Get Updates
Get notified of breaking news, exclusive insights, and must-see stories!

ಹಿಮಾಚಲದಲ್ಲಿ ಮುಂದುವರೆದ ಮಳೆ: ಕುಲು-ಮಂಡಿ ಹೆದ್ದಾರಿಯಲ್ಲಿ ಸಿಲುಕಿಕೊಂಡ ಪ್ರಯಾಣಿಕರು

ಹಿಮಾಚಲ ಪ್ರದೇಶದಲ್ಲಿ ಅರ್ಭಟಿಸಿದ ವರುಣ ಕೊಂಚ ಸಮಾಧಾನಗೊಂಡಿದ್ದಾನೆ. ಹಾಗಂತ ನೆಮ್ಮದಿಯಾಗಿ ಉಸಿರು ಬಿಡುವಂತಿಲ್ಲ. ಯಾಕೆಂದರೆ ಹಠಾತ್ ಪ್ರವಾಹ ಮತ್ತು ಭೂಕುಸಿತದ ನಡುವೆ ಸಾಧಾರಣದಿಂದ ಅಧಿಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.

ಗುರುವಾರವೂ ರಾಜ್ಯದ ವಿವಿಧೆಡೆ ನಿರಂತರ ಮಳೆ ಮುಂದುವರಿದಿದೆ. ಹಲವು ಪ್ರದೇಶಗಳಲ್ಲಿ ಭೂಕುಸಿತ, ಕಟ್ಟಡ ಕುಸಿತ ಉಂಟಾಗಿದೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ರಾಜ್ಯಕ್ಕೆ ಯಲ್ಲೋ ಅಲರ್ಟ್ ಘೋಷಿಸಿದ್ದು, ಸಾಧಾರಣದಿಂದ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.

Continued rains in Himachal: Commuters stranded on Kullu-Mandi highway

ಈ ಮಳೆ ಆಗಸ್ಟ್ 29 ರವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಸಂಸ್ಥೆ ತಿಳಿಸಿದೆ. ಅಧಿಕ ಮಳೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ, ಶಿಮ್ಲಾದ ಎಲ್ಲಾ ಶಾಲೆಗಳನ್ನು ಶುಕ್ರವಾರ ಮುಚ್ಚಲು ಅಧಿಕಾರಿಗಳು ಆದೇಶಿಸಿದ್ದಾರೆ.

ಕುಲ್ಲು-ಮಂಡಿ ಹೆದ್ದಾರಿಯಲ್ಲಿ ಸಿಲುಕಿದ ಪ್ರಯಾಣಿಕರು

ಭೂಕುಸಿತ, ರಸ್ತೆ ಕುಸಿತ, ಪ್ರವಾಹದಿಂದಾಗಿ ಹಿಮಾಚಲದಲ್ಲಿ ಹಲವಾರು ರಸ್ತೆಗಳನ್ನು ಬಂದ್ ಮಾಡಲಾಗಿದೆ. ಮಳೆಗೆ ಸಂಬಂಧಿತ ಘಟನೆಗಳಿಂದಾಗಿ ರಾಜ್ಯದಲ್ಲಿ 729 ರಸ್ತೆಗಳನ್ನು ಮುಚ್ಚಲಾಗಿದೆ ಮತ್ತು 2,897 ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳು ಹಾನಿಗೊಳಗಾಗಿದ್ದರಿಂದ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲ ಎಂದು ಪ್ರಧಾನ ಕಾರ್ಯದರ್ಶಿ (ಕಂದಾಯ) ಓಂಕಾರ್ ಚಂದ್ ಶರ್ಮಾ ಹೇಳಿದ್ದಾರೆ.

ಮಂಡಿಗೆ ಹೋಗುವ ರಸ್ತೆಯಲ್ಲಿ ಭೂಕುಸಿತ ಉಂಟಾಗಿ ನೂರಾರು ಪ್ರಯಾಣಿಕರು ಪರದಾಡುವಂತಾಗಿದೆ. ಭೂಕುಸಿತ ಪೀಡಿತ ಪ್ರದೇಶದ ಎರಡೂ ಬದಿಯಲ್ಲಿ ವಾಹನಗಳ ಸಾಲು ಕಂಡುಬಂದಿದೆ.

ಕಲ್ಲು-ಮಂಡಿ ಹೆದ್ದಾರಿಯಲ್ಲಿ ಸಿಲುಕಿರುವ ಜನರನ್ನು ಹೋಟೆಲ್‌ಗಳು, ವಿಶ್ರಾಂತಿ ಗೃಹಗಳು ಮತ್ತು ಪಾಂಡೋ, ಔಟ್ ಮತ್ತು ಬಜೌರಾದಲ್ಲಿನ ವಸತಿ ಗೃಹಗಳು ಹಾಗೂ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ಈ ತಿಂಗಳು ರಾಜ್ಯದಲ್ಲಿ ಭೂಕುಸಿತ ಮತ್ತು ಇತರ ಮಳೆ ಸಂಬಂಧಿತ ಘಟನೆಗಳಲ್ಲಿ 120 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ಸುಮಾರು 80 ಜನರು ಆಗಸ್ಟ್ 14 ರಿಂದ ಸಾವನ್ನಪ್ಪಿದ್ದಾರೆ. ಜೂನ್ 24 ರಂದು ಅಂದರೆ ಮುಂಗಾರು ಪ್ರಾರಂಭವಾದಾಗಿನಿಂದ ಒಟ್ಟು 242 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದಾರೆ. ರಾಜ್ಯವು ಇಲ್ಲಿಯವರೆಗೆ 12,000 ಕೋಟಿ ರೂಪಾಯಿ ನಷ್ಟವನ್ನು ಅನುಭವಿಸಿದೆ ಎಂದು ಮುಖ್ಯಮಂತ್ರಿ ಸುಖು ಗುರುವಾರ ಹೇಳಿದ್ದಾರೆ.

ಉತ್ತರಖಂಡದಲ್ಲೂ ಮಳೆ

ಉತ್ತರಾಖಂಡದ ತೆಹ್ರಿ ಜಿಲ್ಲೆಯ ಚಂಬಾದಲ್ಲಿ ಸೋಮವಾರ ಭೂಕುಸಿತ ಸಂಭವಿಸಿ ಇಬ್ಬರು ಮಹಿಳೆಯರು ಮತ್ತು 4 ತಿಂಗಳ ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರೆ, ಇಲ್ಲಿನ ಪೊಲೀಸ್ ಠಾಣೆ ಬಳಿಯ ಟ್ಯಾಕ್ಸಿ ಸ್ಟ್ಯಾಂಡ್‌ನಲ್ಲಿ ಜನರು ಕೆಲವು ವಾಹನಗಳಲ್ಲಿ ಸಿಲುಕಿದ್ದರು. ದೊಡ್ಡ ತೊಂದರೆಗಳ ನಂತರ ಸುರಕ್ಷಿತವಾಗಿ ಹೊರತೆಗೆಯಲಾಗಿದೆ.

ಭಾರೀ ಮಳೆಯಿಂದಾಗಿ ಇಂದು ತೆಹ್ರಿ ಜಿಲ್ಲೆಯ ಭಿಲಂಗಾನ, ಚಂಬಾ, ನರೇಂದ್ರ ನಗರ, ಜೌನ್‌ಪುರದಲ್ಲಿ 1 ರಿಂದ 12 ನೇ ತರಗತಿಯ ಎಲ್ಲಾ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ. ಮತ್ತೊಂದೆಡೆ ಡೆಹ್ರಾಡೂನ್, ಪೌರಿ, ನೈನಿತಾಲ್, ಚಂಪಾವತ್ ಮತ್ತು ಬಾಗೇಶ್ವರ್ ಸೇರಿದಂತೆ ರಾಜ್ಯದ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮುಂದುವರಿದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+