದು ದಂಡವನ್ನು ವಿಧಿಸಲಾಗಿತ್ತು.
ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ಉನ್ನತ ನ್ಯಾಯಾಲಯದ ಪೀಠವು ನೀಡಿದ ತೀರ್ಪಿನ ಬಗ್ಗೆ ಅವರು ಹೆಚ್ಚಿನ ಪ್ರತಿಕ್ರಿಯೆ ನೀಡಲಿಲ್ಲ.

"ನಾನು ಸ್ವಾಭಾವಿಕವಾಗಿ ನಿರಾಶೆಗೊಂಡಿದ್ದೇನೆ ಎಂದು ಹೇಳುವುದನ್ನು ಹೊರತುಪಡಿಸಿ ಭಾರತೀಯ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ನನಗೆ ಯಾವುದೇ ಪ್ರತಿಕ್ರಿಯೆ ಇಲ್ಲ," ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
9,000 ಕೋಟಿ ರೂಪಾಯಿ ವಂಚನೆ ಪ್ರಕರಣದ ಆರೋಪಿ: ಭಾರತೀಯ ಬ್ಯಾಂಕುಗಳಿಗೆ 9,000 ಕೋಟಿ ರೂಪಾಯಿ ಸಾಲ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ಮಲ್ಯ ಪ್ರಮುಖ ಆರೋಪಿ ಆಗಿದ್ದಾರೆ. ಕಳೆದ ಮಾರ್ಚ್ 10ರಂದು ಮಲ್ಯ ವಿರುದ್ಧದ ಪ್ರಕ್ರಿಯೆಯು ಒಂದು ಡೆಡ್ ವಾಲ್ ಎಂದು ಗಮನಿಸಿದ ಸುಪ್ರೀಂಕೋರ್ಟ್ ಈ ವಿಷಯದಲ್ಲಿ ತನ್ನ ಆದೇಶವನ್ನು ಕಾಯ್ದಿರಿಸಿತ್ತು.
ಕಳೆದ 2020 ರಲ್ಲಿ, ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ತನ್ನ ಮಕ್ಕಳಿಗೆ 40 ಮಿಲಿಯನ್ ಡಾಲರ್ ಅನ್ನು ವರ್ಗಾಯಿಸಿದ್ದಕ್ಕಾಗಿ 2017ರ ತೀರ್ಪಿನ ಮರು ಪರಿಶೀಲನೆಗಾಗಿ ವಿಜಯ್ ಮಲ್ಯ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.
ಅದೇ ರೀತಿ ಮಾರ್ಚ್ 2016 ರಿಂದ ಯುನೈಟೆಡ್ ಕಿಂಗ್ಡಮ್ನಲ್ಲಿ ವಾಸಿಸುತ್ತಿರುವ ಮಲ್ಯರನ್ನು, ಏಪ್ರಿಲ್ 18, 2017 ರಂದು ಸ್ಕಾಟ್ಲ್ಯಾಂಡ್ ಯಾರ್ಡ್ ಜಾರಿಗೊಳಿಸಿದ ಹಸ್ತಾಂತರ ವಾರಂಟ್ ಮೇಲೆ ಅನ್ನು ಬಂಧಿಸಲಾಗಿತ್ತು. ತದನಂತರ ಅವರು ಜಾಮೀನಿನ ಮೇಲೆ ಹೊರ ಬಂದಿದ್ದು, ಯುಕೆಯಲ್ಲೇ ಉಳಿದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications