'ಕಲಾಂರನ್ನು ರಾಷ್ಟ್ರಪತಿ ಮಾಡಿದ್ದು ಮುಸ್ಲಿಮರ ಮತಕ್ಕಾಗಿ'
ನವದೆಹಲಿ, ಜು. 29: ಸದಾ ಗಡಿ ತಂಟೆಯಲ್ಲೇ ಮುಳುಗಿರುವ ಪಾಕಿಸ್ತಾನ ಅಗಲಿದ ಚೇತನ ಅಬ್ದುಲ್ ಕಲಾಂ ಅವರ ಸಾವಿನ ಸಂಬಂಧ ವಿವಾದಾತ್ಮಕ ಹೇಳಿಕೆ ನೀಡಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಕ್ಷಿಪಣಿ ಮಾನವ ಡಾ. ಎಪಿಜೆ ಅಬ್ದುಲ್ ಕಲಾಂ ಬಗ್ಗೆ ಪಾಕಿಸ್ತಾನ ಭೌತಶಾಸ್ತ್ರಜ್ಞ ಅಬ್ದುಲ್ ಖಾದಿರ್ ಖಾನ್ ಕೇವಲವಾಗಿ ಮಾತನಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ನಾಗರಿಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.[ಅಬ್ದುಲ್ ಕಲಾಂರ ಜೀವನ ಮತ್ತು ಸಾಧನೆ ಚಿತ್ರಗಳು]

ಕಲಾಂ ಒಬ್ಬ ಸಾಧಾರಣ ವಿಜ್ಞಾನಿ ಎಂದು ಬಿಬಿಸಿಗೆ ನೀಡಿರುವ ದೂರವಾಣಿ ಸಂದರ್ಶನದಲ್ಲಿ ಹೇಳಿದ್ದಾರೆ. ಕಲಾಂ ಅವರ ಹೆಸರು ಹೇಳಿದರೆ ಯಾವುದೇ ಅತ್ಯುನ್ನತ ಸಂಶೋಧನೆಗಳು ನೆನಪಿಗೆ ಬರುವುದಿಲ್ಲ ಎಂದು ಹೇಳಿರುವ ಖಾನ್ ಮೇಲೆ ಟ್ವಿಟ್ಟಿಗರು ಛೀಮಾರಿ ಹಾಕಿದ್ದಾರೆ.[ಮಿಸೈಲ್ ಮ್ಯಾನ್ ಕಲಾಂಗೆ ಗಣ್ಯರ ಅಂತಿಮ ನಮನ]
ಕಲಾಂ ಸರಳ ಜೀವನ ಅನುಸರಿಸಿಕೊಂಡು ಬಂದ ಸಾಮಾನ್ಯ ವಿಜ್ಞಾನಿ ಎಂದು ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ ಭಾರತದ ಮಿಸ್ಸೈಲ್ ಯೋಜನೆ ಕಾರ್ಯಗತವಾದದ್ದು ರಷ್ಯಾ ಸಹಕಾರದಿಂದ ಎಂದು ಖಾನ್ ಹೇಳಿಕೆ ನೀಡಿದ್ದರು.[ಕಲಾಂಗೆ ಅಂತಿಮ ನಮನದ ಚಿತ್ರಗಳು]
ಬಿಜೆಪಿ ಮುಸ್ಲಿಂ ಮತ ಬ್ಯಾಂಕ್ ನ ಪಡೆಯಲು ಕಲಾಂ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿತ್ತು. ಇದರಲ್ಲಿ ಬೇರೆ ಯಾವ ಉದ್ದೇಶಗಳು ಇರಲಿಲ್ಲ ಎಂಬ ಹೇಳಿಕೆಗೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗತೊಡಗಿದೆ.
ಖಾನ್ ಯಾರು?
ಅಬ್ದುಲ್ ಖಾದಿರ್ ಖಾನ್ ಪಾಕಿಸ್ತಾನದ ವಿವಾದಾತ್ಮಕ ಅಣು ವಿಜ್ಞಾನಿ. ಬಾಂಬ್ ತಯಾರಿಕೆ ತಂತ್ರಜ್ಞಾನದಲ್ಲಿ ಖಾನ್ ನಿಪುಣ. ಕೋರಿಯಾಕ್ಕೆ ಪಾಕಿಸ್ತಾನದ ಕೆಲ ರಹಸ್ಯ ಮಾಹಿತಿಗಳನ್ನು ಖಾನ್ ಬಿಟ್ಟುಕೊಟ್ಟಿದ್ದಾರೆ ಎಂದು 2004 ರಲ್ಲಿ ಆರೋಪ ಬಂದಿತ್ತು. ಈ ಸಂದರ್ಭ ಖಾನ್ ಅವರನ್ನು ಬಂಧಿಸಿ ಸರ್ಕಾರದ ಪ್ರಮುಖ ಹುದ್ದೆಯಿಂದ ವಜಾ ಮಾಡಲಾಗಿತ್ತು. ಆದರೆ 2009 ರಲ್ಲಿ ಇಸ್ಲಾಮಾಬಾದ್ ಹೈ ಕೋರ್ಟ್ ಖಾನ್ ನಿರ್ದೋಷಿ ಎಂದು ತೀರ್ಮಾನ ನೀಡಿತ್ತು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications