ಲೈಂಗಿಕ ಕಿರುಕುಳ ಆರೋಪ ಬಾಬಾ ಪರಮಾನಂದ ಬಂಧನ
ನವದೆಹಲಿ, ಮೇ 24: ವಿವಾದಿತ 'ದೇವ ಮಾನವ' ಬಾಬಾ ಪರಮಾನಂದ ಅವರನ್ನು ಮಂಗಳವಾರ ಬಂಧಿಸಲಾಗಿದೆ. ಬಾಬಾ ಪರಮಾನಂದ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊರೆಸಲಾಗಿದೆ.
ರಾಮ್ ಶಂಕರ್ ತಿವಾರಿ ಅಲಿಯಾಸ್ ಬಾಬಾ ಪರಮಾನಂದ್ ಅವರು ಮಹಿಳೆಯೊಬ್ಬರಿಗೆ ಮಗು ಕರುಣಿಸುವ ವಾಗ್ದಾನ ನೀಡಿ ಮಂಕುಬೂದಿ ಹಾಕಿದ್ದಾರೆ. ಬರಾಬಂಕಿಯಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. [ವಿವಾದದಲ್ಲೇ ಮುಳುಗೆದ್ದ ಟಾಪ್ 10 'ದೇವಮಾನವರು']

ಈ ಬಗ್ಗೆ ವರದಿ ಮಾಡಿರುವ ಜೀ ನ್ಯೂಸ್, ಬರಾಬಂಕಿ ಪೊಲೀಸರು ಬಾಬಾ ಪರಮಾನಂದ ಅವರ ಆಶ್ರಮದ ಮೇಲೆ ದಾಳಿ ನಡೆಸಿದ್ದಾರೆ. ಆಶ್ರಮದಲ್ಲಿ ಹಲವಾರು ಸಿಡಿ, ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಲವಾರು ಮಹಿಳೆಯರ ಅಶ್ಲೀಲ ವಿಡಿಯೋಗಳು, ಅಶ್ಲೀಲ ಸಾಹಿತ್ಯಗಳು, ಪೋರ್ನ್ ಸಿನಿಮಾಗಳ ರಾಶಿ ಸಿಕ್ಕಿದೆ.[ದೇವಮಾನವ ಸಾರಥಿ ಬಾಬಾ ಆಸ್ತಿ ಮೌಲ್ಯ ಎಷ್ಟು?]
ಪೊಲೀಸ್ ದಾಳಿಯ ಬಳಿಕ ನಾಪತ್ತೆಯಾಗಿದ್ದ ಬಾಬಾ ಪರಮಾನಂದನನ್ನು ಪೊಲೀಸರು ಮಧ್ಯಪ್ರದೇಶದ ಸತ್ನಾದಲ್ಲಿ ಮಂಗಳವಾರ ಬಂಧಿಸಿ, ವಿಚಾರಣೆ ನಡೆಸಿದ್ದಾರೆ.
ಈ ಹಿಂದೆ ಕೂಡಾ ಅನೇಕ ಮಹಿಳೆಯರು, ಬಾಬಾ ವಿರುದ್ಧ ದೂರು ನೀಡಿದ್ದರು. ಮಕ್ಕಳಿಲ್ಲದ ದಂಪತಿಗಳಿಗೆ ಮಗು ಕರುಣಿಸುವ ವಿಶೇಷ ಶಕ್ತಿ ಎಂದು ಬಾಬಾ ಎಲ್ಲೆಡೆ ಪ್ರಚಾರ ಪಡೆದಿದ್ದರು. ಬಾಬಾ ನಂಬಿ ಬಂದ ಭಕ್ತೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳಲಾಗುತ್ತಿತ್ತು. ಬಾಬಾ ವಿರುದ್ಧ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications